Homeಅಂತರಾಷ್ಟ್ರೀಯಕತ್ತಲೆ ತುಂಬಿದ ಬಡವರ ಬಾಳಲ್ಲಿ ಹೊಸ ಸೂರ್ಯನ ರೀತಿ ಉದಯಿಸಿದ ಯುವಕನ ಕುರಿತು...

ಕತ್ತಲೆ ತುಂಬಿದ ಬಡವರ ಬಾಳಲ್ಲಿ ಹೊಸ ಸೂರ್ಯನ ರೀತಿ ಉದಯಿಸಿದ ಯುವಕನ ಕುರಿತು…

- Advertisement -
- Advertisement -

ಕೆಲಸ ಮುಗಿಸಿ ಮನೆಗೆ ಹೋಗುವ ಧಾವಂತ, ಅಯ್ಯಪ್ಪ.. ಯಾವಾಗ ಮನೆ ಸೇರುತ್ತೇವೋ ಏನೋ, ಮನೆಗೆ ಹೋದ ಮೇಲೆ ಇಡೀ ದಿನ ರೆಸ್ಟ್ ಮಾಡಬೇಕು… ಮನೆ.. ಮನೆ.. ಮನೆ, ಲಕ್ಷ ಲಕ್ಷ ರೂ. ಸೇವ್ ಮಾಡಿ ಜನ ಕನಸಿನ ಮನೆ ಖರೀದಿ ಮಾಡುತ್ತಾರೆ. ಫ್ಲಾಟ್ ಖರೀದಿಸಿ, ಸುಂದರವಾದ ಮನೆ ನಿರ್ಮಿಸಿಕೊಳ್ಳುತ್ತಾರೆ. ಜೀವಮಾನದಲ್ಲಿ ದುಡಿದ ದುಡ್ಡನ್ನೆಲ್ಲಾ ಮನೆ ಕಟ್ಟಿಕೊಳ್ಳಲು ವೆಚ್ಚ ಮಾಡುತ್ತಾರೆ…

ಆದರೆ ಕೆಲವರಿಗೆ ಮನೆ ಅಂದರೆ ಹೀಗಿರುತ್ತಾ ಅನ್ನೋದನ್ನು ಕಲ್ಪಿಸಿಕೊಳ್ಳುವುದು ಸಹ ಕಷ್ಟಸಾಧ್ಯ. ಕಿತ್ತು ತಿನ್ನುವ ಬಡತನ, ಅನಾಥ ಬದುಕು, ಎಲ್ಲಿ ನಿಲ್ಲಲು ಜಾಗ ಸಿಗುತ್ತೋ ಅದೇ ಮನೆಯಾಗಿ ಬಿಡುತ್ತೆ. ಬಸ್ ನಿಲ್ದಾಣ, ರೈಲ್ವೇ ಸ್ಟೇಷನ್, ಅಂಗಡಿಗಳ ಮುಂದಿನ ಛಾವಣಿಯ ನೆರಳೇ ಮನೆ. ತಿನ್ನಲು ಆಹಾರವಿಲ್ಲದೇ, ಉಡಲು ಬಟ್ಟೆಯಿಲ್ಲದೇ, ಸ್ನಾನ ಮಾಡಲು ಶೌಚಗೃಹವಿಲ್ಲದೇ ಅದೆಷ್ಟು ದಿನಗಳ ಕಾಲ ಹಾಗೆಯೇ ಇದ್ದು ವ್ಯಥೆ ಪಡುವವರೂ ನಮ್ಮ ನಡುವೆಯೇ ಬದುಕುತ್ತಿದ್ದಾರೆ. ಇಂಥವರನ್ನು ಕಂಡು ಮಮ್ಮಲ ಮರುಗಿದ ಜೇಕ್ ಅಸ್ಟೀನ್ ಎಂಬಾತ ಮಾಡಿದ ಕೆಲಸವೀಗ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಮನೆಯಿಲ್ಲದೇ ಅಲೆಯುತ್ತಿದ್ದ ಜೇಕ್ ಅಸ್ಟೀನ್, ಹಲವು ಕಡೆಗಳಲ್ಲಿ ಸುತ್ತಾಡಿ, ಮನೆಯಿಲ್ಲದವರು, ಕಡುಬಡವರು, ಬೀದಿಬದಿಯಲ್ಲೇ ಅನಾಥವಾಗಿ ವಾಸಿಸುವವರನ್ನು ನೋಡಿದ್ದ. ಸೇಂಟ್ ಲೂಯಿಸ್, ಮಿಸೌರಿ ಏರಿಯಾಗಳಲ್ಲಿ ಸ್ನಾನಕ್ಕೂ ಗತಿಯಿಲ್ಲದೇ, ಕೆಲಸವೂ ಸಿಗದೇ ಒದ್ದಾಡುವವರ ಶೋಚನೀಯ ಸ್ಥಿತಿ ಕಂಡು ಮರುಗಿದ್ದ. ಇಂಥವರಿಗಾಗಿ ಏನಾದರೂ ಸಹಾಯ ಮಾಡಲೇಬೇಕೆಂದು ನಿರ್ಧರಿಸಿದ ಜೇಕ್, ಮೂರು ತಿಂಗಳವರೆಗೆ ಸ್ನಾನ ಮಾಡದಿರುವವರನ್ನು ಬರ್ಗರ್ ಮಾಡುವ ಕೆಲಸಕ್ಕೂ ತೆಗೆದುಕೊಳ್ಳದೇ ಇರುವುದನ್ನು ನೋಡಿದ್ದ.

ಹೀಗಾಗಿ ಮನುಷ್ಯನಿಗೆ ಹೊಸ ಬಟ್ಟೆ ಇರದಿದ್ದರೂ, ನಿತ್ಯವೂ ಸ್ನಾನ ಮಾಡುವಂಥ ವ್ಯವಸ್ಥೆ ಮಾಡಬೇಕು ಎಂದು ಆಲೋಚಿಸಿದ. ಬದಲಾವಣೆ ತರಲೇಬೇಕು ಎಂದು ತೀರ್ಮಾನಿಸಿ, ಮಿಸೌರಿ ನಗರದಲ್ಲಿ ’ಮೊಬೈಲ್ ಶವರ್ ಆನ್ ವ್ಹೀಲ್ಸ’ ಎಂಬ ಪ್ರಾಜೆಕ್ಟ್ ನ್ನು ರೆಡಿ ಮಾಡಿದ. 5 ಸಾವಿರ ಡಾಲರ್ ಗೆ ಹಳೆಯ ಟ್ರಕ್ ನ್ನು ಖರೀದಿಸಿ, ನವೀಕರಿಸಿದ. ತನ್ನ ಯೋಜನೆಗಾಗಿ ಆನ್ ಲೈನ್ ನಲ್ಲಿ ಸಂದೇಶ ಪೋಸ್ಟ್ ಮಾಡಿ, ಧನಿಕರಿಂದ ಹಣ ಸಹಾಯ ಪಡೆದುಕೊಂಡ. ಟ್ರಕ್ ನ ಸುತ್ತ ಮೊಬೈಲ್ ಶವರ್ ಯುನಿಟ್, ಶವರ್ ಯುನಿಟ್ ಟು ದಿ ಪೀಪಲ್ ( ಜನರಿಗಾಗಿ ಸ್ನಾನಗೃಹ) ಎಂದು ಬರೆಸಿದ. ಟ್ರಕ್ ಒಳಗೆ ಕೋಣೆಗಳನ್ನು ನಿರ್ಮಿಸಿ, ಸ್ನಾನಗೃಹಗಳನ್ನು ನಿರ್ಮಿಸಿದ. ಜತೆಗೆ ಸೋಪ್, ಟವೆಲ್ ಸೇರಿದಂತೆ ಬೇಕಾದ ಎಲ್ಲಾ ಸಾಮಗ್ರಿಗಳನ್ನೂ ಇರಿಸಿದ. ಸ್ವಚ್ಛ ಹಾಗೂ ಒಂದು ಕಡೆಯಿಂದ ಮತ್ತೊಂದು ಕಡೆ ಸಾಗಿಸಲು ಸಾಧ್ಯವಾಗುವಂತಹ ಸ್ನಾನದ ಕೋಣೆಗಳನ್ನು ನಿರ್ಮಿಸಿದ. ನಂತರ ಶವರ್ ಯುನಿಟ್ ಟ್ರಕ್ ಸಂಚಾರ ಆರಂಭಿಸಿತು. ಎಲ್ಲೆಲ್ಲಿ ಜನಕ್ಕೆ ಸ್ನಾನಗೃಹದ ಅವಶ್ಯಕತೆಯಿದೆಯೋ ಅಲ್ಲೆಲ್ಲಾ ಟ್ರಕ್ ಸಂಚಾರ ಮಾಡುತ್ತೆ. ಈಗ ದಿನಕ್ಕೆ 60 ಮಂದಿ ಶವರ್ ಯುನಿಟ್ ಬಳಕೆ ಮಾಡುತ್ತಿದ್ದಾರೆ.

ಶವರ್ ಟು ದಿ ಪೀಪಲ್ ಟ್ರಕ್ ಸೇವೆಯನ್ನು ಸಾಕಷ್ಟು ಜನ ಪಡೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೇಕ್ ಅವರ ಅದ್ಭುತ ಕಾರ್ಯದಿಂದ ತಾವು ಖುಷಿಯಾಗಿರುವುದಾಗಿ ಹೇಳುತ್ತಾರೆ. ತಮಗೆ ಸ್ನಾನ ಮಾಡಲು ಅವಕಾಶ ಮಾಡಿಕೊಟ್ಟಿರುವ ಜೇಕ್ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಜೇಕ್ ಇಂತಹ ಅವಕಾಶ ಕಲ್ಪಿಸದಿದ್ದರೆ, ತಮ್ಮ ಸ್ಥಿತಿ ಸುಧಾರಣೆ ಆಗುತ್ತಿರಲಿಲ್ಲ ಎಂದು ಕಣ್ಣೀರು ಹಾಕುತ್ತಾರೆ. ಟ್ರಕ್ ಒಳಗಡೆ, ಬಿಸಿನೀರು, ತಣ್ಣೀರಿನ ವ್ಯವಸ್ಥೆ, ಶೇವ್ ಮಾಡಿಕೊಳ್ಳಲು ಬೇಕಾದ ಸಾಮಗ್ರಿ, ಶಾಂಪೂ ಸೇರಿದಂತೆ ಎಲ್ಲವನ್ನೂ ಇರಿಸಲಾಗಿದೆ.

ಮನೆಯಿಲ್ಲದವರಿಗೆ ಸ್ನಾನ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿರುವ ಜೇಕ್ ಅಸ್ಟೀನ್ ತಮ್ಮ ಕಾರ್ಯದ ಬಗ್ಗೆ ಹೇಳುತ್ತಾರೆ. ‘ಮನೆಯಿಲ್ಲದವರು, ಕಡು ಬಡವರಿಗೆ ಊಟ, ಬಟ್ಟೆ ಸಿಕ್ಕೇ ಸಿಗುತ್ತದೆ. ಆದರೆ ಅವರಿಗೆ ಮೂರು ತಿಂಗಳಾದರೂ ಸ್ನಾನ ಮಾಡುವ ಅವಕಾಶ ಮಾತ್ರ ಸಿಗುವುದಿಲ್ಲ. ಹೀಗಾಗಿ ಅವರಿಗೆ ಯಾರೂ ಕೆಲಸ ಕೊಡುವುದಿಲ್ಲ. ಮನೆ ಹಾಗೂ ಕೆಲಸ ಎರಡೂ ಇಲ್ಲದೇ ಅವರ ಸ್ಥಿತಿ ಶೋಚನೀಯವಾಗಿರುತ್ತದೆ. ಇದನ್ನು ಕಂಡುಕೊಂಡ ಬಳಿಕ ಶವರ್ ಟು ದಿ ಪೀಪಲ್ ಶುರು ಮಾಡಿದೆ’ ಅಂತಾರೆ.

ಅಂದಹಾಗೇ ‘ಜನರಿಗೆ ಕೇವಲ ಸ್ವಚ್ಛತೆ ಹಾಗೂ ಸ್ನಾನದ ಅರಿವು ಮೂಡಿಸಲು ಮಾತ್ರ ನಾನು ಈ ಕೆಲಸ ಮಾಡುತ್ತಿಲ್ಲ. ಬದಲಿಗೆ ಜನರ ಜತೆಗಿನ ಬಾಂಧವ್ಯ ಹೆಚ್ಚಿಸಲು, ಮನುಷ್ಯನಿಗೆ ತಲುಪಬೇಕಾದ ಮೂಲಸೌಕರ್ಯ ಒದಗಿಸಲು, ಬೀದಿ ಬದಿ ಜೀವನದಿಂದ ಮುಕ್ತಗೊಳಿಸಲು ಮತ್ತು ಉತ್ತಮ ಸೇವೆ ನೀಡಲು ಈ ಕೆಲಸ ಮಾಡುತ್ತಿದ್ದೇನೆ. ನನ್ನ ಜತೆಗೆ ಅನೇಕ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಅವರೆಲ್ಲಾ ಸಾಕಷ್ಟು ಮಂದಿಗೆ ಶವರ್ ಟು ದಿ ಪೀಪಲ್ ಸೇವೆಯನ್ನು ತಲುಪಿಸಿದ್ದಾರೆ. ಚಾಲಕರಿಗೆ ಲೈಸೆನ್ಸ್ ನೀಡಲಾಗಿದ್ದು, ನೌಕರಿಯನ್ನೂ ಪಡೆದುಕೊಂಡಿದ್ದಾರೆ’ ಎಂದು ಹೇಳುತ್ತಾರೆ.

ಶವರ್ ಟು ದಿ ಪೀಪಲ್ ಸೇವೆಯನ್ನು ಮನೆ ಹೊಂದಿರದ ಜನರಿಗಾಗಿ ಮಾಡಲಾಗುತ್ತಿದೆ. ದಿನವೂ ಅವರು ಶುಚಿಯಾಗಿ, ಪ್ರೀತಿಯಿಂದ ಜೀವಿಸುವಂತೆ ಮಾಡುವ ಒಂದು ಪ್ರಯತ್ನವೂ ಇದೆ. ಮನೆಯಿಲ್ಲದ ಇವರಿಗೆ ಕುಟುಂಬದವರೂ ಇರುವುದಿಲ್ಲ. ಯಾರೂ ಸಹಾಯ ಮಾಡಲು ಮುಂದೆ ಬರುವುದಿಲ್ಲ. ನೋವಿಗೆ ಮಿಡಿಯುವ ಮನಸ್ಸುಗಳು ಮಾತ್ರ ಸ್ಪಂದಿಸಲು ಸಾಧ್ಯ, ಕತ್ತಲೆ ತುಂಬಿದ ಬಡವರ ಬಾಳಲ್ಲಿ ಹೊಸ ಸೂರ್ಯನ ಉದಯವಾಗಲು ಸಾಧ್ಯ ಅನ್ನೋದು ಜೇಕ್ ಅಭಿಪ್ರಾಯ.

ಅದೇನೇ ಇರಲಿ, ಬೀದಿ ಬದಿಯಲ್ಲಿರುವವರು, ಕೊಳೆ ಬಟ್ಟೆ ಧರಿಸಿ ಓಡಾಡುವವರು, ಕೆಲಸವಿಲ್ಲದೆ ಅಲೆಯುವವರ ಬಾಳಲ್ಲಿ ನಗು, ಪ್ರೀತಿ, ಜೀವನೋತ್ಸಾಹ ತುಂಬುತ್ತಿರುವ ಜೇಕ್ ಕಾರ್ಯ ಶ್ಲಾಘನೀಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...