Homeಕರ್ನಾಟಕಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ 'ಸುಳ್ಳು ಹರಡುತ್ತಿದೆ' - ಸಿದ್ದರಾಮಯ್ಯ ಕಿಡಿ

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡ ಅವರು, “ಸುಳ್ಳುಗಳನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಬೇಕಿದ್ದ 28,623 ಕೋಟಿ ರೂ. ಹಂಚಿಕೆಯಲ್ಲಿ ರಾಜ್ಯವು 11,760 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿರುವುದನ್ನು ಮುಚ್ಚಿಹಾಕಲು ಕೇಂದ್ರ ಸಚಿವ ಸೋಮಣ್ಣ ಸುಳ್ಳುಗಳನ್ನು ಹರಡುತ್ತಿದ್ದಾರೆ!” ಎಂದು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಜೆಎಂ (ರಾಜ್ಯದಲ್ಲಿ) ಒಟ್ಟು ಹಂಚಿಕೆ 49,262 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ.ಗಳಾಗಿದ್ದು, ರಾಜ್ಯದ ಪಾಲು 23,142 ಕೋಟಿ ರೂ.ಗಳಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಡುಗಡೆಯಾದ ಒಟ್ಟು ನಿಧಿ 32,202 ಕೋಟಿ ರೂ. ಆಗಿದ್ದು, ಇದರಲ್ಲಿ ಕೇಂದ್ರದ ಪಾಲು 11,760 ಕೋಟಿ ರೂ. (ಕೇಂದ್ರ ನೀಡಬೇಕಿದ್ದ ಅನುದಾನದ ಕೇವಲ 45%) ಮತ್ತು ರಾಜ್ಯದ ಪಾಲು 20,442 (ರಾಜ್ಯದ ಅನುದಾನ 88.3%) ಕೋಟಿ ರೂ. ಸೇರಿ ರಾಜ್ಯವು ಒಟ್ಟು ಮೊತ್ತ 29,413 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಕೇಂದ್ರ ಬಿಡುಗಡೆ ಮಾಡಿದ ಪ್ರತಿ ರೂಪಾಯಿಯನ್ನು ಕರ್ನಾಟಕ ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಮೋದಿ ಸರ್ಕಾರವು ಹಣವನ್ನು ನಿರ್ಬಂಧಿಸುತ್ತಲೇ ಇದೆ ಮತ್ತು ಕರ್ನಾಟಕಕ್ಕೆ ಅದರ ಸರಿಯಾದ ಪಾಲನ್ನು ನಿರಾಕರಿಸುತ್ತಿದೆ” ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಕೂಡಾ ಕೇಂದ್ರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರವು 3,804 ಕೋಟಿ ರೂ.ಗಳನ್ನು ಮಂಜೂರು ಮಾಡಿತು. ಆದರೆ ಬಿಡುಗಡೆ ಮಾಡಿದ್ದು ಕೇವಲ 570 ಕೋಟಿ ರೂ.ಗಳನ್ನಾಗಿದೆ. ಹಲವು ಪತ್ರಗಳನ್ನು ಬರೆದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ. ಮತ್ತೊಂದೆಡೆ ಕರ್ನಾಟಕವು ತನ್ನದೇ ಆದ ಬಜೆಟ್‌ನಿಂದ ಹಂಚಿಕೆ ಮಾಡಿದ 7,652 ಕೋಟಿ ರೂ.ಗಳಲ್ಲಿ 4,977 ಕೋಟಿ ರೂ.ಗಳನ್ನು ಈ ಯೋಜನೆಗೆ ಬಿಡುಗಡೆ ಮಾಡಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದು ಕೇವಲ ಕರ್ನಾಟಕ ಮಾತ್ರವಲ್ಲ — ಬಿಜೆಪಿಯ ವೈಫಲ್ಯ ರಾಷ್ಟ್ರೀಯ!” ಎಂದು ಅವರು ಹೇಳಿದ್ದಾರೆ.

2024-25ರ ಅವಧಿಯಲ್ಲಿ ಜೆಜೆಎಂನ ಬಜೆಟ್ ಅಂದಾಜುಗಳು 70,163 ಕೋಟಿ ರೂ.ಗಳಾಗಿದ್ದವು. ಪರಿಷ್ಕೃತ ಅಂದಾಜುಗಳನ್ನು ಕೇವಲ 22,694 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. “ನರೇಂದ್ರ ಮೋದಿ ಸರ್ಕಾರ ಜೆಜೆಎಂ ಅನ್ನು ವ್ಯವಸ್ಥಿತವಾಗಿ ಕೊಲ್ಲುತ್ತಿದೆ ಮತ್ತು ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಾಚಿಕೆಯಿಲ್ಲದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಜನರನ್ನು ದಾರಿ ತಪ್ಪಿಸುವ ಬದಲು, ಕರ್ನಾಟಕಕ್ಕೆ ಬರಬೇಕಾದ ನಿಧಿಯಿಂದ ಏಕೆ ನೀಡದೆ ವಂಚಿಸಲಾಗುತ್ತಿದೆ ಎಂದು ಸೋಮಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಬಿಜೆಪಿಯ ವಿಧ್ವಂಸಕ ಕೃತ್ಯದ ಹೊರತಾಗಿಯೂ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಫಲಿತಾಂಶಗಳನ್ನು ನೀಡುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿರುವಾಗ ಪ್ರತಿಯೊಂದು ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...