Homeಕರ್ನಾಟಕಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ 'ಸುಳ್ಳು ಹರಡುತ್ತಿದೆ' - ಸಿದ್ದರಾಮಯ್ಯ ಕಿಡಿ

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡ ಅವರು, “ಸುಳ್ಳುಗಳನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಬೇಕಿದ್ದ 28,623 ಕೋಟಿ ರೂ. ಹಂಚಿಕೆಯಲ್ಲಿ ರಾಜ್ಯವು 11,760 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿರುವುದನ್ನು ಮುಚ್ಚಿಹಾಕಲು ಕೇಂದ್ರ ಸಚಿವ ಸೋಮಣ್ಣ ಸುಳ್ಳುಗಳನ್ನು ಹರಡುತ್ತಿದ್ದಾರೆ!” ಎಂದು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಜೆಎಂ (ರಾಜ್ಯದಲ್ಲಿ) ಒಟ್ಟು ಹಂಚಿಕೆ 49,262 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ.ಗಳಾಗಿದ್ದು, ರಾಜ್ಯದ ಪಾಲು 23,142 ಕೋಟಿ ರೂ.ಗಳಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಡುಗಡೆಯಾದ ಒಟ್ಟು ನಿಧಿ 32,202 ಕೋಟಿ ರೂ. ಆಗಿದ್ದು, ಇದರಲ್ಲಿ ಕೇಂದ್ರದ ಪಾಲು 11,760 ಕೋಟಿ ರೂ. (ಕೇಂದ್ರ ನೀಡಬೇಕಿದ್ದ ಅನುದಾನದ ಕೇವಲ 45%) ಮತ್ತು ರಾಜ್ಯದ ಪಾಲು 20,442 (ರಾಜ್ಯದ ಅನುದಾನ 88.3%) ಕೋಟಿ ರೂ. ಸೇರಿ ರಾಜ್ಯವು ಒಟ್ಟು ಮೊತ್ತ 29,413 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಕೇಂದ್ರ ಬಿಡುಗಡೆ ಮಾಡಿದ ಪ್ರತಿ ರೂಪಾಯಿಯನ್ನು ಕರ್ನಾಟಕ ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಮೋದಿ ಸರ್ಕಾರವು ಹಣವನ್ನು ನಿರ್ಬಂಧಿಸುತ್ತಲೇ ಇದೆ ಮತ್ತು ಕರ್ನಾಟಕಕ್ಕೆ ಅದರ ಸರಿಯಾದ ಪಾಲನ್ನು ನಿರಾಕರಿಸುತ್ತಿದೆ” ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಕೂಡಾ ಕೇಂದ್ರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರವು 3,804 ಕೋಟಿ ರೂ.ಗಳನ್ನು ಮಂಜೂರು ಮಾಡಿತು. ಆದರೆ ಬಿಡುಗಡೆ ಮಾಡಿದ್ದು ಕೇವಲ 570 ಕೋಟಿ ರೂ.ಗಳನ್ನಾಗಿದೆ. ಹಲವು ಪತ್ರಗಳನ್ನು ಬರೆದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ. ಮತ್ತೊಂದೆಡೆ ಕರ್ನಾಟಕವು ತನ್ನದೇ ಆದ ಬಜೆಟ್‌ನಿಂದ ಹಂಚಿಕೆ ಮಾಡಿದ 7,652 ಕೋಟಿ ರೂ.ಗಳಲ್ಲಿ 4,977 ಕೋಟಿ ರೂ.ಗಳನ್ನು ಈ ಯೋಜನೆಗೆ ಬಿಡುಗಡೆ ಮಾಡಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದು ಕೇವಲ ಕರ್ನಾಟಕ ಮಾತ್ರವಲ್ಲ — ಬಿಜೆಪಿಯ ವೈಫಲ್ಯ ರಾಷ್ಟ್ರೀಯ!” ಎಂದು ಅವರು ಹೇಳಿದ್ದಾರೆ.

2024-25ರ ಅವಧಿಯಲ್ಲಿ ಜೆಜೆಎಂನ ಬಜೆಟ್ ಅಂದಾಜುಗಳು 70,163 ಕೋಟಿ ರೂ.ಗಳಾಗಿದ್ದವು. ಪರಿಷ್ಕೃತ ಅಂದಾಜುಗಳನ್ನು ಕೇವಲ 22,694 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. “ನರೇಂದ್ರ ಮೋದಿ ಸರ್ಕಾರ ಜೆಜೆಎಂ ಅನ್ನು ವ್ಯವಸ್ಥಿತವಾಗಿ ಕೊಲ್ಲುತ್ತಿದೆ ಮತ್ತು ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಾಚಿಕೆಯಿಲ್ಲದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಜನರನ್ನು ದಾರಿ ತಪ್ಪಿಸುವ ಬದಲು, ಕರ್ನಾಟಕಕ್ಕೆ ಬರಬೇಕಾದ ನಿಧಿಯಿಂದ ಏಕೆ ನೀಡದೆ ವಂಚಿಸಲಾಗುತ್ತಿದೆ ಎಂದು ಸೋಮಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಬಿಜೆಪಿಯ ವಿಧ್ವಂಸಕ ಕೃತ್ಯದ ಹೊರತಾಗಿಯೂ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಫಲಿತಾಂಶಗಳನ್ನು ನೀಡುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿರುವಾಗ ಪ್ರತಿಯೊಂದು ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...