Homeಕರ್ನಾಟಕಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ 'ಸುಳ್ಳು ಹರಡುತ್ತಿದೆ' - ಸಿದ್ದರಾಮಯ್ಯ ಕಿಡಿ

ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

- Advertisement -
- Advertisement -

ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡ ಅವರು, “ಸುಳ್ಳುಗಳನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಬೇಕಿದ್ದ 28,623 ಕೋಟಿ ರೂ. ಹಂಚಿಕೆಯಲ್ಲಿ ರಾಜ್ಯವು 11,760 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿರುವುದನ್ನು ಮುಚ್ಚಿಹಾಕಲು ಕೇಂದ್ರ ಸಚಿವ ಸೋಮಣ್ಣ ಸುಳ್ಳುಗಳನ್ನು ಹರಡುತ್ತಿದ್ದಾರೆ!” ಎಂದು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೆಜೆಎಂ (ರಾಜ್ಯದಲ್ಲಿ) ಒಟ್ಟು ಹಂಚಿಕೆ 49,262 ಕೋಟಿ ರೂ.ಗಳಾಗಿದ್ದು, ಇದರಲ್ಲಿ ಕೇಂದ್ರದ ಪಾಲು 26,119 ಕೋಟಿ ರೂ.ಗಳಾಗಿದ್ದು, ರಾಜ್ಯದ ಪಾಲು 23,142 ಕೋಟಿ ರೂ.ಗಳಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಡುಗಡೆಯಾದ ಒಟ್ಟು ನಿಧಿ 32,202 ಕೋಟಿ ರೂ. ಆಗಿದ್ದು, ಇದರಲ್ಲಿ ಕೇಂದ್ರದ ಪಾಲು 11,760 ಕೋಟಿ ರೂ. (ಕೇಂದ್ರ ನೀಡಬೇಕಿದ್ದ ಅನುದಾನದ ಕೇವಲ 45%) ಮತ್ತು ರಾಜ್ಯದ ಪಾಲು 20,442 (ರಾಜ್ಯದ ಅನುದಾನ 88.3%) ಕೋಟಿ ರೂ. ಸೇರಿ ರಾಜ್ಯವು ಒಟ್ಟು ಮೊತ್ತ 29,413 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಕೇಂದ್ರ ಬಿಡುಗಡೆ ಮಾಡಿದ ಪ್ರತಿ ರೂಪಾಯಿಯನ್ನು ಕರ್ನಾಟಕ ಸಂಪೂರ್ಣವಾಗಿ ಬಳಸಿಕೊಂಡಿದೆ. ಆದರೆ ಮೋದಿ ಸರ್ಕಾರವು ಹಣವನ್ನು ನಿರ್ಬಂಧಿಸುತ್ತಲೇ ಇದೆ ಮತ್ತು ಕರ್ನಾಟಕಕ್ಕೆ ಅದರ ಸರಿಯಾದ ಪಾಲನ್ನು ನಿರಾಕರಿಸುತ್ತಿದೆ” ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಕೂಡಾ ಕೇಂದ್ರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರವು 3,804 ಕೋಟಿ ರೂ.ಗಳನ್ನು ಮಂಜೂರು ಮಾಡಿತು. ಆದರೆ ಬಿಡುಗಡೆ ಮಾಡಿದ್ದು ಕೇವಲ 570 ಕೋಟಿ ರೂ.ಗಳನ್ನಾಗಿದೆ. ಹಲವು ಪತ್ರಗಳನ್ನು ಬರೆದರೂ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ. ಮತ್ತೊಂದೆಡೆ ಕರ್ನಾಟಕವು ತನ್ನದೇ ಆದ ಬಜೆಟ್‌ನಿಂದ ಹಂಚಿಕೆ ಮಾಡಿದ 7,652 ಕೋಟಿ ರೂ.ಗಳಲ್ಲಿ 4,977 ಕೋಟಿ ರೂ.ಗಳನ್ನು ಈ ಯೋಜನೆಗೆ ಬಿಡುಗಡೆ ಮಾಡಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಇದು ಕೇವಲ ಕರ್ನಾಟಕ ಮಾತ್ರವಲ್ಲ — ಬಿಜೆಪಿಯ ವೈಫಲ್ಯ ರಾಷ್ಟ್ರೀಯ!” ಎಂದು ಅವರು ಹೇಳಿದ್ದಾರೆ.

2024-25ರ ಅವಧಿಯಲ್ಲಿ ಜೆಜೆಎಂನ ಬಜೆಟ್ ಅಂದಾಜುಗಳು 70,163 ಕೋಟಿ ರೂ.ಗಳಾಗಿದ್ದವು. ಪರಿಷ್ಕೃತ ಅಂದಾಜುಗಳನ್ನು ಕೇವಲ 22,694 ಕೋಟಿ ರೂ.ಗಳಿಗೆ ಇಳಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. “ನರೇಂದ್ರ ಮೋದಿ ಸರ್ಕಾರ ಜೆಜೆಎಂ ಅನ್ನು ವ್ಯವಸ್ಥಿತವಾಗಿ ಕೊಲ್ಲುತ್ತಿದೆ ಮತ್ತು ಸೋಮಣ್ಣ ಅವರಂತಹ ಬಿಜೆಪಿ ನಾಯಕರು ನಾಚಿಕೆಯಿಲ್ಲದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಜನರನ್ನು ದಾರಿ ತಪ್ಪಿಸುವ ಬದಲು, ಕರ್ನಾಟಕಕ್ಕೆ ಬರಬೇಕಾದ ನಿಧಿಯಿಂದ ಏಕೆ ನೀಡದೆ ವಂಚಿಸಲಾಗುತ್ತಿದೆ ಎಂದು ಸೋಮಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. “ಬಿಜೆಪಿಯ ವಿಧ್ವಂಸಕ ಕೃತ್ಯದ ಹೊರತಾಗಿಯೂ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಫಲಿತಾಂಶಗಳನ್ನು ನೀಡುತ್ತಿದೆ. ಬಿಜೆಪಿ ನೇತೃತ್ವದ ಕೇಂದ್ರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಮುಂದುವರಿಸುತ್ತಿರುವಾಗ ಪ್ರತಿಯೊಂದು ಮನೆಗೆ ಸುರಕ್ಷಿತ ಕುಡಿಯುವ ನೀರನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  2018 ರಿಂದ 108 ಮಹಿಳೆಯರು,161 ಎಸ್‌ಸಿ, ಎಸ್‌ಟಿ, ಒಬಿಸಿಗಳು ನ್ಯಾಯಾಧೀಶರಾಗಿ ನೇಮಕ : ಕಾನೂನು ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...