Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...