Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...