Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...