Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...