Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...