Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...