Homeಕರ್ನಾಟಕವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ...

ವೈರಲ್‌ ಪೋಸ್ಟ್‌: ಕಣ್ಣಲ್ಲಿ ನೀರು ತರಿಸಿದ ನೆರೆಹೊರೆಯವರಿಗೆ ಜಲೀಲ್ ಮುಕ್ರಿ ಬರೆದ ಭಾವನಾತ್ಮಕ ಪತ್ರ…

- Advertisement -
- Advertisement -

ನೆರೆಮನೆಯ ಶಾಂತಮ್ಮ, ಎದುರು ಮನೆ ಅಣ್ಣು ಅಣ್ಣ, ಹಿಂಬದಿ ಮನೆ ಪೊರ್ಬುಲೇ… ನಮಸ್ಕಾರ…

ಮುಸಲ್ಮಾನರೆಂಬ ಏಕೈಕ ಕಾರಣಕ್ಕಾಗಿ ನಮ್ಮನ್ನು ದೇಶದಿಂದ ಹೊರ ಹಾಕುವ ಅಥವಾ ಡಿಟೆನ್ಷನ್ ಸೆಂಟರ್ ಗೆ ಹಾಕುವ ಹುನ್ನಾರ ನಡೀತಾ ಇರುವ ಬಗ್ಗೆ ನಿಮಗೆ ತಿಳಿದಿರಬಹುದು. ಇದರಿಂದ ಮುಸಲ್ಮಾನರಿಗೆ, ಹಿಂದುಗಳಿಗೆ ಏನೂ ಆಗುವುದಿಲ್ಲವೆಂದು ನಿಮ್ಮನ್ನು ನಂಬಿಸಿರಬಹುದು. ನೀವು ನೋಟ್ ಬ್ಯಾನ್, ಜಿಎಸ್ಟಿ, ಕಪ್ಪು ಹಣದಂತೆ ಇದನ್ನು ನಂಬಿರಲೂ ಬಹುದು. ಪರವಾಗಿಲ್ಲ ನಾನು ಹೋಗಲು ಸಿದ್ದನಿದ್ದೇನೆ. ಆದರೆ ನೀವು ನನ್ನನ್ನು ಹೋಗು ಎಂದರೆ ಮಾತ್ರ ಮರು ಮಾತಿಲ್ಲದೆ ನಿಮಗೆ ನಾನಿಲ್ಲದೆ ಸಂತೋಷ ,ನೆಮ್ಮದಿ ಮತ್ತಷ್ಟು ಹೆಚ್ಚು ಸಿಗುವುದಾದರೆ ಹೋಗಲು ಸಿದ್ದ. ಇದುವರೆಗೂ ಒಂದೇ ತಂದೆ ತಾಯಿಯ ಮಕ್ಕಳಂತೆ ಬದುಕಿದ್ದೇವೆ. ಸುಖ ದುಃಖ ಸಂತೋಷ ಸಂಭ್ರಮ ಹಂಚಿದ್ದೇವೆ. ನನ್ನ ನಿರ್ಗಮನದಿಂದ ನಿಮಗೆ ಮತ್ತಷ್ಟು ಸಂತೋಷ ಸಂಭ್ರಮ ಸಿಗುವುದಾದರೆ ಅದಕ್ಕಿಂತ ದೊಡ್ಡ ಪುಣ್ಯ ಮತ್ತೇನಿದೆ.

ಆದರೆ ಕುರ್ಚಿಗಾಗಿ, ಅಧಿಕಾರಕ್ಕಾಗಿ, ರಾಜಕೀಯದವರು ನನ್ನನ್ನು ಹೋಗಲು ಹೇಳಿದರೆ ಅದನ್ನು ಸ್ವೀಕರಿಸಲು ತಯಾರಿಲ್ಲ. ದೇಶದಲ್ಲಿ ಬದುಕಲು ಬಿಡದಿದ್ದರೂ ಸತ್ತು ದೇಶದ ಋಣ ತೀರಿಸುವೆ.
ನಿಮ್ಮೊಂದಿಗೆ ದ್ವೇಷ ಮಾಡಿ, ಪರಸ್ಪರ ನಾವು ವಿಭಜನೆಗೊಂಡು ಹೋಗಲು ನಾನು ಬಿಲ್ಕುಲ್ ಒಪ್ಪಲಾರೆ….

ನೀವು ಪ್ರೀತಿ ಪೂರ್ವಕ ಹೋಗು ಎಂದರೆ ಆ ಕ್ಷಣದಿಂದ ನಾನು ನಿಮ್ಮಿಂದ ದೂರ ಕಾಣದೂರಿಗೆ ಹೋಗಲು ತಯಾರಿದ್ದೇನೆ. ಜತೆ ಜತೆಯಲ್ಲಿ ಆಡಿ, ಹಾಡಿ ಬೆಳೆದ ನಾನು ಇಷ್ಟಾದರೂ ತ್ಯಾಗ ಮಾಡದಿದ್ದರೆ ನಾನು ಒಬ್ಬ ಮನುಷ್ಯನಾ?..

ಇನ್ನು ಪೌರತ್ವ ಕಾಯಿದೆ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಪದೇ ಪದೇ ಮನವರಿಕೆ ಮಾಡಿಯಾರು. ಆದರೆ ದೇವರ ಮೇಲೆ ಆಣೆ ಹಾಕಿ ಹೇಳುತ್ತೇನೆ ಇದರಿಂದ ನಮ್ಮ ನಡುವಿನ ಪ್ರೀತಿ, ವಾತ್ಸಲ್ಯ, ಸೌಹಾರ್ದ ಹಾಳಾಗುವುದಂತೂ ಖಂಡಿತಾ. ರಾಜಕೀಯ ಪಕ್ಷದವರಿಗೆ ಬೇಕಾದದ್ದು ಕೂಡ ಇದೆ. ಕಳೆದ ಹಲವು ದಶಕಗಳಿಂದ ನಾವು ಅನುಭವಿಸುತ್ತಾ ಬಂದಿದ್ದೇವೆ. ನಿಜ ತಾನೇ..

ಹುಟ್ಟಿದ ಮೇಲೆ ಸಾಯುವುದು ಶತಸಿದ್ದ. ಆದರೆ ಎಲ್ಲಿ ಹುಟ್ಟಬೇಕು, ಯಾವ ತಾಯಿಯ ಗರ್ಭದಲ್ಲಿ ಹುಟ್ಟಬೇಕು, ಯಾವ ಧರ್ಮದಲ್ಲಿ ಹುಟ್ಟಬೇಕು ಹಾಗೆಯೇ ಎಲ್ಲಿ ಸಾಯಬೇಕು, ಯಾವಾಗ ಸಾಯಬೇಕು ನಾವು ತೀರ್ಮಾನಿಸಲಿಲ್ಲ. ತೀರ್ಮಾನಿಸುವ ಹಕ್ಕು ನಮಗಿಲ್ಲ. ಅದು ದೇವನ ಇಚ್ಚೆ. ಅವನ ತೀರ್ಮಾನ. ಧರ್ಮಗಳು ಯಾವುದೇ ಇರಲಿ ಮನುಷ್ಯ ಧರ್ಮ ಮೊದಲು. ಆದರೆ ಬರಬರುತ್ತಾ ಸ್ವಾರ್ಥ ರಾಜಕಾರಣಿಗಳ ಮಂಕು ಮರಳು ಮಾತಿಗೆ ಬಲಿಯಾದೆವು. ಹರಕೆಯ ಕುರಿಯಾದೆವು. ನೂರಾರು ಘಟನೆಗಳು ಪುನರಾವರ್ತಿಸಿಯೂ ನಾವು ಮರಳಿ ಮನುಷ್ಯ ಧರ್ಮದತ್ತ, ಮನುಜ ಮತದತ್ತ ಮರಳಲಿಲ್ಲ. ಮರಳಲಾರದಷ್ಟು ದೂರ ನಾವು ಸಾಗಿ ಆಗಿದೆ.. ಏನೇ ಇರಲಿ ನಿಮ್ಮ ಪ್ರೀತಿ, ಸಹಕಾರ, ಆರ್ಥಿಕ ಸಹಾಯ, ನಿಮ್ಮ ಮಮತೆ ಎಂದೂ ಮರೆಯಲಾಗದು.

ಅದರ ಋಣ ತೀರಿಸಲೂ ಆಗದು. ನೀವು ಜಾತಿ ಧರ್ಮವನ್ನು ನೋಡದೆ ಜತೆ ಜತೆಯಾಗಿ ಒಂದೇ ಮನೆಯ ಕುಟುಂಬವಾಗಿ ಬದುಕಿದ ದಿನಗಳು ಮುಂದೆ ಮರೀಚಿಕೆಯಷ್ಟೇ. ಮತ್ತೊಮ್ಮೆ ನೀನು ಇಲ್ಲಿಂದ ಹೋಗು ಎಂದರೆ ಮಾತನಾಡದೇ ಉಟ್ಟ ಉಡುಗೆಯಲ್ಲಿ ಹೋಗಲು ನಾನು ತಯಾರು… ಆದರೆ ಸ್ವಾರ್ಥ ರಾಜಕಾರಣಿಗಳು ಹೇಳಿದರೆ ಬದುಕಲಾಗದಿದ್ದರೆ ಸಾಯಲು ನಾನು ತಯಾರು. ಬೀತಿಯಿಲ್ಲ,ಭಯವಿಲ್ಲ, ದೇಶವೇನು ಒಂದು ದಿನ ದೇಹವನ್ನೇ ಬಿಟ್ಟು ಹೋಗುವವರು…

ಅಂದು ನಾವು ನೆಟ್ಟು ಪೋಷಿಸಿದ ಸೌಹಾರ್ದ ಗಿಡ ಇಂದು ಮರವಾಗಿದೆ. ಇಂದು ಕಟುಕರು ಮರದ ಬುಡವ ಕತ್ತರಿಸಲು ಬಂದಿದ್ದಾರೆ. ಹೃದಯ ತುಂಡಾಗಿದೆ. ಮನಸ್ಸು ಮಲಿನಲಾಗಿದೆ..

ಸಂಜೆ ಆದಾಗ ಕಡಲಲ್ಲಿ ರವಿ ಮರೆಯಾದಂತೆ ನಿಮಗಾಗಿ ನಿಮ್ಮ ನೆನಪಲ್ಲಿ ನಾನೂ ಮರೆಯಾಗುತ್ತೇನೆ. ಕಡಲ ತೆರೆ ಶಾಂತವಾಗಿ ಸದಾ ನರ್ತಿಸುತ್ತಿರಲಿ. ಕೋಮುವಾದದ ಸುನಾಮಿಯಲ್ಲಿ ದೇಶ ಬರ್ಬಾದ್ ಆಗದಿರಲಿ. ಇದೇ ನನ್ನ ಪ್ರಾರ್ಥನೆ, ಇದೇ ನನ್ನ ಹಾರೈಕೆ. ಕೊನೆಗೂ ಒಂದು ವಿನಂತಿ…. ನನ್ನದು ಎನ್ನುವ ದೇಶದಲ್ಲಿ ನನ್ನ ಪುಟ್ಟ ಅರಮನೆಯೊಂದಿದೆ. ನಿಮಗೆ ಅಗತ್ಯವಿಲ್ಲದಿದ್ದರೆ ಅದನ್ನು ಬಡಬಗ್ಗರಿಗೆ, ಅಲೆಮಾರಿಗಳಿಗೆ, ರೋಡ್ ಸೈಡಲ್ಲಿ ಮಲಗುವವರಿಗೆ, ದರಿದ್ರರಿಗೆ ನೀಡಿಬಿಡಿ.

ಪ್ರೀತಿ ಸದಾ ಇರಲಿ.
ಜಲೀಲ್ ಮುಕ್ರಿ.

(ಜಲೀಲ್‌ ಮುಕ್ರಿಯವರ ಫೇಸ್‌ಬುಕ್‌ ಗೋಡೆಯಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...