Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...