Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...