Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...