Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...