Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...