Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....