Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...