Homeಮುಖಪುಟಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

ಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

- Advertisement -
- Advertisement -

ನ್ಯಾಷನಲ್ ಏರೋನಾಟಿಕ್ಸ್ & ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಸಂಸ್ಥೆಯ ಜೇಮ್ಸ್‌ ವೆಬ್ ಬಾಹ್ಯಾಕಾಶ ದೂರದರ್ಶಕವು ಕೋಟ್ಯಂತರ ಮೈಲುಗಳ ದೂರದಲ್ಲಿರುವ, ನಕ್ಷತ್ರಗಳು, ನೀಹಾರಿಕೆಗಳು, ವಿವಿಧ ಆಕಾಶಕಾಯಗಳ ಚಿತ್ರಗಳನ್ನು ಸೆರೆ ಹಿಡಿದಿದೆ.

ಅವುಗಳನ್ನು ನಾಸಾ ಬಿಡುಗಡೆ ಮಾಡಿದ್ದು, ಖಗೋಳವಿಜ್ಞಾನ ಕ್ಷೇತ್ರದ ಅದ್ವಿತೀಯ ಸಂಶೋಧನೆ ಎಂದೇ ಬಣ್ಣಿಸಲಾಗುತ್ತಿದೆ.

9 ಬಿಲಿಯನ್ ಡಾಲರ್‌‌ ಬೆಲೆಯ ದೂರದರ್ಶಕವನ್ನು ಕಳೆದ ವರ್ಷ ಡಿಸೆಂಬರ್ 25ರಂದು ಉಡಾಯಿಸಲಾಯಿತು. ಇದು ಒಂದು ತಿಂಗಳ ನಂತರ ಭೂಮಿಯಿಂದ ಸುಮಾರು 1 ಮಿಲಿಯನ್ ಮೈಲುಗಳಷ್ಟು ದೂರದ ಸೌರ ಕಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಯಿತು.

ಆಗ ತಾನೆ ಸೃಷ್ಟಿಯಾಗಿರುವ ನಕ್ಷತ್ರಗಳಲ್ಲಿ ಪ್ರಪಾತಗಳಂತೆ ಕಾಣುವ ರಚನೆಗಳ, ಲಯಬದ್ಧವಾಗಿ ‘ನೃತ್ಯ’ದಲ್ಲಿ ತೊಡಗಿರುವಂತೆ ಕಂಡುಬರುವ ತಾರೆಗಳ ಸಮೂಹದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದೆ.

‘ಬಾಹ್ಯಾಕಾಶ ದೂರದರ್ಶಕ ಕಳಿಸಿರುವ ಪ್ರತಿಯೊಂದು ಚಿತ್ರವೂ ಹೊಸ ಆವಿಷ್ಕಾರವೇ ಆಗಿದೆ. ಪ್ರತಿಯೊಂದು ಚಿತ್ರವು ಮಾನವರು ಕಾಣದ ಬ್ರಹ್ಮಾಂಡ ಕುರಿತ ಹೊಸ ನೋಟ ನೀಡುತ್ತದೆ’ ಎಂದು ನಾಸಾ ಆಡಳಿತಾಧಿಕಾರಿ ಬಿಲ್‌ ನೆಲ್ಸನ್‌ ಹೇಳಿದ್ದಾರೆ.

“ಓ ಗಾಡ್‌ನೆಸ್‌, ಇದು ಯಶಸ್ವಿಯಾಗಿದೆ. ನಾನು ಭಾವುಕಳಾಗಿದ್ದೇನೆ” ಎಂದು ನಾಸಾದ ಆಪರೇಷನ್ ಪ್ರಾಜೆಕ್ಟ್ ವಿಜ್ಞಾನಿ ಜೇನ್ ರಿಗ್ಬಿ ಹೇಳಿದ್ದಾರೆ.

‘ಚಿತ್ರಗಳು ಸುಂದರವಾಗಿವೆ. ವಿಜ್ಞಾನ ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿರುವ ಅಚ್ಚರಿಗಳನ್ನು ಅವು ತೋರುತ್ತವೆ. ನಾವು ಇನ್ನೂ ಗುರುತಿಸಲಾಗದ ಅನೇಕ ಸಂಗತಿಗಳನ್ನು ಈ ಚಿತ್ರಗಳು ಒಳಗೊಂಡಿವೆ’ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಬಾಹ್ಯಾಕಾಶವಿಜ್ಞಾನಿ ಜಾನ್‌ ಮಾಥರ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಬಿಡೆನ್ ಸೋಮವಾರ ವೆಬ್ ದೂರದರ್ಶಕದಿಂದ ಸೆರೆಹಿಡಿದ ಚಿತ್ರವನ್ನು ಪರಿಚಯಿಸಿದ್ದಾರೆ. ನಾಸಾ ಅಧಿಕಾರಿಗಳು ಮತ್ತು ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡವನ್ನು ಬಹಳ ಹತ್ತಿರದಿಂದ ತೆರೆದಿಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಕೂಡ ಯುಎಸ್ ಬಾಹ್ಯಾಕಾಶ ಸಂಸ್ಥೆ ಬಿಡುಗಡೆ ಮಾಡಿದ ಚಿತ್ರಗಳನ್ನು ತನ್ನ ಪರದೆಯ ಮೇಲೆ ಪ್ರಸಾರ ಮಾಡಿತು. ಸ್ಕ್ವೇರ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಚಿತ್ರಗಳನ್ನು ಹಂಚಿಕೊಂಡಿದೆ.

ಗೆಲಕ್ಸಿಗಳ ವಿಕಾಸ, ನಕ್ಷತ್ರಗಳ ಜೀವನ ಚಕ್ರ, ದೂರದ ಎಕ್ಸೋಪ್ಲಾನೆಟ್‌ಗಳ ವಾತಾವರಣ ಮತ್ತು ನಮ್ಮ ಸೌರವ್ಯೂಹದ ಚಂದ್ರಗಳ ಅನ್ವೇಷಣೆ ಸೇರಿದಂತೆ ಮೊದಲಾದ ಸಂಶೋಧನೆಗಳಿಗೆ ಈ ಚಿತ್ರಗಳು ಸಹಕಾರಿಯಾಗಲಿವೆ ಎನ್ನಲಾಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...