Homeಮುಖಪುಟಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

ಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

- Advertisement -
- Advertisement -

ನ್ಯಾಷನಲ್ ಏರೋನಾಟಿಕ್ಸ್ & ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಸಂಸ್ಥೆಯ ಜೇಮ್ಸ್‌ ವೆಬ್ ಬಾಹ್ಯಾಕಾಶ ದೂರದರ್ಶಕವು ಕೋಟ್ಯಂತರ ಮೈಲುಗಳ ದೂರದಲ್ಲಿರುವ, ನಕ್ಷತ್ರಗಳು, ನೀಹಾರಿಕೆಗಳು, ವಿವಿಧ ಆಕಾಶಕಾಯಗಳ ಚಿತ್ರಗಳನ್ನು ಸೆರೆ ಹಿಡಿದಿದೆ.

ಅವುಗಳನ್ನು ನಾಸಾ ಬಿಡುಗಡೆ ಮಾಡಿದ್ದು, ಖಗೋಳವಿಜ್ಞಾನ ಕ್ಷೇತ್ರದ ಅದ್ವಿತೀಯ ಸಂಶೋಧನೆ ಎಂದೇ ಬಣ್ಣಿಸಲಾಗುತ್ತಿದೆ.

9 ಬಿಲಿಯನ್ ಡಾಲರ್‌‌ ಬೆಲೆಯ ದೂರದರ್ಶಕವನ್ನು ಕಳೆದ ವರ್ಷ ಡಿಸೆಂಬರ್ 25ರಂದು ಉಡಾಯಿಸಲಾಯಿತು. ಇದು ಒಂದು ತಿಂಗಳ ನಂತರ ಭೂಮಿಯಿಂದ ಸುಮಾರು 1 ಮಿಲಿಯನ್ ಮೈಲುಗಳಷ್ಟು ದೂರದ ಸೌರ ಕಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಯಿತು.

ಆಗ ತಾನೆ ಸೃಷ್ಟಿಯಾಗಿರುವ ನಕ್ಷತ್ರಗಳಲ್ಲಿ ಪ್ರಪಾತಗಳಂತೆ ಕಾಣುವ ರಚನೆಗಳ, ಲಯಬದ್ಧವಾಗಿ ‘ನೃತ್ಯ’ದಲ್ಲಿ ತೊಡಗಿರುವಂತೆ ಕಂಡುಬರುವ ತಾರೆಗಳ ಸಮೂಹದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದೆ.

‘ಬಾಹ್ಯಾಕಾಶ ದೂರದರ್ಶಕ ಕಳಿಸಿರುವ ಪ್ರತಿಯೊಂದು ಚಿತ್ರವೂ ಹೊಸ ಆವಿಷ್ಕಾರವೇ ಆಗಿದೆ. ಪ್ರತಿಯೊಂದು ಚಿತ್ರವು ಮಾನವರು ಕಾಣದ ಬ್ರಹ್ಮಾಂಡ ಕುರಿತ ಹೊಸ ನೋಟ ನೀಡುತ್ತದೆ’ ಎಂದು ನಾಸಾ ಆಡಳಿತಾಧಿಕಾರಿ ಬಿಲ್‌ ನೆಲ್ಸನ್‌ ಹೇಳಿದ್ದಾರೆ.

“ಓ ಗಾಡ್‌ನೆಸ್‌, ಇದು ಯಶಸ್ವಿಯಾಗಿದೆ. ನಾನು ಭಾವುಕಳಾಗಿದ್ದೇನೆ” ಎಂದು ನಾಸಾದ ಆಪರೇಷನ್ ಪ್ರಾಜೆಕ್ಟ್ ವಿಜ್ಞಾನಿ ಜೇನ್ ರಿಗ್ಬಿ ಹೇಳಿದ್ದಾರೆ.

‘ಚಿತ್ರಗಳು ಸುಂದರವಾಗಿವೆ. ವಿಜ್ಞಾನ ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿರುವ ಅಚ್ಚರಿಗಳನ್ನು ಅವು ತೋರುತ್ತವೆ. ನಾವು ಇನ್ನೂ ಗುರುತಿಸಲಾಗದ ಅನೇಕ ಸಂಗತಿಗಳನ್ನು ಈ ಚಿತ್ರಗಳು ಒಳಗೊಂಡಿವೆ’ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಬಾಹ್ಯಾಕಾಶವಿಜ್ಞಾನಿ ಜಾನ್‌ ಮಾಥರ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಬಿಡೆನ್ ಸೋಮವಾರ ವೆಬ್ ದೂರದರ್ಶಕದಿಂದ ಸೆರೆಹಿಡಿದ ಚಿತ್ರವನ್ನು ಪರಿಚಯಿಸಿದ್ದಾರೆ. ನಾಸಾ ಅಧಿಕಾರಿಗಳು ಮತ್ತು ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡವನ್ನು ಬಹಳ ಹತ್ತಿರದಿಂದ ತೆರೆದಿಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಕೂಡ ಯುಎಸ್ ಬಾಹ್ಯಾಕಾಶ ಸಂಸ್ಥೆ ಬಿಡುಗಡೆ ಮಾಡಿದ ಚಿತ್ರಗಳನ್ನು ತನ್ನ ಪರದೆಯ ಮೇಲೆ ಪ್ರಸಾರ ಮಾಡಿತು. ಸ್ಕ್ವೇರ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಚಿತ್ರಗಳನ್ನು ಹಂಚಿಕೊಂಡಿದೆ.

ಗೆಲಕ್ಸಿಗಳ ವಿಕಾಸ, ನಕ್ಷತ್ರಗಳ ಜೀವನ ಚಕ್ರ, ದೂರದ ಎಕ್ಸೋಪ್ಲಾನೆಟ್‌ಗಳ ವಾತಾವರಣ ಮತ್ತು ನಮ್ಮ ಸೌರವ್ಯೂಹದ ಚಂದ್ರಗಳ ಅನ್ವೇಷಣೆ ಸೇರಿದಂತೆ ಮೊದಲಾದ ಸಂಶೋಧನೆಗಳಿಗೆ ಈ ಚಿತ್ರಗಳು ಸಹಕಾರಿಯಾಗಲಿವೆ ಎನ್ನಲಾಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...