Homeಮುಖಪುಟಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

ಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

- Advertisement -
- Advertisement -

ನ್ಯಾಷನಲ್ ಏರೋನಾಟಿಕ್ಸ್ & ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಸಂಸ್ಥೆಯ ಜೇಮ್ಸ್‌ ವೆಬ್ ಬಾಹ್ಯಾಕಾಶ ದೂರದರ್ಶಕವು ಕೋಟ್ಯಂತರ ಮೈಲುಗಳ ದೂರದಲ್ಲಿರುವ, ನಕ್ಷತ್ರಗಳು, ನೀಹಾರಿಕೆಗಳು, ವಿವಿಧ ಆಕಾಶಕಾಯಗಳ ಚಿತ್ರಗಳನ್ನು ಸೆರೆ ಹಿಡಿದಿದೆ.

ಅವುಗಳನ್ನು ನಾಸಾ ಬಿಡುಗಡೆ ಮಾಡಿದ್ದು, ಖಗೋಳವಿಜ್ಞಾನ ಕ್ಷೇತ್ರದ ಅದ್ವಿತೀಯ ಸಂಶೋಧನೆ ಎಂದೇ ಬಣ್ಣಿಸಲಾಗುತ್ತಿದೆ.

9 ಬಿಲಿಯನ್ ಡಾಲರ್‌‌ ಬೆಲೆಯ ದೂರದರ್ಶಕವನ್ನು ಕಳೆದ ವರ್ಷ ಡಿಸೆಂಬರ್ 25ರಂದು ಉಡಾಯಿಸಲಾಯಿತು. ಇದು ಒಂದು ತಿಂಗಳ ನಂತರ ಭೂಮಿಯಿಂದ ಸುಮಾರು 1 ಮಿಲಿಯನ್ ಮೈಲುಗಳಷ್ಟು ದೂರದ ಸೌರ ಕಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಯಿತು.

ಆಗ ತಾನೆ ಸೃಷ್ಟಿಯಾಗಿರುವ ನಕ್ಷತ್ರಗಳಲ್ಲಿ ಪ್ರಪಾತಗಳಂತೆ ಕಾಣುವ ರಚನೆಗಳ, ಲಯಬದ್ಧವಾಗಿ ‘ನೃತ್ಯ’ದಲ್ಲಿ ತೊಡಗಿರುವಂತೆ ಕಂಡುಬರುವ ತಾರೆಗಳ ಸಮೂಹದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದೆ.

‘ಬಾಹ್ಯಾಕಾಶ ದೂರದರ್ಶಕ ಕಳಿಸಿರುವ ಪ್ರತಿಯೊಂದು ಚಿತ್ರವೂ ಹೊಸ ಆವಿಷ್ಕಾರವೇ ಆಗಿದೆ. ಪ್ರತಿಯೊಂದು ಚಿತ್ರವು ಮಾನವರು ಕಾಣದ ಬ್ರಹ್ಮಾಂಡ ಕುರಿತ ಹೊಸ ನೋಟ ನೀಡುತ್ತದೆ’ ಎಂದು ನಾಸಾ ಆಡಳಿತಾಧಿಕಾರಿ ಬಿಲ್‌ ನೆಲ್ಸನ್‌ ಹೇಳಿದ್ದಾರೆ.

“ಓ ಗಾಡ್‌ನೆಸ್‌, ಇದು ಯಶಸ್ವಿಯಾಗಿದೆ. ನಾನು ಭಾವುಕಳಾಗಿದ್ದೇನೆ” ಎಂದು ನಾಸಾದ ಆಪರೇಷನ್ ಪ್ರಾಜೆಕ್ಟ್ ವಿಜ್ಞಾನಿ ಜೇನ್ ರಿಗ್ಬಿ ಹೇಳಿದ್ದಾರೆ.

‘ಚಿತ್ರಗಳು ಸುಂದರವಾಗಿವೆ. ವಿಜ್ಞಾನ ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿರುವ ಅಚ್ಚರಿಗಳನ್ನು ಅವು ತೋರುತ್ತವೆ. ನಾವು ಇನ್ನೂ ಗುರುತಿಸಲಾಗದ ಅನೇಕ ಸಂಗತಿಗಳನ್ನು ಈ ಚಿತ್ರಗಳು ಒಳಗೊಂಡಿವೆ’ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಬಾಹ್ಯಾಕಾಶವಿಜ್ಞಾನಿ ಜಾನ್‌ ಮಾಥರ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಬಿಡೆನ್ ಸೋಮವಾರ ವೆಬ್ ದೂರದರ್ಶಕದಿಂದ ಸೆರೆಹಿಡಿದ ಚಿತ್ರವನ್ನು ಪರಿಚಯಿಸಿದ್ದಾರೆ. ನಾಸಾ ಅಧಿಕಾರಿಗಳು ಮತ್ತು ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡವನ್ನು ಬಹಳ ಹತ್ತಿರದಿಂದ ತೆರೆದಿಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಕೂಡ ಯುಎಸ್ ಬಾಹ್ಯಾಕಾಶ ಸಂಸ್ಥೆ ಬಿಡುಗಡೆ ಮಾಡಿದ ಚಿತ್ರಗಳನ್ನು ತನ್ನ ಪರದೆಯ ಮೇಲೆ ಪ್ರಸಾರ ಮಾಡಿತು. ಸ್ಕ್ವೇರ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಚಿತ್ರಗಳನ್ನು ಹಂಚಿಕೊಂಡಿದೆ.

ಗೆಲಕ್ಸಿಗಳ ವಿಕಾಸ, ನಕ್ಷತ್ರಗಳ ಜೀವನ ಚಕ್ರ, ದೂರದ ಎಕ್ಸೋಪ್ಲಾನೆಟ್‌ಗಳ ವಾತಾವರಣ ಮತ್ತು ನಮ್ಮ ಸೌರವ್ಯೂಹದ ಚಂದ್ರಗಳ ಅನ್ವೇಷಣೆ ಸೇರಿದಂತೆ ಮೊದಲಾದ ಸಂಶೋಧನೆಗಳಿಗೆ ಈ ಚಿತ್ರಗಳು ಸಹಕಾರಿಯಾಗಲಿವೆ ಎನ್ನಲಾಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...