Homeಮುಖಪುಟಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

ಬಾಹ್ಯಾಕಾಶದ ಅಪರೂಪದ ಚಿತ್ರಗಳನ್ನು ಸೆರೆ ಹಿಡಿದ ಜೇಮ್ಸ್‌ ವೆಬ್‌‌ ದೂರದರ್ಶಕ

- Advertisement -
- Advertisement -

ನ್ಯಾಷನಲ್ ಏರೋನಾಟಿಕ್ಸ್ & ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಸಂಸ್ಥೆಯ ಜೇಮ್ಸ್‌ ವೆಬ್ ಬಾಹ್ಯಾಕಾಶ ದೂರದರ್ಶಕವು ಕೋಟ್ಯಂತರ ಮೈಲುಗಳ ದೂರದಲ್ಲಿರುವ, ನಕ್ಷತ್ರಗಳು, ನೀಹಾರಿಕೆಗಳು, ವಿವಿಧ ಆಕಾಶಕಾಯಗಳ ಚಿತ್ರಗಳನ್ನು ಸೆರೆ ಹಿಡಿದಿದೆ.

ಅವುಗಳನ್ನು ನಾಸಾ ಬಿಡುಗಡೆ ಮಾಡಿದ್ದು, ಖಗೋಳವಿಜ್ಞಾನ ಕ್ಷೇತ್ರದ ಅದ್ವಿತೀಯ ಸಂಶೋಧನೆ ಎಂದೇ ಬಣ್ಣಿಸಲಾಗುತ್ತಿದೆ.

9 ಬಿಲಿಯನ್ ಡಾಲರ್‌‌ ಬೆಲೆಯ ದೂರದರ್ಶಕವನ್ನು ಕಳೆದ ವರ್ಷ ಡಿಸೆಂಬರ್ 25ರಂದು ಉಡಾಯಿಸಲಾಯಿತು. ಇದು ಒಂದು ತಿಂಗಳ ನಂತರ ಭೂಮಿಯಿಂದ ಸುಮಾರು 1 ಮಿಲಿಯನ್ ಮೈಲುಗಳಷ್ಟು ದೂರದ ಸೌರ ಕಕ್ಷೆಯನ್ನು ತಲುಪುವಲ್ಲಿ ಯಶಸ್ವಿಯಾಯಿತು.

ಆಗ ತಾನೆ ಸೃಷ್ಟಿಯಾಗಿರುವ ನಕ್ಷತ್ರಗಳಲ್ಲಿ ಪ್ರಪಾತಗಳಂತೆ ಕಾಣುವ ರಚನೆಗಳ, ಲಯಬದ್ಧವಾಗಿ ‘ನೃತ್ಯ’ದಲ್ಲಿ ತೊಡಗಿರುವಂತೆ ಕಂಡುಬರುವ ತಾರೆಗಳ ಸಮೂಹದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿದೆ.

‘ಬಾಹ್ಯಾಕಾಶ ದೂರದರ್ಶಕ ಕಳಿಸಿರುವ ಪ್ರತಿಯೊಂದು ಚಿತ್ರವೂ ಹೊಸ ಆವಿಷ್ಕಾರವೇ ಆಗಿದೆ. ಪ್ರತಿಯೊಂದು ಚಿತ್ರವು ಮಾನವರು ಕಾಣದ ಬ್ರಹ್ಮಾಂಡ ಕುರಿತ ಹೊಸ ನೋಟ ನೀಡುತ್ತದೆ’ ಎಂದು ನಾಸಾ ಆಡಳಿತಾಧಿಕಾರಿ ಬಿಲ್‌ ನೆಲ್ಸನ್‌ ಹೇಳಿದ್ದಾರೆ.

“ಓ ಗಾಡ್‌ನೆಸ್‌, ಇದು ಯಶಸ್ವಿಯಾಗಿದೆ. ನಾನು ಭಾವುಕಳಾಗಿದ್ದೇನೆ” ಎಂದು ನಾಸಾದ ಆಪರೇಷನ್ ಪ್ರಾಜೆಕ್ಟ್ ವಿಜ್ಞಾನಿ ಜೇನ್ ರಿಗ್ಬಿ ಹೇಳಿದ್ದಾರೆ.

‘ಚಿತ್ರಗಳು ಸುಂದರವಾಗಿವೆ. ವಿಜ್ಞಾನ ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿರುವ ಅಚ್ಚರಿಗಳನ್ನು ಅವು ತೋರುತ್ತವೆ. ನಾವು ಇನ್ನೂ ಗುರುತಿಸಲಾಗದ ಅನೇಕ ಸಂಗತಿಗಳನ್ನು ಈ ಚಿತ್ರಗಳು ಒಳಗೊಂಡಿವೆ’ ಎಂದು ನೊಬೆಲ್‌ ಪ್ರಶಸ್ತಿ ಪುರಸ್ಕೃತ ಬಾಹ್ಯಾಕಾಶವಿಜ್ಞಾನಿ ಜಾನ್‌ ಮಾಥರ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಬಿಡೆನ್ ಸೋಮವಾರ ವೆಬ್ ದೂರದರ್ಶಕದಿಂದ ಸೆರೆಹಿಡಿದ ಚಿತ್ರವನ್ನು ಪರಿಚಯಿಸಿದ್ದಾರೆ. ನಾಸಾ ಅಧಿಕಾರಿಗಳು ಮತ್ತು ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡವನ್ನು ಬಹಳ ಹತ್ತಿರದಿಂದ ತೆರೆದಿಟ್ಟಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಕೂಡ ಯುಎಸ್ ಬಾಹ್ಯಾಕಾಶ ಸಂಸ್ಥೆ ಬಿಡುಗಡೆ ಮಾಡಿದ ಚಿತ್ರಗಳನ್ನು ತನ್ನ ಪರದೆಯ ಮೇಲೆ ಪ್ರಸಾರ ಮಾಡಿತು. ಸ್ಕ್ವೇರ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಚಿತ್ರಗಳನ್ನು ಹಂಚಿಕೊಂಡಿದೆ.

ಗೆಲಕ್ಸಿಗಳ ವಿಕಾಸ, ನಕ್ಷತ್ರಗಳ ಜೀವನ ಚಕ್ರ, ದೂರದ ಎಕ್ಸೋಪ್ಲಾನೆಟ್‌ಗಳ ವಾತಾವರಣ ಮತ್ತು ನಮ್ಮ ಸೌರವ್ಯೂಹದ ಚಂದ್ರಗಳ ಅನ್ವೇಷಣೆ ಸೇರಿದಂತೆ ಮೊದಲಾದ ಸಂಶೋಧನೆಗಳಿಗೆ ಈ ಚಿತ್ರಗಳು ಸಹಕಾರಿಯಾಗಲಿವೆ ಎನ್ನಲಾಗುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...