Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...