Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...