Homeಮುಖಪುಟಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸತತ ಮೂರನೇ ಬಾರಿಗೆ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್‌ಗೆ ಜಾಮೀನು ನಿರಾಕರಣೆ

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಜಾಮಿಯಾ ಸಮನ್ವಯ ಸಮಿತಿ ಸದಸ್ಯೆ ಸಫೂರಾ ಜರ್ಗರ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ. ಆಮೂಲು ಸತತ ಮೂರನೇ ಬಾರಿಗೆ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ.

“ನೀವು ಕೆಂಡದೊಂದಿಗೆ ಆಟವಾಡಲು ಆಯ್ಕೆಮಾಡಿದಾಗ, ಕಿಡಿಯನ್ನು ಸ್ವಲ್ಪ ಹೆಚ್ಚು ದೂರ ಸಾಗಿಸಿ ನಂತರ ಬೆಂಕಿಯನ್ನು ಹರಡಿದ್ದು ಗಾಳಿ ಎಂದು ದೂಷಿಸಲು ಸಾಧ್ಯವಿಲ್ಲ” ಎಂದು ಜರ್ಗರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಹೇಳಿದೆ.

ಪಟಿಯಾಲಾ ಹೌಸ್‌ ಕೋರ್ಟ್‌‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ಪ್ರಕರಣದ ತನಿಖೆಯಲ್ಲಿ ದೊಡ್ಡ ಪಿತೂರಿ ಪತ್ತೆಯಾಗಿದೆ. ಕೃತ್ಯಗಳು ಮತ್ತು ಹೇಳಿಕೆಗಳ ಬಗ್ಗೆ ಪ್ರಾಥಮಿಕ ಸಾಕ್ಷ್ಯಗಳು ಇದ್ದಲ್ಲಿ, ಅದು ಎಲ್ಲರ ವಿರುದ್ಧವೂ ಸ್ವೀಕಾರಾರ್ಹ ಎಂದು ಹೇಳಿದ್ದಾರೆ. ಜರ್ಗರ್‌ಗೆ ಯಾವುದೇ ನೇರ ಹಿಂಸಾಚಾರದ ಆರೋಪವಿಲ್ಲದಿದ್ದರೂ ಸಹ, ಯುಎಪಿಎ ನಿಬಂಧನೆಗಳ ಅಡಿಯಲ್ಲಿ ಆಕೆ ತನ್ನ ಹೊಣೆಗಾರಿಕೆಯಿಂದ ದೂರ ಸರಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸರ್ಕಾರದ ನೀತಿಗಳನ್ನು ಅಂಗೀಕರಿಸದ ಮುಗ್ಧ ವಿದ್ಯಾರ್ಥಿಗಳ ಮೇಲೆ ತನಿಖಾ ಸಂಸ್ಥೆ ಸುಳ್ಳು ನಿರೂಪಣೆಯನ್ನು ರಚಿಸುತ್ತಿದೆ ಎಂದು ಆಕೆಯ ಸಲಹೆಗಾರರಾದ ರಿತೇಶ್ ಧಾರ್ ದುಬೆ ಮತ್ತು ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದರು. ಫೆಬ್ರವರಿ 23, 2020 ರಂದು ಚಾಂದ್ ಬಾಗ್‌ನಲ್ಲಿ ಜರ್ಗರ್ ಪ್ರಚೋದನಾಕಾರಿ ಭಾಷಣ ಮಾಡಿದರು ಎಂಬ ಪ್ರಾಸಿಕ್ಯೂಷನ್ ಆರೋಪ ಸರಿಯಿಲ್ಲ ಎಂದು ಅವರು ವಾದಿಸಿದರು. ಆ ದಿನ ಅವರು ಸ್ವಲ್ಪ ಸಮಯದವರೆಗೆ ಚಾಂದ್ ಬಾಗ್‌ಗೆ ಭೇಟಿ ನೀಡಿದ್ದರು ಆದರೆ ಹಿಂಸಾಚಾರ ಪ್ರಾರಂಭವಾಗುವ ಮೊದಲೇ ಅವರು ಅಲ್ಲಿಂದ ಹೊರಟಿದ್ದರು ಎಂದು ಅವರ ವಕೀಲರು ಹೇಳಿದ್ದಾರೆ. ಜೊತಗೆ ಅವರು ಫೆಬ್ರವರಿ 23 ರಂದು ಖುರೇಜಿಯಲ್ಲಿ ಭಾಷಣ ಮಾಡಿದ್ದರೂ ಸಹ ಅದು ಯಾವುದೇ ರೀತಿಯಲ್ಲಿ ಪ್ರಚೋದನಕಾರಿಯಾಗಿರಲಿಲ್ಲ ಎಂದು ವಾದಿಸಿದರು.

ಸಿಆರ್‌ಪಿಸಿಯ ಸೆಕ್ಷನ್ 161 ಮತ್ತು 164ರ ಅಡಿಯಲ್ಲಿ ದಾಖಲಾದ ಜರ್ಗರ್ ಅವರ ಹೇಳಿಕೆಗಳನ್ನು ಮತ್ತು ಲಭ್ಯವಿರುವ ವಾಟ್ಸಾಪ್ ಚಾಟ್ ಅನ್ನು ಉಲ್ಲೇಖಿಸಿ ಇದರಲ್ಲಿ ಕನಿಷ್ಠ ಪಿತೂರಿ ಇದೆ ಎಂದ ನ್ಯಾಯಾಧೀಶರು, ರಸ್ತೆಗಳ ತಡೆಯಲ್ಲಿ ಇವರ ಪಾತ್ರವಿದೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿಗೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಫೂರ ಜರ್ಗರ್ ಮದುವೆಯಾಗದೆ ಗರ್ಭಿಣಿಯಾಗಿದ್ದಾಳೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ನಾಯಕ


ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಜರ್ಗರ್ ಅವರ “ಅನಿಶ್ಚಿತ ವೈದ್ಯಕೀಯ ಸ್ಥಿತಿ” ಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ ತಿಹಾರ್ ಜೈಲು ಅಧೀಕ್ಷಕರಿಗೆ ಸಾಕಷ್ಟು ವೈದ್ಯಕೀಯ ನೆರವು ಮತ್ತು ಸಹಾಯವನ್ನು ನೀಡುವಂತೆ ಕೇಳಿಕೊಂಡಿದೆ.

ಫೆಬ್ರವರಿ 22-23ರಂದು ದೆಹಲಿಯ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮತ್ತು ರಸ್ತೆ ತಡೆ ಹೋರಾಟ ಆಯೋಜಿಸಿದವರಲ್ಲಿ ಜರ್ಗರ್‌ ಕೂಡ ಇದ್ದಾಳೆ ಎಂದು ಪೊಲೀಸರು ಆರೋಪಿಸಿ ಏಪ್ರಿಲ್ 13 ರಂದು ಅವರನ್ನು ಬಂಧಿಸಲಾಯಿತು. ಬಂಧನದ ಸಮಯದಲ್ಲಿ, ಜಾರ್ಗರ್ 13 ವಾರಗಳ ಗರ್ಭಿಣಿಯಾಗಿದ್ದಳು. ಕಳೆದ ತಿಂಗಳು ಸಹ, ಸಫೂರಾ ಜರ್ಗರ್ ಅವರ ವಕೀಲರು ಜಾಮೀನು ಕೋರಿ ಆಕೆಯ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಮತ್ತು ಎಫ್ಐಆರ್‌ನಲ್ಲಿ ಆಕೆಯ ಹೆಸರಿಸಲಾಗಿಲ್ಲ ಎಂದು ತಿಳಿಸಿದ್ದರು. ಆದರೂ ಅದನ್ನು ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅದಕ್ಕಾಗಿಯೇ ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಇನ್ನೂ ಜೀವಂತವಾಗಿದೆ ಎಂದು ಹೇಳಲಿಕ್ಕೂ ನಾಚಿಕೆ ಆಗುತ್ತೆ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...