Homeಮುಖಪುಟಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

ಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ, ಕಾನೂನು ಜಾರಿ ಸಂಸ್ಥೆಗಳ ವಿರುದ್ದ ಕ್ಯಾಂಪಸ್‌ ಒಳಗಡೆ ಘೋಷಣೆಗಳನ್ನು ಕೂಗದಂತೆ ಮತ್ತು ಪ್ರತಿಭಟಿಸದಂತೆ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

“ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಯಾವುದೇ ‘ಸಾಂವಿಧಾನಿಕ ಗಣ್ಯರ’ ವಿರುದ್ಧ ಪ್ರತಿಭಟನೆಗಳು ಮತ್ತು ಧರಣಿಗಳನ್ನು ಅನುಮತಿಸಲಾಗುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ” ವರದಿಗಳು ತಿಳಿಸಿವೆ.

ಈ ಕುರಿತು ಜ್ಞಾಪಕ ಪತ್ರ ಹೊರಡಿಸಿರುವ ವಿವಿಯ ರಿಜಿಸ್ಟ್ರಾರ್ ಎಂ.ಡಿ ಮಹತಾ ಆಲಂ ರಿಝ್ವಿ ಅವರು “ಕೆಲವು ವಿದ್ಯಾರ್ಥಿಗಳು ಪೂರ್ವಾನುಮತಿ ಪಡೆಯದೆ ಶಿಕ್ಷಣ ಮತ್ತು ವಿವಿಗೆ ಸಂಬಂಧಿಸದಂತೆ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳು ಮತ್ತು ದೇಶದ ಇತರ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗುವುದು, ಪ್ರತಿಭಟಿಸುವುದನ್ನು ವಿವಿ ಗಮನಿಸಿದೆ ಎಂದಿದ್ದಾರೆ.

ನವೆಂಬರ್ 29ರಂದು ಹೊರಡಿಸಿದ ಜ್ಞಾಪಕ ಪತ್ರದಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ಮತ್ತು ಧರಣಿಗಳಿಗೆ ಪೂರ್ವಾನುಮತಿ ಅಗತ್ಯ ಎಂಬ ಆಗಸ್ಟ್ 2022ರ ನಿರ್ದೇಶವನ್ನು ವಿದ್ಯಾರ್ಥಿಗಳಿಗೆ ನೆನಪಿಸಿದ್ದಾರೆ.

ವಿವಿಯ ಜ್ಞಾಪಕ ಪತ್ರಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಎಡಪಕ್ಷಗಳ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ) ವಿವಿಯ ನಿರ್ದೇಶನಗಳನ್ನು ಖಂಡಿಸಿದೆ. ಇದು ಶೈಕ್ಷಣಿಕ ಸಂಸ್ಥೆಗಳ ಮೇಲಿನ ‘ಸಂಘ ಪರಿವಾರದ ಸರ್ವಾಧಿಕಾರಿ ಹಿಡಿತ’ದ ಪ್ರತಿಬಿಂಬ ಎಂದಿದೆ.

ಈ ಕುರಿತು ಹೇಳಿಕೆ ಪ್ರಕಟಿಸಿರುವ ಎಐಎಸ್ಎ, “ಈ ನಿರ್ದೇಶನವು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ. ಇದು ವಿಶ್ವವಿದ್ಯಾನಿಲಯದ ಮೂಲತತ್ವದ ಮೇಲಿನ ದಾಳಿಯಾಗಿದೆ. ಬಿನ್ನಾಭಿಪ್ರಾಯವನ್ನು ಸಮಸ್ಯೆಯೊಂದಿಗೆ ಸಮೀಕರಿಸುವ ಮೂಲಕ ವಿವಿ ಆಡಳಿತವು ದೇಶದಾದ್ಯಂತ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಬಿಜೆಪಿಯ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ತೋರಿಸಿದೆ. ಜಾಮಿಯಾ ವಿದ್ಯಾರ್ಥಿಗಳಿಗೆ ಸೇರಿದ್ದು, ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಅಲ್ಲ” ಎಂದು ಕಿಡಿಕಾರಿದೆ.

ವರದಿಗಳ ಪ್ರಕಾರ, ವಿವಿಯು ತನ್ನ ಜ್ಞಾಪಕ ಪತ್ರವನ್ನು ಅಧ್ಯಾಪಕರು ಮತ್ತು ವಿಭಾಗಗಳಾದ್ಯಂತ ವಿತರಿಸಿದೆ. ಅದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಡೀನ್‌ಗಳು, ವಿಭಾಗಗಳ ಮುಖ್ಯಸ್ಥರು ಮತ್ತು ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...