Homeಮುಖಪುಟಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

ಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ, ಕಾನೂನು ಜಾರಿ ಸಂಸ್ಥೆಗಳ ವಿರುದ್ದ ಕ್ಯಾಂಪಸ್‌ ಒಳಗಡೆ ಘೋಷಣೆಗಳನ್ನು ಕೂಗದಂತೆ ಮತ್ತು ಪ್ರತಿಭಟಿಸದಂತೆ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

“ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಯಾವುದೇ ‘ಸಾಂವಿಧಾನಿಕ ಗಣ್ಯರ’ ವಿರುದ್ಧ ಪ್ರತಿಭಟನೆಗಳು ಮತ್ತು ಧರಣಿಗಳನ್ನು ಅನುಮತಿಸಲಾಗುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ” ವರದಿಗಳು ತಿಳಿಸಿವೆ.

ಈ ಕುರಿತು ಜ್ಞಾಪಕ ಪತ್ರ ಹೊರಡಿಸಿರುವ ವಿವಿಯ ರಿಜಿಸ್ಟ್ರಾರ್ ಎಂ.ಡಿ ಮಹತಾ ಆಲಂ ರಿಝ್ವಿ ಅವರು “ಕೆಲವು ವಿದ್ಯಾರ್ಥಿಗಳು ಪೂರ್ವಾನುಮತಿ ಪಡೆಯದೆ ಶಿಕ್ಷಣ ಮತ್ತು ವಿವಿಗೆ ಸಂಬಂಧಿಸದಂತೆ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳು ಮತ್ತು ದೇಶದ ಇತರ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗುವುದು, ಪ್ರತಿಭಟಿಸುವುದನ್ನು ವಿವಿ ಗಮನಿಸಿದೆ ಎಂದಿದ್ದಾರೆ.

ನವೆಂಬರ್ 29ರಂದು ಹೊರಡಿಸಿದ ಜ್ಞಾಪಕ ಪತ್ರದಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ಮತ್ತು ಧರಣಿಗಳಿಗೆ ಪೂರ್ವಾನುಮತಿ ಅಗತ್ಯ ಎಂಬ ಆಗಸ್ಟ್ 2022ರ ನಿರ್ದೇಶವನ್ನು ವಿದ್ಯಾರ್ಥಿಗಳಿಗೆ ನೆನಪಿಸಿದ್ದಾರೆ.

ವಿವಿಯ ಜ್ಞಾಪಕ ಪತ್ರಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಎಡಪಕ್ಷಗಳ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ) ವಿವಿಯ ನಿರ್ದೇಶನಗಳನ್ನು ಖಂಡಿಸಿದೆ. ಇದು ಶೈಕ್ಷಣಿಕ ಸಂಸ್ಥೆಗಳ ಮೇಲಿನ ‘ಸಂಘ ಪರಿವಾರದ ಸರ್ವಾಧಿಕಾರಿ ಹಿಡಿತ’ದ ಪ್ರತಿಬಿಂಬ ಎಂದಿದೆ.

ಈ ಕುರಿತು ಹೇಳಿಕೆ ಪ್ರಕಟಿಸಿರುವ ಎಐಎಸ್ಎ, “ಈ ನಿರ್ದೇಶನವು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ. ಇದು ವಿಶ್ವವಿದ್ಯಾನಿಲಯದ ಮೂಲತತ್ವದ ಮೇಲಿನ ದಾಳಿಯಾಗಿದೆ. ಬಿನ್ನಾಭಿಪ್ರಾಯವನ್ನು ಸಮಸ್ಯೆಯೊಂದಿಗೆ ಸಮೀಕರಿಸುವ ಮೂಲಕ ವಿವಿ ಆಡಳಿತವು ದೇಶದಾದ್ಯಂತ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಬಿಜೆಪಿಯ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ತೋರಿಸಿದೆ. ಜಾಮಿಯಾ ವಿದ್ಯಾರ್ಥಿಗಳಿಗೆ ಸೇರಿದ್ದು, ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಅಲ್ಲ” ಎಂದು ಕಿಡಿಕಾರಿದೆ.

ವರದಿಗಳ ಪ್ರಕಾರ, ವಿವಿಯು ತನ್ನ ಜ್ಞಾಪಕ ಪತ್ರವನ್ನು ಅಧ್ಯಾಪಕರು ಮತ್ತು ವಿಭಾಗಗಳಾದ್ಯಂತ ವಿತರಿಸಿದೆ. ಅದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಡೀನ್‌ಗಳು, ವಿಭಾಗಗಳ ಮುಖ್ಯಸ್ಥರು ಮತ್ತು ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...