Homeಮುಖಪುಟಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

ಪ್ರಧಾನಿ ಮೋದಿ, ಸರ್ಕಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿದ ಜಾಮಿಯಾ ವಿವಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ, ಕಾನೂನು ಜಾರಿ ಸಂಸ್ಥೆಗಳ ವಿರುದ್ದ ಕ್ಯಾಂಪಸ್‌ ಒಳಗಡೆ ಘೋಷಣೆಗಳನ್ನು ಕೂಗದಂತೆ ಮತ್ತು ಪ್ರತಿಭಟಿಸದಂತೆ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

“ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಯಾವುದೇ ‘ಸಾಂವಿಧಾನಿಕ ಗಣ್ಯರ’ ವಿರುದ್ಧ ಪ್ರತಿಭಟನೆಗಳು ಮತ್ತು ಧರಣಿಗಳನ್ನು ಅನುಮತಿಸಲಾಗುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ” ವರದಿಗಳು ತಿಳಿಸಿವೆ.

ಈ ಕುರಿತು ಜ್ಞಾಪಕ ಪತ್ರ ಹೊರಡಿಸಿರುವ ವಿವಿಯ ರಿಜಿಸ್ಟ್ರಾರ್ ಎಂ.ಡಿ ಮಹತಾ ಆಲಂ ರಿಝ್ವಿ ಅವರು “ಕೆಲವು ವಿದ್ಯಾರ್ಥಿಗಳು ಪೂರ್ವಾನುಮತಿ ಪಡೆಯದೆ ಶಿಕ್ಷಣ ಮತ್ತು ವಿವಿಗೆ ಸಂಬಂಧಿಸದಂತೆ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳು ಮತ್ತು ದೇಶದ ಇತರ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗುವುದು, ಪ್ರತಿಭಟಿಸುವುದನ್ನು ವಿವಿ ಗಮನಿಸಿದೆ ಎಂದಿದ್ದಾರೆ.

ನವೆಂಬರ್ 29ರಂದು ಹೊರಡಿಸಿದ ಜ್ಞಾಪಕ ಪತ್ರದಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಪ್ರತಿಭಟನೆಗಳು ಮತ್ತು ಧರಣಿಗಳಿಗೆ ಪೂರ್ವಾನುಮತಿ ಅಗತ್ಯ ಎಂಬ ಆಗಸ್ಟ್ 2022ರ ನಿರ್ದೇಶವನ್ನು ವಿದ್ಯಾರ್ಥಿಗಳಿಗೆ ನೆನಪಿಸಿದ್ದಾರೆ.

ವಿವಿಯ ಜ್ಞಾಪಕ ಪತ್ರಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಎಡಪಕ್ಷಗಳ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ) ವಿವಿಯ ನಿರ್ದೇಶನಗಳನ್ನು ಖಂಡಿಸಿದೆ. ಇದು ಶೈಕ್ಷಣಿಕ ಸಂಸ್ಥೆಗಳ ಮೇಲಿನ ‘ಸಂಘ ಪರಿವಾರದ ಸರ್ವಾಧಿಕಾರಿ ಹಿಡಿತ’ದ ಪ್ರತಿಬಿಂಬ ಎಂದಿದೆ.

ಈ ಕುರಿತು ಹೇಳಿಕೆ ಪ್ರಕಟಿಸಿರುವ ಎಐಎಸ್ಎ, “ಈ ನಿರ್ದೇಶನವು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ. ಇದು ವಿಶ್ವವಿದ್ಯಾನಿಲಯದ ಮೂಲತತ್ವದ ಮೇಲಿನ ದಾಳಿಯಾಗಿದೆ. ಬಿನ್ನಾಭಿಪ್ರಾಯವನ್ನು ಸಮಸ್ಯೆಯೊಂದಿಗೆ ಸಮೀಕರಿಸುವ ಮೂಲಕ ವಿವಿ ಆಡಳಿತವು ದೇಶದಾದ್ಯಂತ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಬಿಜೆಪಿಯ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ತೋರಿಸಿದೆ. ಜಾಮಿಯಾ ವಿದ್ಯಾರ್ಥಿಗಳಿಗೆ ಸೇರಿದ್ದು, ಬಿಜೆಪಿ ಅಥವಾ ಸಂಘ ಪರಿವಾರಕ್ಕೆ ಅಲ್ಲ” ಎಂದು ಕಿಡಿಕಾರಿದೆ.

ವರದಿಗಳ ಪ್ರಕಾರ, ವಿವಿಯು ತನ್ನ ಜ್ಞಾಪಕ ಪತ್ರವನ್ನು ಅಧ್ಯಾಪಕರು ಮತ್ತು ವಿಭಾಗಗಳಾದ್ಯಂತ ವಿತರಿಸಿದೆ. ಅದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಡೀನ್‌ಗಳು, ವಿಭಾಗಗಳ ಮುಖ್ಯಸ್ಥರು ಮತ್ತು ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ : “ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...