Homeದಲಿತ್ ಫೈಲ್ಸ್ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಅಮಾನತು; ತರಗತಿ ಬಹಿಷ್ಕರಿಸಿದ ಜಾಮಿಯಾ ವಿದ್ಯಾರ್ಥಿಗಳು

ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಅಮಾನತು; ತರಗತಿ ಬಹಿಷ್ಕರಿಸಿದ ಜಾಮಿಯಾ ವಿದ್ಯಾರ್ಥಿಗಳು

- Advertisement -
- Advertisement -

ಇಬ್ಬರು ಪಿಎಚ್‌ಡಿ ವಿದ್ಯಾರ್ಥಿಗಳ ವಿರುದ್ಧ ಈ ಹಿಂದೆ ತೆಗೆದುಕೊಂಡ ಶಿಸ್ತು ಕ್ರಮ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ 17 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ)ದ ಹಲವಾರು ವಿದ್ಯಾರ್ಥಿಗಳು ಸೋಮವಾರ ತರಗತಿಗಳನ್ನು ಬಹಿಷ್ಕರಿಸಿದರು.

ವಿದ್ಯಾರ್ಥಿಗಳನ್ನು ಬೆಂಬಲಿಸಿದ ಬಿಹಾರದ ಕರಕಟ್‌ನ ಸಿಪಿಐ-ಎಂಎಲ್ ಲಿಬರೇಶನ್ ಸಂಸದ ರಾಜಾ ರಾಮ್ ಸಿಂಗ್, ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಉಪಕುಲಪತಿ ಮಜರ್ ಆಸಿಫ್ ಅವರನ್ನು ವಿದ್ಯಾರ್ಥಿಗಳ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು.

“ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳನ್ನು ಕಾನೂನುಬಾಹಿರವಾಗಿ ಪ್ರಕಟಿಸಿದ್ದಕ್ಕಾಗಿ” ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಬಹಿಷ್ಕಾರಕ್ಕೆ ಕರೆ ನೀಡಿದ ಎಡಪಂಥೀಯ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್‌ಎ), ವಿಶ್ವವಿದ್ಯಾಲಯವು ವಿದ್ಯಾರ್ಥಿ ಚಟುವಟಿಕೆಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿತು.

“ಜಾಮಿಯಾ ಆಡಳಿತವು ನಮ್ಮನ್ನು ಬಂಧಿಸಬಹುದು. ಆದರೆ, ನಮ್ಮ ಪ್ರತಿರೋಧವನ್ನು ಮೌನಗೊಳಿಸಲು ಸಾಧ್ಯವಿಲ್ಲ. ದಬ್ಬಾಳಿಕೆಯ ವಿರುದ್ಧ ಬಹಿಷ್ಕಾರದಲ್ಲಿ ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ಇದ್ದಾರೆ. ನಾವು ಮೌನವಾಗಿರಲು ನಿರಾಕರಿಸುತ್ತೇವೆ” ಎಂದು ವಿದ್ಯಾರ್ಥಿ ಸಂಘಟನೆ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೈಜಿನಿಕ್ ಕ್ಯಾಂಟೀನ್‌ನಿಂದ ವಿದ್ಯಾರ್ಥಿ ಕಲ್ಯಾಣ ಡೀನ್ (ಡಿಎಸ್‌ಡಬ್ಲ್ಯೂ) ಕಚೇರಿಗೆ ಮೆರವಣಿಗೆ ನಡೆಸಿ ಅಮಾನತುಗಳನ್ನು ತಕ್ಷಣ ರದ್ದುಗೊಳಿಸುವಂತೆ ಒತ್ತಾಯಿಸಿ ಜ್ಞಾಪಕ ಪತ್ರವನ್ನು ಸಲ್ಲಿಸಿದರು.

“ವಿದ್ಯಾರ್ಥಿ ಕಲ್ಯಾಣ ಇಲಾಖೆಯ ಡೀನ್ ಆಗಿ, ನೀವು ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಕಾಳಜಿ ವಹಿಸಬೇಕು. ಆದರೂ, ಈ 17 ವಿದ್ಯಾರ್ಥಿಗಳ ವಿರುದ್ಧ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಘಟನೆಗಳು ಆ ಜವಾಬ್ದಾರಿಗೆ ಹೊಂದಿಕೆಯಾಗುವುದಿಲ್ಲ” ಎಂದು ಜ್ಞಾಪಕ ಪತ್ರದಲ್ಲಿ ಹೇಳಲಾಗಿದೆ.

ವಿದ್ಯಾರ್ಥಿಗಳ ಬೇಡಿಕೆಯಲ್ಲಿ ಎಫ್‌ಐಆರ್ ರದ್ದು, ಅಮಾನತು ಆದೇಶಗಳು, ಎಲ್ಲ ಭಿನ್ನಾಭಿಪ್ರಾಯ ಹೊಂದಿರುವ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮಗಳು; ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಶೋ-ಕಾಸ್ ನೋಟಿಸ್ ನೀಡುವುದನ್ನು ನಿಲ್ಲಿಸುವುದು; ಮತ್ತು ವಿದ್ಯಾರ್ಥಿ ಚಟುವಟಿಕೆಗೆ ಸಂಬಂಧಿಸಿದ ಎಲ್ಲಾ ಹಿಂದಿನ ಶೋ-ಕಾಸ್ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯುವುದು ಸೇರಿವೆ ಎಂದು ಅದು ಹೇಳಿದೆ.

ಈ ಮಧ್ಯೆ, ವಿಸಿಗೆ ಪತ್ರ ಬರೆದ ಸಿಂಗ್, “ಜಾಮಿಯಾ ಆಡಳಿತವು ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಇತರ 17 ಜನರನ್ನು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಚಲಾಯಿಸಿದ್ದಕ್ಕಾಗಿ ಅಮಾನತುಗೊಳಿಸಿದೆ. ಪ್ರಜಾಪ್ರಭುತ್ವಕ್ಕೆ ಬೆಂಬಲ ನೀಡುವುದು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವುದು ತಪ್ಪೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...