HomeಮುಖಪುಟUPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಐಪಿಎಸ್ ಅಸೋಸಿಯೇಷನ್ ಇದು ಪತ್ರಿಕೋದ್ಯಮದ ಬೇಜವಾಬ್ದಾರಿ ಮತ್ತು ಕೋಮುವಾದಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

- Advertisement -
- Advertisement -

UPSC ಪಾಸಾದ ಜಾಮಿಯಾ ವಿವಿ ಮುಸ್ಲಿಂ ವಿದ್ಯಾರ್ಥಿಗಳ ವಿರುದ್ದ ದ್ವೇಷ ಬಿತ್ತುತ್ತಿರುವ ಸುದರ್ಶನ್ ಚಾನೆಲ್ ನಿರೂಪಕ ಸುರೇಶ್ ಚಾವಂಕೆ ವಿರುದ್ದ ಅಹ್ಮದ್‌ನಗರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಆಗಸ್ಟ್ 4 ರಂದು ಈ ಬಾರಿಯ ಯುಪಿಎಸ್‌ಸಿ ಫಲಿತಾಂಶ ಹೊರಬಂದಿದ್ದು, 829 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ಇದರಲ್ಲಿ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಸೆಂಟರ್‌ನಿಂದ 30 (15 ಮುಸ್ಲಿಮರು 15 ಮುಸ್ಲಿಮೇತರರು) ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ಇದನ್ನು “ಮುಸ್ಲಿಮರ ಹೊಸ ಜಿಹಾದ್‌, ಯುಪಿಎಸ್‌ಸಿ ಜಿಹಾದ್, ಜಾಮಿಯಾ ಕೆ ಜಿಹಾದ್‌” ಎಂದು ಸುದರ್ಶನ ನ್ಯೂಸ್ ಚಾನೆಲ್‌ನ ನಿರೂಪಕ ಸುರೇಶ್ ಚಾವಂಕೆ ತಮ್ಮ ಚಾನೆಲ್‌ನಲ್ಲಿ ಕಾರ್ಯಕ್ರಮ ಮಾಡುವುದಾಗಿ ತಮ್ಮ ಟ್ವಿಟ್ಟರ್‌ನಲ್ಲಿ ಅದರ ಪ್ರೊಮೊವನ್ನು ಹಾಕಿದ್ದರು.

ಇದನ್ನೂ ಓದಿ: ದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

ಈ ಬಗ್ಗೆ ಹಲವಾರು ಜನರು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು ಹಾಗೂ ಇದರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು, ಇದೀಗ ದೂರು ದಾಖಲಾಗಿದೆ.

ಚಾವಂಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದೇ ಎಂದು ಚರ್ಚಿಸಲು ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸಭೆಗೆ ಆಹ್ವಾನಿಸಿತ್ತು.

“ದುರುದ್ದೇಶದ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಟಿವಿ ಚಾನೆಲ್ ವಿರುದ್ಧ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ನಾವು ಸಭೆ ಕರೆದಿದ್ದೇವೆ. ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ಪ್ರತಿಯೊಬ್ಬ ವಿದ್ಯಾರ್ಥಿಯು, ದ್ವೇಷ ಹರಡುವ ವಿಷಯಕ್ಕಾಗಿ ಚಾನೆಲ್ ವಿರುದ್ಧ ಎಫ್ಐಆರ್ ದಾಖಲಿಸಬೇಕು” ಎಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಉಪಕುಲಪತಿ ನಜ್ಮಾ ಅಖ್ತರ್ ಹೇಳಿದ್ದಾರೆ.

“ಈ ವರ್ಷ ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳಲ್ಲಿ ಸುಮಾರು 50 ಪ್ರತಿಶತ ಅಭ್ಯರ್ಥಿಗಳು ಮುಸ್ಲಿಮೇತರರು ಎಂದು ಅವರಿಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ಈ ಪ್ರೋಮೋವನ್ನು ಟ್ವೀಟ್ ಮಾಡಿದ್ದಾರೆ.

ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದಾರೆ.

ಅವರ ಟ್ವೀಟ್ ಅನ್ನು ಮತ್ತು ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಬೇಕು ಮತ್ತು ಅವರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಪೊಲೀಸ್ ದೌರ್ಜನ್ಯದ ಕತೆ ಹೇಳಿದ ಜಾಮಿಯಾ ವಿಡಿಯೋಗಳು

ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೊಖಲೆ ದ್ವೇಷ ಹರಡಿದ್ದಕ್ಕಾಗಿ ಅವರ ಮೇಲೆ ದಾಖಲಾಗಿರುವ ದೂರಿನ ಪ್ರತಿಯನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೃತ್ಯವನ್ನು ಖಂಡಿಸಿರುವ ಐಪಿಎಸ್ ಅಸೋಸಿಯೇಷನ್, ಇದು ಪತ್ರಿಕೋದ್ಯಮದ ಬೇಜವಾಬ್ದಾರಿ ಮತ್ತು ಕೋಮುವಾದಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

 

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ, ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹಾಸ್ಟೆಲ್ ಸೌಲಭ್ಯದೊಂದಿಗೆ ಉಚಿತ ತರಬೇತಿಯನ್ನು ನೀಡುತ್ತದೆ. ಈ ಸೌಲಭ್ಯವು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತವಾಗಿದೆ. ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಪಡೆಯಲು ಅರ್ಹರಾಗಿದ್ದಾರೆ.

ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಕೇಂದ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಯು ಮತ್ತು ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ ಸೇರಿದಂತೆ 40 ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ಹಿಂದಿಕ್ಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಥಮ ಸ್ಥಾನ ಪಡೆದಿದೆ.


ಇದನ್ನೂ ಓದಿ: UPSC-2019 ರ ಪರೀಕ್ಷಾ ಫಲಿತಾಂಶ ಪ್ರಕಟ; ಪ್ರದೀಪ್ ಸಿಂಗ್‌ಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...