HomeಮುಖಪುಟUPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ಐಪಿಎಸ್ ಅಸೋಸಿಯೇಷನ್ ಇದು ಪತ್ರಿಕೋದ್ಯಮದ ಬೇಜವಾಬ್ದಾರಿ ಮತ್ತು ಕೋಮುವಾದಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

- Advertisement -
- Advertisement -

UPSC ಪಾಸಾದ ಜಾಮಿಯಾ ವಿವಿ ಮುಸ್ಲಿಂ ವಿದ್ಯಾರ್ಥಿಗಳ ವಿರುದ್ದ ದ್ವೇಷ ಬಿತ್ತುತ್ತಿರುವ ಸುದರ್ಶನ್ ಚಾನೆಲ್ ನಿರೂಪಕ ಸುರೇಶ್ ಚಾವಂಕೆ ವಿರುದ್ದ ಅಹ್ಮದ್‌ನಗರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಆಗಸ್ಟ್ 4 ರಂದು ಈ ಬಾರಿಯ ಯುಪಿಎಸ್‌ಸಿ ಫಲಿತಾಂಶ ಹೊರಬಂದಿದ್ದು, 829 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ಇದರಲ್ಲಿ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಸೆಂಟರ್‌ನಿಂದ 30 (15 ಮುಸ್ಲಿಮರು 15 ಮುಸ್ಲಿಮೇತರರು) ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ಇದನ್ನು “ಮುಸ್ಲಿಮರ ಹೊಸ ಜಿಹಾದ್‌, ಯುಪಿಎಸ್‌ಸಿ ಜಿಹಾದ್, ಜಾಮಿಯಾ ಕೆ ಜಿಹಾದ್‌” ಎಂದು ಸುದರ್ಶನ ನ್ಯೂಸ್ ಚಾನೆಲ್‌ನ ನಿರೂಪಕ ಸುರೇಶ್ ಚಾವಂಕೆ ತಮ್ಮ ಚಾನೆಲ್‌ನಲ್ಲಿ ಕಾರ್ಯಕ್ರಮ ಮಾಡುವುದಾಗಿ ತಮ್ಮ ಟ್ವಿಟ್ಟರ್‌ನಲ್ಲಿ ಅದರ ಪ್ರೊಮೊವನ್ನು ಹಾಕಿದ್ದರು.

ಇದನ್ನೂ ಓದಿ: ದ್ವೇಷ ಭಾಷಣ: ಕ್ರಿಮಿನಲ್ ಕಾನೂನಿನ ಬದಲಾವಣೆ ಈಗಿನ ತುರ್ತ: ತಜ್ಞರ ಸಮಿತಿ

ಈ ಬಗ್ಗೆ ಹಲವಾರು ಜನರು ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು ಹಾಗೂ ಇದರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು, ಇದೀಗ ದೂರು ದಾಖಲಾಗಿದೆ.

ಚಾವಂಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದೇ ಎಂದು ಚರ್ಚಿಸಲು ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಸಭೆಗೆ ಆಹ್ವಾನಿಸಿತ್ತು.

“ದುರುದ್ದೇಶದ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಟಿವಿ ಚಾನೆಲ್ ವಿರುದ್ಧ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ನಾವು ಸಭೆ ಕರೆದಿದ್ದೇವೆ. ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ಪ್ರತಿಯೊಬ್ಬ ವಿದ್ಯಾರ್ಥಿಯು, ದ್ವೇಷ ಹರಡುವ ವಿಷಯಕ್ಕಾಗಿ ಚಾನೆಲ್ ವಿರುದ್ಧ ಎಫ್ಐಆರ್ ದಾಖಲಿಸಬೇಕು” ಎಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಉಪಕುಲಪತಿ ನಜ್ಮಾ ಅಖ್ತರ್ ಹೇಳಿದ್ದಾರೆ.

“ಈ ವರ್ಷ ಯುಪಿಎಸ್‌ಸಿಯಲ್ಲಿ ಆಯ್ಕೆಯಾದ ಜಾಮಿಯಾ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ 30 ವಿದ್ಯಾರ್ಥಿಗಳಲ್ಲಿ ಸುಮಾರು 50 ಪ್ರತಿಶತ ಅಭ್ಯರ್ಥಿಗಳು ಮುಸ್ಲಿಮೇತರರು ಎಂದು ಅವರಿಗೆ ತಿಳಿದಿಲ್ಲ” ಎಂದು ಅವರು ಹೇಳಿದ್ದಾರೆ.

ಸುರೇಶ್ ಚಾವಂಕೆ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆರೆಸ್ಸೆಸ್‌ಗೆ ಟ್ಯಾಗ್ ಮಾಡಿ ಈ ಪ್ರೋಮೋವನ್ನು ಟ್ವೀಟ್ ಮಾಡಿದ್ದಾರೆ.

ಅದರಲ್ಲಿ ಭಾರತೀಯ ಅಧಿಕಾರಶಾಹಿಯಲ್ಲಿ ಮುಸ್ಲಿಮರ ನುಸುಳುಕೋರತನ ಎಂದು ಕರೆದು, ಮುಸ್ಲಿಮರು ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಯನ್ನು ಭಾರಿ ಸಂಖ್ಯೆಯಲ್ಲಿ ಹೇಗೆ ಉತ್ತೀರ್ಣರಾಗುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ. ಅವರು ಜಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿಯ ವಿದ್ಯಾರ್ಥಿಗಳನ್ನು “ಜಿಹಾದಿಸ್ ಆಫ್ ಜಾಮಿಯಾ” ಎಂದು ಉಲ್ಲೇಖಿಸಿ, ‘ಯುಪಿಎಸ್‌ಸಿ ಜಿಹಾದ್’ ಎಂಬ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಬಳಸಿದ್ದಾರೆ.

ಅವರ ಟ್ವೀಟ್ ಅನ್ನು ಮತ್ತು ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಬೇಕು ಮತ್ತು ಅವರ ಮೇಲೆ ಎಫ್ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಪೊಲೀಸ್ ದೌರ್ಜನ್ಯದ ಕತೆ ಹೇಳಿದ ಜಾಮಿಯಾ ವಿಡಿಯೋಗಳು

ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೊಖಲೆ ದ್ವೇಷ ಹರಡಿದ್ದಕ್ಕಾಗಿ ಅವರ ಮೇಲೆ ದಾಖಲಾಗಿರುವ ದೂರಿನ ಪ್ರತಿಯನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೃತ್ಯವನ್ನು ಖಂಡಿಸಿರುವ ಐಪಿಎಸ್ ಅಸೋಸಿಯೇಷನ್, ಇದು ಪತ್ರಿಕೋದ್ಯಮದ ಬೇಜವಾಬ್ದಾರಿ ಮತ್ತು ಕೋಮುವಾದಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

 

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ರೆಸಿಡೆನ್ಶಿಯಲ್ ಕೋಚಿಂಗ್ ಅಕಾಡೆಮಿ, ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹಾಸ್ಟೆಲ್ ಸೌಲಭ್ಯದೊಂದಿಗೆ ಉಚಿತ ತರಬೇತಿಯನ್ನು ನೀಡುತ್ತದೆ. ಈ ಸೌಲಭ್ಯವು ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮುಕ್ತವಾಗಿದೆ. ಮಹಿಳಾ ಅಭ್ಯರ್ಥಿಗಳು ಈ ಅವಕಾಶವನ್ನು ಪಡೆಯಲು ಅರ್ಹರಾಗಿದ್ದಾರೆ.

ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ಕೇಂದ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಯು ಮತ್ತು ಅಲಿಗಡ್ ಮುಸ್ಲಿಂ ವಿಶ್ವವಿದ್ಯಾಲಯ ಸೇರಿದಂತೆ 40 ಕೇಂದ್ರೀಯ ವಿಶ್ವವಿದ್ಯಾನಿಲಯಗಳನ್ನು ಹಿಂದಿಕ್ಕಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಥಮ ಸ್ಥಾನ ಪಡೆದಿದೆ.


ಇದನ್ನೂ ಓದಿ: UPSC-2019 ರ ಪರೀಕ್ಷಾ ಫಲಿತಾಂಶ ಪ್ರಕಟ; ಪ್ರದೀಪ್ ಸಿಂಗ್‌ಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...