Homeಮುಖಪುಟಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ - ಕೇಂದ್ರದ ಮಧ್ಯಪ್ರವೇಶಕ್ಕೆ...

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

- Advertisement -
- Advertisement -

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು ಇದು ವಸಾಹತುಶಾಹಿ ಕಾಲದ ಮುತ್ತಿಗೆಯ ದಮನಕಾರಿ ಸ್ವರೂಪವನ್ನು ನೆನಪಿಸುತ್ತದೆ ಎಂದು ವಿವರಿಸಿದೆ.

ಅಸ್ಸಾಂನಲ್ಲಿ ಆಘಾತಕಾರಿ ಪೊಲೀಸ್ ದೌರ್ಜನ್ಯ: ಜುಲೈ 17ರಂದು ಗೋಲ್ಪಾರಾ ಜಿಲ್ಲೆಯ ಅಶುಡುಬಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿದ್ದ, ನಿರಾಯುಧ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜುಲೈ 12ರ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತನಾಗಿದ್ದ ಈ ಬಾಲಕ, ಆಹಾರಕ್ಕಾಗಿ ಪ್ರತಿಭಟಿಸುತ್ತಿದ್ದಾಗ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ‘ಇದು ಮಾರಣಾಂತಿಕ ಮತ್ತು ಸಂಪೂರ್ಣ ಅಸಮರ್ಥನೀಯ ಪ್ರತಿಕ್ರಿಯೆ’ ಎಂದು JUH ವರದಿ ಹೇಳಿದೆ.

ಆಘಾತಕಾರಿ ವರದಿ: ಅಸ್ಸಾಂನಲ್ಲಿ ಭಾರೀ ಸ್ಥಳಾಂತರದ ಜೊತೆಗೆ ಪರಿಹಾರ ಕಾರ್ಯಾಚರಣೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಧುಬ್ರಿ ಜಿಲ್ಲೆಯ ಚರಕಾತ್ರಾ, ಸಂತೋಷಪುರ ಮತ್ತು ಚರವಬಕ್ರಾ ಗ್ರಾಮಗಳಿಂದ 5,700 ನೋಂದಾಯಿತ ಮತದಾರರು ಸೇರಿದಂತೆ 20,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು JUH ವರದಿ ತಿಳಿಸಿದೆ. ಬ್ರಹ್ಮಪುತ್ರ ನದಿಯ ಮರಳದಿಬ್ಬಗಳಲ್ಲಿ ಶುದ್ಧ ನೀರು, ಆಶ್ರಯ, ಮತ್ತು ನೈರ್ಮಲ್ಯವಿಲ್ಲದೆ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಈ ಪ್ರದೇಶಗಳ ಮೇಲೆ ಅಸ್ಸಾಂ ಸರ್ಕಾರವು ನಿರ್ದಯವಾಗಿ ಮುತ್ತಿಗೆಯನ್ನು ಹೇರಿದೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಕೈಪಂಪ್‌ಗಳು, ಶೌಚಾಲಯಗಳನ್ನು ನಾಶಪಡಿಸಿದ್ದು ಮಾತ್ರವಲ್ಲದೆ, ಪರಿಹಾರ ತಲುಪಿಸುತ್ತಿದ್ದ ಎನ್‌ಜಿಒಗಳು ಮತ್ತು ಜಮಿಯತ್ ತಂಡಕ್ಕೂ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ.

ಸೌರಶಕ್ತಿ ಯೋಜನೆ ನೆಪದಲ್ಲಿ ಕಾರ್ಪೊರೇಟ್ ಬೆಂಬಲಿತ ಭೂಕಬಳಿಕೆ!: ಜಮಿಯತ್‌ನ ವರದಿಯ ಪ್ರಕಾರ, ಈ ಕಾರ್ಯಾಚರಣೆಗಳ ನಿಜವಾದ ಉದ್ದೇಶ ‘ಬಡ ಮುಸ್ಲಿಮರನ್ನು ಸ್ಥಳಾಂತರಿಸುವುದು ಮತ್ತು ಭೂಮಿಯನ್ನು ಕಬಳಿಸುವುದು’ ಮಾತ್ರವಾಗಿದೆ. ಈ ಸ್ಥಳಾಂತರವು ಪರಿಸರ ಅಥವಾ ಅಭಿವೃದ್ಧಿಯ ಉದ್ದೇಶದಿಂದ ನಡೆಯುತ್ತಿಲ್ಲವೆಂದು ಅದು ಹೇಳಿದೆ. ‘ಮತದಾರರ ಗುರುತಿನ ಚೀಟಿಗಳು ಮತ್ತು ಭೂ ದಾಖಲೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ವಿದೇಶಿಯರು ಎಂದು ಹಣೆಪಟ್ಟಿ ಕಟ್ಟಿ ಅಸ್ಸಾಂನ ಮುಸ್ಲಿಮರನ್ನು ಅಮಾನವೀಯಗೊಳಿಸುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಅಭಿಯಾನದ ಭಾಗವಾಗಿ ಈ ಸ್ಥಳಾಂತರ ನಡೆಯುತ್ತಿದೆ ಎಂದು JUH ವರದಿ ತೀವ್ರವಾಗಿ ಖಂಡಿಸಿದೆ.

JUH ವರದಿಯ ತುರ್ತು ಬೇಡಿಕೆಗಳು:

ಜಮಿಯತ್ ಉಲಮಾ-ಎ-ಹಿಂದ್ (JUH) ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ನಿರ್ಣಾಯಕ ಬೇಡಿಕೆಗಳನ್ನು ಮುಂದಿಟ್ಟಿದೆ:

*ಅಸ್ಸಾಂ ಬಿಕ್ಕಟ್ಟಿಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ

*ಸ್ಥಳಾಂತರಗೊಂಡ ಕುಟುಂಬಗಳಿಗೆ ತಕ್ಷಣದ ಮಾನವೀಯ ನೆರವು ಒದಗಿಸುವುದು

*ನೆರವು ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ತಕ್ಷಣ ಪ್ರವೇಶ ರಸ್ತೆಗಳನ್ನು ಪುನಃ ತೆರೆಯುವುದು

*ಜುಲೈ 17ರ ಗುಂಡಿನ ದಾಳಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ನ್ಯಾಯಾಂಗ ಕ್ರಮ ಜರುಗಿಸುವುದು

*ಮೃತಪಟ್ಟವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು

*ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಪರ್ಯಾಯ ಭೂಮಿಯಲ್ಲಿ ಸಂಪೂರ್ಣ ಪುನರ್ವಸತಿ ಕಲ್ಪಿಸುವುದು

*ಎಲ್ಲಾ ಮುಂದಿನ ತೆರವು ಕಾರ್ಯಾಚರಣೆಗಳನ್ನು ತಕ್ಷಣ ನಿಲ್ಲಿಸಿ ಮತ್ತು ‘ಬಾಂಗ್ಲಾದೇಶಿ’ ಎಂಬ ತಪ್ಪು ಹಣೆಪಟ್ಟಿಯನ್ನು ಹಿಂತೆಗೆದುಕೊಳ್ಳುವುದು

*ತೆರವು ಕಾರ್ಯಾಚರಣೆಗಳು ಮತ್ತು ಪೊಲೀಸ್ ಅತಿರೇಕಗಳ ಬಗ್ಗೆ ಸಮಗ್ರ ನ್ಯಾಯಾಂಗ ವಿಚಾರಣೆಗೆ ಆದೇಶಿಸುವುದು

JUH ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ನೇತೃತ್ವದ ನಿಯೋಗವು ಅಸ್ಸಾಂನ ಮುಸ್ಲಿಮರ ವಿರುದ್ಧದ ‘ಉದ್ದೇಶಿತ ಅಭಿಯಾನ’ವನ್ನು ಖಂಡಿಸಿದೆ. ಈ ವಿಷಯವನ್ನು ರಾಷ್ಟ್ರೀಯ ವೇದಿಕೆಗಳು, ನ್ಯಾಯಾಂಗ ಮತ್ತು ನಾಗರಿಕ ಸಮಾಜಕ್ಕೆ ಕೊಂಡೊಯ್ಯಲು ಜಮಿಯತ್ ತಂಡ ದೃಢ ಪ್ರತಿಜ್ಞೆ ಮಾಡಿದೆ. ‘ಇದು ಸ್ಥಳೀಯ ದುರಂತವಲ್ಲ, ರಾಷ್ಟ್ರೀಯ ತುರ್ತುಸ್ಥಿತಿ. ನ್ಯಾಯ ದೊರೆಯುವವರೆಗೂ ನಾವು ಹೋರಾಡುತ್ತೇವೆ’ ಎಂದು JUH ಪ್ರತಿನಿಧಿಯೊಬ್ಬರು ಘೋಷಿಸಿದ್ದಾರೆ.

UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...