Homeಮುಖಪುಟಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ - ಕೇಂದ್ರದ ಮಧ್ಯಪ್ರವೇಶಕ್ಕೆ...

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

- Advertisement -
- Advertisement -

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು ಇದು ವಸಾಹತುಶಾಹಿ ಕಾಲದ ಮುತ್ತಿಗೆಯ ದಮನಕಾರಿ ಸ್ವರೂಪವನ್ನು ನೆನಪಿಸುತ್ತದೆ ಎಂದು ವಿವರಿಸಿದೆ.

ಅಸ್ಸಾಂನಲ್ಲಿ ಆಘಾತಕಾರಿ ಪೊಲೀಸ್ ದೌರ್ಜನ್ಯ: ಜುಲೈ 17ರಂದು ಗೋಲ್ಪಾರಾ ಜಿಲ್ಲೆಯ ಅಶುಡುಬಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿದ್ದ, ನಿರಾಯುಧ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜುಲೈ 12ರ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತನಾಗಿದ್ದ ಈ ಬಾಲಕ, ಆಹಾರಕ್ಕಾಗಿ ಪ್ರತಿಭಟಿಸುತ್ತಿದ್ದಾಗ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ‘ಇದು ಮಾರಣಾಂತಿಕ ಮತ್ತು ಸಂಪೂರ್ಣ ಅಸಮರ್ಥನೀಯ ಪ್ರತಿಕ್ರಿಯೆ’ ಎಂದು JUH ವರದಿ ಹೇಳಿದೆ.

ಆಘಾತಕಾರಿ ವರದಿ: ಅಸ್ಸಾಂನಲ್ಲಿ ಭಾರೀ ಸ್ಥಳಾಂತರದ ಜೊತೆಗೆ ಪರಿಹಾರ ಕಾರ್ಯಾಚರಣೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಧುಬ್ರಿ ಜಿಲ್ಲೆಯ ಚರಕಾತ್ರಾ, ಸಂತೋಷಪುರ ಮತ್ತು ಚರವಬಕ್ರಾ ಗ್ರಾಮಗಳಿಂದ 5,700 ನೋಂದಾಯಿತ ಮತದಾರರು ಸೇರಿದಂತೆ 20,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು JUH ವರದಿ ತಿಳಿಸಿದೆ. ಬ್ರಹ್ಮಪುತ್ರ ನದಿಯ ಮರಳದಿಬ್ಬಗಳಲ್ಲಿ ಶುದ್ಧ ನೀರು, ಆಶ್ರಯ, ಮತ್ತು ನೈರ್ಮಲ್ಯವಿಲ್ಲದೆ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಈ ಪ್ರದೇಶಗಳ ಮೇಲೆ ಅಸ್ಸಾಂ ಸರ್ಕಾರವು ನಿರ್ದಯವಾಗಿ ಮುತ್ತಿಗೆಯನ್ನು ಹೇರಿದೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಕೈಪಂಪ್‌ಗಳು, ಶೌಚಾಲಯಗಳನ್ನು ನಾಶಪಡಿಸಿದ್ದು ಮಾತ್ರವಲ್ಲದೆ, ಪರಿಹಾರ ತಲುಪಿಸುತ್ತಿದ್ದ ಎನ್‌ಜಿಒಗಳು ಮತ್ತು ಜಮಿಯತ್ ತಂಡಕ್ಕೂ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ.

ಸೌರಶಕ್ತಿ ಯೋಜನೆ ನೆಪದಲ್ಲಿ ಕಾರ್ಪೊರೇಟ್ ಬೆಂಬಲಿತ ಭೂಕಬಳಿಕೆ!: ಜಮಿಯತ್‌ನ ವರದಿಯ ಪ್ರಕಾರ, ಈ ಕಾರ್ಯಾಚರಣೆಗಳ ನಿಜವಾದ ಉದ್ದೇಶ ‘ಬಡ ಮುಸ್ಲಿಮರನ್ನು ಸ್ಥಳಾಂತರಿಸುವುದು ಮತ್ತು ಭೂಮಿಯನ್ನು ಕಬಳಿಸುವುದು’ ಮಾತ್ರವಾಗಿದೆ. ಈ ಸ್ಥಳಾಂತರವು ಪರಿಸರ ಅಥವಾ ಅಭಿವೃದ್ಧಿಯ ಉದ್ದೇಶದಿಂದ ನಡೆಯುತ್ತಿಲ್ಲವೆಂದು ಅದು ಹೇಳಿದೆ. ‘ಮತದಾರರ ಗುರುತಿನ ಚೀಟಿಗಳು ಮತ್ತು ಭೂ ದಾಖಲೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ವಿದೇಶಿಯರು ಎಂದು ಹಣೆಪಟ್ಟಿ ಕಟ್ಟಿ ಅಸ್ಸಾಂನ ಮುಸ್ಲಿಮರನ್ನು ಅಮಾನವೀಯಗೊಳಿಸುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಅಭಿಯಾನದ ಭಾಗವಾಗಿ ಈ ಸ್ಥಳಾಂತರ ನಡೆಯುತ್ತಿದೆ ಎಂದು JUH ವರದಿ ತೀವ್ರವಾಗಿ ಖಂಡಿಸಿದೆ.

JUH ವರದಿಯ ತುರ್ತು ಬೇಡಿಕೆಗಳು:

ಜಮಿಯತ್ ಉಲಮಾ-ಎ-ಹಿಂದ್ (JUH) ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ನಿರ್ಣಾಯಕ ಬೇಡಿಕೆಗಳನ್ನು ಮುಂದಿಟ್ಟಿದೆ:

*ಅಸ್ಸಾಂ ಬಿಕ್ಕಟ್ಟಿಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ

*ಸ್ಥಳಾಂತರಗೊಂಡ ಕುಟುಂಬಗಳಿಗೆ ತಕ್ಷಣದ ಮಾನವೀಯ ನೆರವು ಒದಗಿಸುವುದು

*ನೆರವು ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ತಕ್ಷಣ ಪ್ರವೇಶ ರಸ್ತೆಗಳನ್ನು ಪುನಃ ತೆರೆಯುವುದು

*ಜುಲೈ 17ರ ಗುಂಡಿನ ದಾಳಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ನ್ಯಾಯಾಂಗ ಕ್ರಮ ಜರುಗಿಸುವುದು

*ಮೃತಪಟ್ಟವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು

*ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಪರ್ಯಾಯ ಭೂಮಿಯಲ್ಲಿ ಸಂಪೂರ್ಣ ಪುನರ್ವಸತಿ ಕಲ್ಪಿಸುವುದು

*ಎಲ್ಲಾ ಮುಂದಿನ ತೆರವು ಕಾರ್ಯಾಚರಣೆಗಳನ್ನು ತಕ್ಷಣ ನಿಲ್ಲಿಸಿ ಮತ್ತು ‘ಬಾಂಗ್ಲಾದೇಶಿ’ ಎಂಬ ತಪ್ಪು ಹಣೆಪಟ್ಟಿಯನ್ನು ಹಿಂತೆಗೆದುಕೊಳ್ಳುವುದು

*ತೆರವು ಕಾರ್ಯಾಚರಣೆಗಳು ಮತ್ತು ಪೊಲೀಸ್ ಅತಿರೇಕಗಳ ಬಗ್ಗೆ ಸಮಗ್ರ ನ್ಯಾಯಾಂಗ ವಿಚಾರಣೆಗೆ ಆದೇಶಿಸುವುದು

JUH ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ನೇತೃತ್ವದ ನಿಯೋಗವು ಅಸ್ಸಾಂನ ಮುಸ್ಲಿಮರ ವಿರುದ್ಧದ ‘ಉದ್ದೇಶಿತ ಅಭಿಯಾನ’ವನ್ನು ಖಂಡಿಸಿದೆ. ಈ ವಿಷಯವನ್ನು ರಾಷ್ಟ್ರೀಯ ವೇದಿಕೆಗಳು, ನ್ಯಾಯಾಂಗ ಮತ್ತು ನಾಗರಿಕ ಸಮಾಜಕ್ಕೆ ಕೊಂಡೊಯ್ಯಲು ಜಮಿಯತ್ ತಂಡ ದೃಢ ಪ್ರತಿಜ್ಞೆ ಮಾಡಿದೆ. ‘ಇದು ಸ್ಥಳೀಯ ದುರಂತವಲ್ಲ, ರಾಷ್ಟ್ರೀಯ ತುರ್ತುಸ್ಥಿತಿ. ನ್ಯಾಯ ದೊರೆಯುವವರೆಗೂ ನಾವು ಹೋರಾಡುತ್ತೇವೆ’ ಎಂದು JUH ಪ್ರತಿನಿಧಿಯೊಬ್ಬರು ಘೋಷಿಸಿದ್ದಾರೆ.

UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...