Homeಮುಖಪುಟಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ - ಕೇಂದ್ರದ ಮಧ್ಯಪ್ರವೇಶಕ್ಕೆ...

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

- Advertisement -
- Advertisement -

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು ಇದು ವಸಾಹತುಶಾಹಿ ಕಾಲದ ಮುತ್ತಿಗೆಯ ದಮನಕಾರಿ ಸ್ವರೂಪವನ್ನು ನೆನಪಿಸುತ್ತದೆ ಎಂದು ವಿವರಿಸಿದೆ.

ಅಸ್ಸಾಂನಲ್ಲಿ ಆಘಾತಕಾರಿ ಪೊಲೀಸ್ ದೌರ್ಜನ್ಯ: ಜುಲೈ 17ರಂದು ಗೋಲ್ಪಾರಾ ಜಿಲ್ಲೆಯ ಅಶುಡುಬಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿದ್ದ, ನಿರಾಯುಧ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜುಲೈ 12ರ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತನಾಗಿದ್ದ ಈ ಬಾಲಕ, ಆಹಾರಕ್ಕಾಗಿ ಪ್ರತಿಭಟಿಸುತ್ತಿದ್ದಾಗ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ‘ಇದು ಮಾರಣಾಂತಿಕ ಮತ್ತು ಸಂಪೂರ್ಣ ಅಸಮರ್ಥನೀಯ ಪ್ರತಿಕ್ರಿಯೆ’ ಎಂದು JUH ವರದಿ ಹೇಳಿದೆ.

ಆಘಾತಕಾರಿ ವರದಿ: ಅಸ್ಸಾಂನಲ್ಲಿ ಭಾರೀ ಸ್ಥಳಾಂತರದ ಜೊತೆಗೆ ಪರಿಹಾರ ಕಾರ್ಯಾಚರಣೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಧುಬ್ರಿ ಜಿಲ್ಲೆಯ ಚರಕಾತ್ರಾ, ಸಂತೋಷಪುರ ಮತ್ತು ಚರವಬಕ್ರಾ ಗ್ರಾಮಗಳಿಂದ 5,700 ನೋಂದಾಯಿತ ಮತದಾರರು ಸೇರಿದಂತೆ 20,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು JUH ವರದಿ ತಿಳಿಸಿದೆ. ಬ್ರಹ್ಮಪುತ್ರ ನದಿಯ ಮರಳದಿಬ್ಬಗಳಲ್ಲಿ ಶುದ್ಧ ನೀರು, ಆಶ್ರಯ, ಮತ್ತು ನೈರ್ಮಲ್ಯವಿಲ್ಲದೆ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಈ ಪ್ರದೇಶಗಳ ಮೇಲೆ ಅಸ್ಸಾಂ ಸರ್ಕಾರವು ನಿರ್ದಯವಾಗಿ ಮುತ್ತಿಗೆಯನ್ನು ಹೇರಿದೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಕೈಪಂಪ್‌ಗಳು, ಶೌಚಾಲಯಗಳನ್ನು ನಾಶಪಡಿಸಿದ್ದು ಮಾತ್ರವಲ್ಲದೆ, ಪರಿಹಾರ ತಲುಪಿಸುತ್ತಿದ್ದ ಎನ್‌ಜಿಒಗಳು ಮತ್ತು ಜಮಿಯತ್ ತಂಡಕ್ಕೂ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ.

ಸೌರಶಕ್ತಿ ಯೋಜನೆ ನೆಪದಲ್ಲಿ ಕಾರ್ಪೊರೇಟ್ ಬೆಂಬಲಿತ ಭೂಕಬಳಿಕೆ!: ಜಮಿಯತ್‌ನ ವರದಿಯ ಪ್ರಕಾರ, ಈ ಕಾರ್ಯಾಚರಣೆಗಳ ನಿಜವಾದ ಉದ್ದೇಶ ‘ಬಡ ಮುಸ್ಲಿಮರನ್ನು ಸ್ಥಳಾಂತರಿಸುವುದು ಮತ್ತು ಭೂಮಿಯನ್ನು ಕಬಳಿಸುವುದು’ ಮಾತ್ರವಾಗಿದೆ. ಈ ಸ್ಥಳಾಂತರವು ಪರಿಸರ ಅಥವಾ ಅಭಿವೃದ್ಧಿಯ ಉದ್ದೇಶದಿಂದ ನಡೆಯುತ್ತಿಲ್ಲವೆಂದು ಅದು ಹೇಳಿದೆ. ‘ಮತದಾರರ ಗುರುತಿನ ಚೀಟಿಗಳು ಮತ್ತು ಭೂ ದಾಖಲೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ವಿದೇಶಿಯರು ಎಂದು ಹಣೆಪಟ್ಟಿ ಕಟ್ಟಿ ಅಸ್ಸಾಂನ ಮುಸ್ಲಿಮರನ್ನು ಅಮಾನವೀಯಗೊಳಿಸುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಅಭಿಯಾನದ ಭಾಗವಾಗಿ ಈ ಸ್ಥಳಾಂತರ ನಡೆಯುತ್ತಿದೆ ಎಂದು JUH ವರದಿ ತೀವ್ರವಾಗಿ ಖಂಡಿಸಿದೆ.

JUH ವರದಿಯ ತುರ್ತು ಬೇಡಿಕೆಗಳು:

ಜಮಿಯತ್ ಉಲಮಾ-ಎ-ಹಿಂದ್ (JUH) ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ನಿರ್ಣಾಯಕ ಬೇಡಿಕೆಗಳನ್ನು ಮುಂದಿಟ್ಟಿದೆ:

*ಅಸ್ಸಾಂ ಬಿಕ್ಕಟ್ಟಿಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ

*ಸ್ಥಳಾಂತರಗೊಂಡ ಕುಟುಂಬಗಳಿಗೆ ತಕ್ಷಣದ ಮಾನವೀಯ ನೆರವು ಒದಗಿಸುವುದು

*ನೆರವು ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ತಕ್ಷಣ ಪ್ರವೇಶ ರಸ್ತೆಗಳನ್ನು ಪುನಃ ತೆರೆಯುವುದು

*ಜುಲೈ 17ರ ಗುಂಡಿನ ದಾಳಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ನ್ಯಾಯಾಂಗ ಕ್ರಮ ಜರುಗಿಸುವುದು

*ಮೃತಪಟ್ಟವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು

*ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಪರ್ಯಾಯ ಭೂಮಿಯಲ್ಲಿ ಸಂಪೂರ್ಣ ಪುನರ್ವಸತಿ ಕಲ್ಪಿಸುವುದು

*ಎಲ್ಲಾ ಮುಂದಿನ ತೆರವು ಕಾರ್ಯಾಚರಣೆಗಳನ್ನು ತಕ್ಷಣ ನಿಲ್ಲಿಸಿ ಮತ್ತು ‘ಬಾಂಗ್ಲಾದೇಶಿ’ ಎಂಬ ತಪ್ಪು ಹಣೆಪಟ್ಟಿಯನ್ನು ಹಿಂತೆಗೆದುಕೊಳ್ಳುವುದು

*ತೆರವು ಕಾರ್ಯಾಚರಣೆಗಳು ಮತ್ತು ಪೊಲೀಸ್ ಅತಿರೇಕಗಳ ಬಗ್ಗೆ ಸಮಗ್ರ ನ್ಯಾಯಾಂಗ ವಿಚಾರಣೆಗೆ ಆದೇಶಿಸುವುದು

JUH ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ನೇತೃತ್ವದ ನಿಯೋಗವು ಅಸ್ಸಾಂನ ಮುಸ್ಲಿಮರ ವಿರುದ್ಧದ ‘ಉದ್ದೇಶಿತ ಅಭಿಯಾನ’ವನ್ನು ಖಂಡಿಸಿದೆ. ಈ ವಿಷಯವನ್ನು ರಾಷ್ಟ್ರೀಯ ವೇದಿಕೆಗಳು, ನ್ಯಾಯಾಂಗ ಮತ್ತು ನಾಗರಿಕ ಸಮಾಜಕ್ಕೆ ಕೊಂಡೊಯ್ಯಲು ಜಮಿಯತ್ ತಂಡ ದೃಢ ಪ್ರತಿಜ್ಞೆ ಮಾಡಿದೆ. ‘ಇದು ಸ್ಥಳೀಯ ದುರಂತವಲ್ಲ, ರಾಷ್ಟ್ರೀಯ ತುರ್ತುಸ್ಥಿತಿ. ನ್ಯಾಯ ದೊರೆಯುವವರೆಗೂ ನಾವು ಹೋರಾಡುತ್ತೇವೆ’ ಎಂದು JUH ಪ್ರತಿನಿಧಿಯೊಬ್ಬರು ಘೋಷಿಸಿದ್ದಾರೆ.

UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...