Homeಮುಖಪುಟಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ - ಕೇಂದ್ರದ ಮಧ್ಯಪ್ರವೇಶಕ್ಕೆ...

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

- Advertisement -
- Advertisement -

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು ಇದು ವಸಾಹತುಶಾಹಿ ಕಾಲದ ಮುತ್ತಿಗೆಯ ದಮನಕಾರಿ ಸ್ವರೂಪವನ್ನು ನೆನಪಿಸುತ್ತದೆ ಎಂದು ವಿವರಿಸಿದೆ.

ಅಸ್ಸಾಂನಲ್ಲಿ ಆಘಾತಕಾರಿ ಪೊಲೀಸ್ ದೌರ್ಜನ್ಯ: ಜುಲೈ 17ರಂದು ಗೋಲ್ಪಾರಾ ಜಿಲ್ಲೆಯ ಅಶುಡುಬಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿದ್ದ, ನಿರಾಯುಧ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜುಲೈ 12ರ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತನಾಗಿದ್ದ ಈ ಬಾಲಕ, ಆಹಾರಕ್ಕಾಗಿ ಪ್ರತಿಭಟಿಸುತ್ತಿದ್ದಾಗ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ‘ಇದು ಮಾರಣಾಂತಿಕ ಮತ್ತು ಸಂಪೂರ್ಣ ಅಸಮರ್ಥನೀಯ ಪ್ರತಿಕ್ರಿಯೆ’ ಎಂದು JUH ವರದಿ ಹೇಳಿದೆ.

ಆಘಾತಕಾರಿ ವರದಿ: ಅಸ್ಸಾಂನಲ್ಲಿ ಭಾರೀ ಸ್ಥಳಾಂತರದ ಜೊತೆಗೆ ಪರಿಹಾರ ಕಾರ್ಯಾಚರಣೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಧುಬ್ರಿ ಜಿಲ್ಲೆಯ ಚರಕಾತ್ರಾ, ಸಂತೋಷಪುರ ಮತ್ತು ಚರವಬಕ್ರಾ ಗ್ರಾಮಗಳಿಂದ 5,700 ನೋಂದಾಯಿತ ಮತದಾರರು ಸೇರಿದಂತೆ 20,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು JUH ವರದಿ ತಿಳಿಸಿದೆ. ಬ್ರಹ್ಮಪುತ್ರ ನದಿಯ ಮರಳದಿಬ್ಬಗಳಲ್ಲಿ ಶುದ್ಧ ನೀರು, ಆಶ್ರಯ, ಮತ್ತು ನೈರ್ಮಲ್ಯವಿಲ್ಲದೆ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಈ ಪ್ರದೇಶಗಳ ಮೇಲೆ ಅಸ್ಸಾಂ ಸರ್ಕಾರವು ನಿರ್ದಯವಾಗಿ ಮುತ್ತಿಗೆಯನ್ನು ಹೇರಿದೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಕೈಪಂಪ್‌ಗಳು, ಶೌಚಾಲಯಗಳನ್ನು ನಾಶಪಡಿಸಿದ್ದು ಮಾತ್ರವಲ್ಲದೆ, ಪರಿಹಾರ ತಲುಪಿಸುತ್ತಿದ್ದ ಎನ್‌ಜಿಒಗಳು ಮತ್ತು ಜಮಿಯತ್ ತಂಡಕ್ಕೂ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ.

ಸೌರಶಕ್ತಿ ಯೋಜನೆ ನೆಪದಲ್ಲಿ ಕಾರ್ಪೊರೇಟ್ ಬೆಂಬಲಿತ ಭೂಕಬಳಿಕೆ!: ಜಮಿಯತ್‌ನ ವರದಿಯ ಪ್ರಕಾರ, ಈ ಕಾರ್ಯಾಚರಣೆಗಳ ನಿಜವಾದ ಉದ್ದೇಶ ‘ಬಡ ಮುಸ್ಲಿಮರನ್ನು ಸ್ಥಳಾಂತರಿಸುವುದು ಮತ್ತು ಭೂಮಿಯನ್ನು ಕಬಳಿಸುವುದು’ ಮಾತ್ರವಾಗಿದೆ. ಈ ಸ್ಥಳಾಂತರವು ಪರಿಸರ ಅಥವಾ ಅಭಿವೃದ್ಧಿಯ ಉದ್ದೇಶದಿಂದ ನಡೆಯುತ್ತಿಲ್ಲವೆಂದು ಅದು ಹೇಳಿದೆ. ‘ಮತದಾರರ ಗುರುತಿನ ಚೀಟಿಗಳು ಮತ್ತು ಭೂ ದಾಖಲೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ವಿದೇಶಿಯರು ಎಂದು ಹಣೆಪಟ್ಟಿ ಕಟ್ಟಿ ಅಸ್ಸಾಂನ ಮುಸ್ಲಿಮರನ್ನು ಅಮಾನವೀಯಗೊಳಿಸುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಅಭಿಯಾನದ ಭಾಗವಾಗಿ ಈ ಸ್ಥಳಾಂತರ ನಡೆಯುತ್ತಿದೆ ಎಂದು JUH ವರದಿ ತೀವ್ರವಾಗಿ ಖಂಡಿಸಿದೆ.

JUH ವರದಿಯ ತುರ್ತು ಬೇಡಿಕೆಗಳು:

ಜಮಿಯತ್ ಉಲಮಾ-ಎ-ಹಿಂದ್ (JUH) ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ನಿರ್ಣಾಯಕ ಬೇಡಿಕೆಗಳನ್ನು ಮುಂದಿಟ್ಟಿದೆ:

*ಅಸ್ಸಾಂ ಬಿಕ್ಕಟ್ಟಿಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ

*ಸ್ಥಳಾಂತರಗೊಂಡ ಕುಟುಂಬಗಳಿಗೆ ತಕ್ಷಣದ ಮಾನವೀಯ ನೆರವು ಒದಗಿಸುವುದು

*ನೆರವು ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ತಕ್ಷಣ ಪ್ರವೇಶ ರಸ್ತೆಗಳನ್ನು ಪುನಃ ತೆರೆಯುವುದು

*ಜುಲೈ 17ರ ಗುಂಡಿನ ದಾಳಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ನ್ಯಾಯಾಂಗ ಕ್ರಮ ಜರುಗಿಸುವುದು

*ಮೃತಪಟ್ಟವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು

*ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಪರ್ಯಾಯ ಭೂಮಿಯಲ್ಲಿ ಸಂಪೂರ್ಣ ಪುನರ್ವಸತಿ ಕಲ್ಪಿಸುವುದು

*ಎಲ್ಲಾ ಮುಂದಿನ ತೆರವು ಕಾರ್ಯಾಚರಣೆಗಳನ್ನು ತಕ್ಷಣ ನಿಲ್ಲಿಸಿ ಮತ್ತು ‘ಬಾಂಗ್ಲಾದೇಶಿ’ ಎಂಬ ತಪ್ಪು ಹಣೆಪಟ್ಟಿಯನ್ನು ಹಿಂತೆಗೆದುಕೊಳ್ಳುವುದು

*ತೆರವು ಕಾರ್ಯಾಚರಣೆಗಳು ಮತ್ತು ಪೊಲೀಸ್ ಅತಿರೇಕಗಳ ಬಗ್ಗೆ ಸಮಗ್ರ ನ್ಯಾಯಾಂಗ ವಿಚಾರಣೆಗೆ ಆದೇಶಿಸುವುದು

JUH ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ನೇತೃತ್ವದ ನಿಯೋಗವು ಅಸ್ಸಾಂನ ಮುಸ್ಲಿಮರ ವಿರುದ್ಧದ ‘ಉದ್ದೇಶಿತ ಅಭಿಯಾನ’ವನ್ನು ಖಂಡಿಸಿದೆ. ಈ ವಿಷಯವನ್ನು ರಾಷ್ಟ್ರೀಯ ವೇದಿಕೆಗಳು, ನ್ಯಾಯಾಂಗ ಮತ್ತು ನಾಗರಿಕ ಸಮಾಜಕ್ಕೆ ಕೊಂಡೊಯ್ಯಲು ಜಮಿಯತ್ ತಂಡ ದೃಢ ಪ್ರತಿಜ್ಞೆ ಮಾಡಿದೆ. ‘ಇದು ಸ್ಥಳೀಯ ದುರಂತವಲ್ಲ, ರಾಷ್ಟ್ರೀಯ ತುರ್ತುಸ್ಥಿತಿ. ನ್ಯಾಯ ದೊರೆಯುವವರೆಗೂ ನಾವು ಹೋರಾಡುತ್ತೇವೆ’ ಎಂದು JUH ಪ್ರತಿನಿಧಿಯೊಬ್ಬರು ಘೋಷಿಸಿದ್ದಾರೆ.

UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...