Homeಮುಖಪುಟಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

- Advertisement -
- Advertisement -

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ನಡೆದ ಪೊಲೀಸ್ ದೌರ್ಜನ್ಯ ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿವೆ. ಅದರಲ್ಲಿ ವಿದ್ಯಾರ್ಥಿಯೊಬ್ಬ ಎರಡು ಕೈಯಲ್ಲಿ ಕಲ್ಲು ಹಿಡಿದಿದ್ದ ಎಂದು ಹಲವಾರು ಚಾನೆಲ್‌ಗಳು ಪ್ರತಿಪಾದಿಸಿವೆ.

ಫೆಬ್ರುವರಿ 16ರಂದು ಇಂಡಿಯಾ ಟುಡೇ ಚಾನೆಲ್ ಎಸ್‌ಐಟಿಯ ಅಧಿಕಾರಿಯೊಬ್ಬರು ನೀಡಿದ ಫೂಟೇಜ್ ಅನ್ನು ಅಥೆಂಟಿಕ್ ಎಂದು ತೋರಿಸುತ್ತ, ವಿದ್ಯಾರ್ಥಿಗಳು ಗ್ರಂಥಾಲಯದೊಳಕ್ಕೆ ಕಲ್ಲು ಒಯ್ದಿದ್ದರು ಎಂದು ಪ್ರತಿಪಾದಿಸಿತು. ಕೊಂಚ ಲಿಬರಲ್ ಎನಿಸಿದ ಈ ಚಾನೆಲ್ಲೇ ಹೀಗೆ ಮೂರ್ಖತನ ಪ್ರದರ್ಶಿಸಿದ ಮೇಲೆ ಹೆಂಡ ಕುಡಿದ ಮಂಗಗಳಂತಿರುವ ಸ್ವರಾಜ್ ಇಂಡಿಯಾ, ಒಪಿ ಇಂಡಿಯಾದಂತಹ ಖಟ್ಟರ್ ಬಲಪಂಥಿಯ ವೆಬ್‌ಸೈಟ್‌ಗಳಂತೂ ಇದನ್ನು ವ್ಯಾಪಕವಾಗಿ ಹರಡಿದವು.

ಆದರೆ ಫ್ಯಾಕ್ಟ್ ಚೆಕ್ ಮಾಡುವ ದಿ ಕ್ವಿಂಟ್ ಸೇರಿದಂತೆ ಇಂಗ್ಲಿಷ್ ಸುದ್ದಿ ಸಂಸ್ಥೆಗಳಾದ ಟೈಮ್ಸ್ ಆಫ್ ಇಂಡಿಯಾ, ಟೈಮ್ಸ್ ನೌ, ರಿಪಬ್ಲಿಕ್ ಭಾರತ್, ಮಿರರ್ ನೌ, ಡಿಎನ್‌ಎ ಮತ್ತು ಹಿಂದಿ ಸುದ್ದಿ ಸಂಸ್ಥೆಗಳಾದ ಜೀ ನ್ಯೂಸ್, ಆಜ್‌ತಕ್, ಇಂಡಿಯಾ ಟುಡೇ, ಎನ್‌ಡಿಟಿವಿ ಇಂಡಿಯಾ, ನ್ಯೂಸ್ ನೇಷನ್ ಕೂಡ ಇದೇ ಸತ್ಯ ಎಂಬಂತೆ ಪ್ರತಿಪಾದಿಸಿದವು.

ಕ್ಲಿಪ್ಪಿಂಗ್‌ನಲ್ಲಿ ಮೇಲ್ನೋಟಕ್ಕೆ ವಾಲೆಟ್ ಕಲ್ಲಿನಂತೆ ಕಾಣುತ್ತದೆ. ವಿಡಿಯೋವನ್ನು ಒಡೆದೊಡೆದು ಜೂಮ್‌ ಮಾಡಿ ಸೂಕ್ಷ್ಮವಾಗಿ ನೋಡಿದಾಗ ಕಲ್ಲು ಕರಗುವ ಸಮಯ ಸಿಗುತ್ತದೆ. ಅಲ್ಟ್ ನ್ಯೂಸ್ ಈ ಕೆಲಸವನ್ನು ಮಾಡಿದೆ.

ಇಂಡಿಯಾ ಟುಡೇ ತೋರಿಸಿದ ಫೂಟೇಜ್ ಇರುವ ವಿಡಿಯೋದ ಹೈ ರೆಸ್ಯುಲೂಷನ್ ಆವೃತ್ತಿಯನ್ನು ಪಡೆದುಕೊಂಡ ಅಲ್ಟ್ ನ್ಯೂಸ್, ವಿಡಿಯೋವನ್ನು ಸ್ಲೋ ಮಾಡಿ, ಸಣ್ಣ ಸಣ್ಣ ಫ್ರೇಮ್‌ಗಳಾಗಿ ಒಡೆದು ವಿಶ್ಲೇಷಣೆ ಮಾಡಿದೆ.

ಸತ್ಯ ಏನೆಂದರೆ, ವಿದ್ಯಾರ್ಥಿ ಒಂದು ಕೈಯಲ್ಲಿ ವಾಲೆಟ್ ಮತ್ತು ಇನ್ನೊಂದು ಕೈಯಲ್ಲಿ  ಬಹುಷ: ಮೊಬೈಲ್ ಹಿಡಿದಿದ್ದಾನೆ. ಚಿತ್ರಗಳಲ್ಲಿ ಇದನ್ನು ಗಮನಿಸಬಹುದು.

ಆದರೆ, ಮಾಹಿತಿ ಸಿಕ್ಕ ತಕ್ಷಣ ಹಿಂದೆ ಮುಂದೆ ನೋಡದೇ ಪ್ರಸಾರ ಮಾಡುವ ಕಲ್ಲು ಮನಸ್ಸುಗಳನ್ನು ಕರಗಿಸುವುದು ಸದ್ಯಕ್ಕೆ ಕಷ್ಟವೇ. ಆದರೆ, ಪ್ರಗತಿಪರ ಎನಿಸಿದ ಹಲವಾರು ಚಾನೆಲ್‌ಗಳು ಈ ವಿಷಯದಲ್ಲಿ ದುಡುಕಿದ್ದು ಖೇದಕರ. ಎಸ್‌ಐಟಿಯ ಅಧಿಕಾರಿ ಕ್ಲಿಪ್ಪಿಂಗ್ ಕೊಟ್ಟಾಗಲೇ ಇಂಡಿಯಾ ಟುಡೇ ಟ್ರಾಪ್‌ ಗೆ ಬಿದ್ದಿತ್ತು ಅಲ್ಲವೇ?

ಈಗಲಾದರೂ ಪೊಲೀಸರ  ಆ ಅಮಾನುಷ ದೌರ್ಜನ್ಯವನ್ನು ಈ ಟಿವಿ ಚಾನೆಲ್‌ಗಳು ಖಂಡಿಸುತ್ತವೇ ಎಂದು ಆಶಿಸೋಣವೇ?


ಇದನ್ನೂ ಓದಿ | ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...