Homeಮುಖಪುಟಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

- Advertisement -
- Advertisement -

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ನಡೆದ ಪೊಲೀಸ್ ದೌರ್ಜನ್ಯ ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿವೆ. ಅದರಲ್ಲಿ ವಿದ್ಯಾರ್ಥಿಯೊಬ್ಬ ಎರಡು ಕೈಯಲ್ಲಿ ಕಲ್ಲು ಹಿಡಿದಿದ್ದ ಎಂದು ಹಲವಾರು ಚಾನೆಲ್‌ಗಳು ಪ್ರತಿಪಾದಿಸಿವೆ.

ಫೆಬ್ರುವರಿ 16ರಂದು ಇಂಡಿಯಾ ಟುಡೇ ಚಾನೆಲ್ ಎಸ್‌ಐಟಿಯ ಅಧಿಕಾರಿಯೊಬ್ಬರು ನೀಡಿದ ಫೂಟೇಜ್ ಅನ್ನು ಅಥೆಂಟಿಕ್ ಎಂದು ತೋರಿಸುತ್ತ, ವಿದ್ಯಾರ್ಥಿಗಳು ಗ್ರಂಥಾಲಯದೊಳಕ್ಕೆ ಕಲ್ಲು ಒಯ್ದಿದ್ದರು ಎಂದು ಪ್ರತಿಪಾದಿಸಿತು. ಕೊಂಚ ಲಿಬರಲ್ ಎನಿಸಿದ ಈ ಚಾನೆಲ್ಲೇ ಹೀಗೆ ಮೂರ್ಖತನ ಪ್ರದರ್ಶಿಸಿದ ಮೇಲೆ ಹೆಂಡ ಕುಡಿದ ಮಂಗಗಳಂತಿರುವ ಸ್ವರಾಜ್ ಇಂಡಿಯಾ, ಒಪಿ ಇಂಡಿಯಾದಂತಹ ಖಟ್ಟರ್ ಬಲಪಂಥಿಯ ವೆಬ್‌ಸೈಟ್‌ಗಳಂತೂ ಇದನ್ನು ವ್ಯಾಪಕವಾಗಿ ಹರಡಿದವು.

ಆದರೆ ಫ್ಯಾಕ್ಟ್ ಚೆಕ್ ಮಾಡುವ ದಿ ಕ್ವಿಂಟ್ ಸೇರಿದಂತೆ ಇಂಗ್ಲಿಷ್ ಸುದ್ದಿ ಸಂಸ್ಥೆಗಳಾದ ಟೈಮ್ಸ್ ಆಫ್ ಇಂಡಿಯಾ, ಟೈಮ್ಸ್ ನೌ, ರಿಪಬ್ಲಿಕ್ ಭಾರತ್, ಮಿರರ್ ನೌ, ಡಿಎನ್‌ಎ ಮತ್ತು ಹಿಂದಿ ಸುದ್ದಿ ಸಂಸ್ಥೆಗಳಾದ ಜೀ ನ್ಯೂಸ್, ಆಜ್‌ತಕ್, ಇಂಡಿಯಾ ಟುಡೇ, ಎನ್‌ಡಿಟಿವಿ ಇಂಡಿಯಾ, ನ್ಯೂಸ್ ನೇಷನ್ ಕೂಡ ಇದೇ ಸತ್ಯ ಎಂಬಂತೆ ಪ್ರತಿಪಾದಿಸಿದವು.

ಕ್ಲಿಪ್ಪಿಂಗ್‌ನಲ್ಲಿ ಮೇಲ್ನೋಟಕ್ಕೆ ವಾಲೆಟ್ ಕಲ್ಲಿನಂತೆ ಕಾಣುತ್ತದೆ. ವಿಡಿಯೋವನ್ನು ಒಡೆದೊಡೆದು ಜೂಮ್‌ ಮಾಡಿ ಸೂಕ್ಷ್ಮವಾಗಿ ನೋಡಿದಾಗ ಕಲ್ಲು ಕರಗುವ ಸಮಯ ಸಿಗುತ್ತದೆ. ಅಲ್ಟ್ ನ್ಯೂಸ್ ಈ ಕೆಲಸವನ್ನು ಮಾಡಿದೆ.

ಇಂಡಿಯಾ ಟುಡೇ ತೋರಿಸಿದ ಫೂಟೇಜ್ ಇರುವ ವಿಡಿಯೋದ ಹೈ ರೆಸ್ಯುಲೂಷನ್ ಆವೃತ್ತಿಯನ್ನು ಪಡೆದುಕೊಂಡ ಅಲ್ಟ್ ನ್ಯೂಸ್, ವಿಡಿಯೋವನ್ನು ಸ್ಲೋ ಮಾಡಿ, ಸಣ್ಣ ಸಣ್ಣ ಫ್ರೇಮ್‌ಗಳಾಗಿ ಒಡೆದು ವಿಶ್ಲೇಷಣೆ ಮಾಡಿದೆ.

ಸತ್ಯ ಏನೆಂದರೆ, ವಿದ್ಯಾರ್ಥಿ ಒಂದು ಕೈಯಲ್ಲಿ ವಾಲೆಟ್ ಮತ್ತು ಇನ್ನೊಂದು ಕೈಯಲ್ಲಿ  ಬಹುಷ: ಮೊಬೈಲ್ ಹಿಡಿದಿದ್ದಾನೆ. ಚಿತ್ರಗಳಲ್ಲಿ ಇದನ್ನು ಗಮನಿಸಬಹುದು.

ಆದರೆ, ಮಾಹಿತಿ ಸಿಕ್ಕ ತಕ್ಷಣ ಹಿಂದೆ ಮುಂದೆ ನೋಡದೇ ಪ್ರಸಾರ ಮಾಡುವ ಕಲ್ಲು ಮನಸ್ಸುಗಳನ್ನು ಕರಗಿಸುವುದು ಸದ್ಯಕ್ಕೆ ಕಷ್ಟವೇ. ಆದರೆ, ಪ್ರಗತಿಪರ ಎನಿಸಿದ ಹಲವಾರು ಚಾನೆಲ್‌ಗಳು ಈ ವಿಷಯದಲ್ಲಿ ದುಡುಕಿದ್ದು ಖೇದಕರ. ಎಸ್‌ಐಟಿಯ ಅಧಿಕಾರಿ ಕ್ಲಿಪ್ಪಿಂಗ್ ಕೊಟ್ಟಾಗಲೇ ಇಂಡಿಯಾ ಟುಡೇ ಟ್ರಾಪ್‌ ಗೆ ಬಿದ್ದಿತ್ತು ಅಲ್ಲವೇ?

ಈಗಲಾದರೂ ಪೊಲೀಸರ  ಆ ಅಮಾನುಷ ದೌರ್ಜನ್ಯವನ್ನು ಈ ಟಿವಿ ಚಾನೆಲ್‌ಗಳು ಖಂಡಿಸುತ್ತವೇ ಎಂದು ಆಶಿಸೋಣವೇ?


ಇದನ್ನೂ ಓದಿ | ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...