Homeಮುಖಪುಟಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

ಜಾಮಿಯಾ ಹಿಂಸೆ | ವಿದ್ಯಾರ್ಥಿಗಳ ಕೈಯಲ್ಲಿ ಇದ್ದುದು ಕಲ್ಲಲ್ಲ, ವಾಲೆಟ್..

- Advertisement -
- Advertisement -

ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ನಡೆದ ಪೊಲೀಸ್ ದೌರ್ಜನ್ಯ ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬರುತ್ತಿವೆ. ಅದರಲ್ಲಿ ವಿದ್ಯಾರ್ಥಿಯೊಬ್ಬ ಎರಡು ಕೈಯಲ್ಲಿ ಕಲ್ಲು ಹಿಡಿದಿದ್ದ ಎಂದು ಹಲವಾರು ಚಾನೆಲ್‌ಗಳು ಪ್ರತಿಪಾದಿಸಿವೆ.

ಫೆಬ್ರುವರಿ 16ರಂದು ಇಂಡಿಯಾ ಟುಡೇ ಚಾನೆಲ್ ಎಸ್‌ಐಟಿಯ ಅಧಿಕಾರಿಯೊಬ್ಬರು ನೀಡಿದ ಫೂಟೇಜ್ ಅನ್ನು ಅಥೆಂಟಿಕ್ ಎಂದು ತೋರಿಸುತ್ತ, ವಿದ್ಯಾರ್ಥಿಗಳು ಗ್ರಂಥಾಲಯದೊಳಕ್ಕೆ ಕಲ್ಲು ಒಯ್ದಿದ್ದರು ಎಂದು ಪ್ರತಿಪಾದಿಸಿತು. ಕೊಂಚ ಲಿಬರಲ್ ಎನಿಸಿದ ಈ ಚಾನೆಲ್ಲೇ ಹೀಗೆ ಮೂರ್ಖತನ ಪ್ರದರ್ಶಿಸಿದ ಮೇಲೆ ಹೆಂಡ ಕುಡಿದ ಮಂಗಗಳಂತಿರುವ ಸ್ವರಾಜ್ ಇಂಡಿಯಾ, ಒಪಿ ಇಂಡಿಯಾದಂತಹ ಖಟ್ಟರ್ ಬಲಪಂಥಿಯ ವೆಬ್‌ಸೈಟ್‌ಗಳಂತೂ ಇದನ್ನು ವ್ಯಾಪಕವಾಗಿ ಹರಡಿದವು.

ಆದರೆ ಫ್ಯಾಕ್ಟ್ ಚೆಕ್ ಮಾಡುವ ದಿ ಕ್ವಿಂಟ್ ಸೇರಿದಂತೆ ಇಂಗ್ಲಿಷ್ ಸುದ್ದಿ ಸಂಸ್ಥೆಗಳಾದ ಟೈಮ್ಸ್ ಆಫ್ ಇಂಡಿಯಾ, ಟೈಮ್ಸ್ ನೌ, ರಿಪಬ್ಲಿಕ್ ಭಾರತ್, ಮಿರರ್ ನೌ, ಡಿಎನ್‌ಎ ಮತ್ತು ಹಿಂದಿ ಸುದ್ದಿ ಸಂಸ್ಥೆಗಳಾದ ಜೀ ನ್ಯೂಸ್, ಆಜ್‌ತಕ್, ಇಂಡಿಯಾ ಟುಡೇ, ಎನ್‌ಡಿಟಿವಿ ಇಂಡಿಯಾ, ನ್ಯೂಸ್ ನೇಷನ್ ಕೂಡ ಇದೇ ಸತ್ಯ ಎಂಬಂತೆ ಪ್ರತಿಪಾದಿಸಿದವು.

ಕ್ಲಿಪ್ಪಿಂಗ್‌ನಲ್ಲಿ ಮೇಲ್ನೋಟಕ್ಕೆ ವಾಲೆಟ್ ಕಲ್ಲಿನಂತೆ ಕಾಣುತ್ತದೆ. ವಿಡಿಯೋವನ್ನು ಒಡೆದೊಡೆದು ಜೂಮ್‌ ಮಾಡಿ ಸೂಕ್ಷ್ಮವಾಗಿ ನೋಡಿದಾಗ ಕಲ್ಲು ಕರಗುವ ಸಮಯ ಸಿಗುತ್ತದೆ. ಅಲ್ಟ್ ನ್ಯೂಸ್ ಈ ಕೆಲಸವನ್ನು ಮಾಡಿದೆ.

ಇಂಡಿಯಾ ಟುಡೇ ತೋರಿಸಿದ ಫೂಟೇಜ್ ಇರುವ ವಿಡಿಯೋದ ಹೈ ರೆಸ್ಯುಲೂಷನ್ ಆವೃತ್ತಿಯನ್ನು ಪಡೆದುಕೊಂಡ ಅಲ್ಟ್ ನ್ಯೂಸ್, ವಿಡಿಯೋವನ್ನು ಸ್ಲೋ ಮಾಡಿ, ಸಣ್ಣ ಸಣ್ಣ ಫ್ರೇಮ್‌ಗಳಾಗಿ ಒಡೆದು ವಿಶ್ಲೇಷಣೆ ಮಾಡಿದೆ.

ಸತ್ಯ ಏನೆಂದರೆ, ವಿದ್ಯಾರ್ಥಿ ಒಂದು ಕೈಯಲ್ಲಿ ವಾಲೆಟ್ ಮತ್ತು ಇನ್ನೊಂದು ಕೈಯಲ್ಲಿ  ಬಹುಷ: ಮೊಬೈಲ್ ಹಿಡಿದಿದ್ದಾನೆ. ಚಿತ್ರಗಳಲ್ಲಿ ಇದನ್ನು ಗಮನಿಸಬಹುದು.

ಆದರೆ, ಮಾಹಿತಿ ಸಿಕ್ಕ ತಕ್ಷಣ ಹಿಂದೆ ಮುಂದೆ ನೋಡದೇ ಪ್ರಸಾರ ಮಾಡುವ ಕಲ್ಲು ಮನಸ್ಸುಗಳನ್ನು ಕರಗಿಸುವುದು ಸದ್ಯಕ್ಕೆ ಕಷ್ಟವೇ. ಆದರೆ, ಪ್ರಗತಿಪರ ಎನಿಸಿದ ಹಲವಾರು ಚಾನೆಲ್‌ಗಳು ಈ ವಿಷಯದಲ್ಲಿ ದುಡುಕಿದ್ದು ಖೇದಕರ. ಎಸ್‌ಐಟಿಯ ಅಧಿಕಾರಿ ಕ್ಲಿಪ್ಪಿಂಗ್ ಕೊಟ್ಟಾಗಲೇ ಇಂಡಿಯಾ ಟುಡೇ ಟ್ರಾಪ್‌ ಗೆ ಬಿದ್ದಿತ್ತು ಅಲ್ಲವೇ?

ಈಗಲಾದರೂ ಪೊಲೀಸರ  ಆ ಅಮಾನುಷ ದೌರ್ಜನ್ಯವನ್ನು ಈ ಟಿವಿ ಚಾನೆಲ್‌ಗಳು ಖಂಡಿಸುತ್ತವೇ ಎಂದು ಆಶಿಸೋಣವೇ?


ಇದನ್ನೂ ಓದಿ | ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...