Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

      ಕರ್ನಾಟಕ

      ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

      ಕರ್ನಾಟಕ

      ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

      ಕರ್ನಾಟಕ

      ‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

      ಕರ್ನಾಟಕ

      ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

  • ರಾಷ್ಟ್ರೀಯ
    • ಮುಖಪುಟ

      ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

      ಮುಖಪುಟ

      ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

      ಮುಖಪುಟ

      ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

      ಮುಖಪುಟ

      ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

      ದಲಿತ್ ಫೈಲ್ಸ್

      ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

  • ಅಂತಾರಾಷ್ಟ್ರೀಯ
  • ರಾಜಕೀಯ
    • ಮುಖಪುಟ

      ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

      ಮುಖಪುಟ

      ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

      ಮುಖಪುಟ

      KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

      ಮುಖಪುಟ

      ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

      ಮುಖಪುಟ

      ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

      ಮುಖಪುಟ

      17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

      ಮುಖಪುಟ

      ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

      ಮುಖಪುಟ

      ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

  • ಚಳವಳಿ
    • ಕರ್ನಾಟಕ

      ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

      ಕರ್ನಾಟಕ

      ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

      ಚಳವಳಿ

      ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

      ಚಳವಳಿ

      ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

      ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ
ಮುಖಪುಟರಾಜಕೀಯ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

By : ನಾನು ಗೌರಿ
28 June 2021, 10:58 AM
Facebook
WhatsApp
Twitter
    - Advertisement -
    - Advertisement -

    ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

    ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

    ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

    ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

    ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

    ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

    2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

    ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


    ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

     
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ
    Next article
    ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ
    ನಾನು ಗೌರಿ
    ನಾನು ಗೌರಿ

    ಇದೇ ಲೇಖಕರ ಬರಹ

    ಮುಖಪುಟ

    ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

    ಮುಖಪುಟ

    ದೀಪಾವಳಿಯ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಟ್ಟ ಪರಿಸರ; ವಿಷಕಾರಿ ಗಾಳಿಯಿಂದ ಉಲ್ಬಣಿಸುತ್ತಿರುವ ಆರೋಗ್ಯ ಸಮಸ್ಯೆ

    ಮುಖಪುಟ

    ವಕ್ಫ್ ಕಾಯ್ದೆ ವಿರುದ್ಧ ಜಲಗಾಂವ್‌ನಲ್ಲಿ ಬೃಹತ್ ‘ಜೈಲ್ ಭರೋ’ ಪ್ರತಿಭಟನೆ; ಸಾವಿರಾರು ಜನ ಭಾಗಿ

    - Advertisment -
    ಮುಖಪುಟ

    ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

    ರವಿಕುಮಾರ್ ಈಚಲಮರ - 19 February 2026, 6:31 PM0
    ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...
    ಮುಖಪುಟ

    ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

    Manjula - 19 February 2026, 6:17 PM0
    ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...
    ಮುಖಪುಟ

    ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

    ರವಿಕುಮಾರ್ ಈಚಲಮರ - 19 February 2026, 6:03 PM0
    ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...
    ಅಂತರಾಷ್ಟ್ರೀಯ

    ‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

    ಹಾರಿಸ್ - 19 February 2026, 4:29 PM0
    ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...
    ಅಂತರಾಷ್ಟ್ರೀಯ

    ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

    Manjula - 19 February 2026, 4:00 PM0
    ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...
    ಮುಖಪುಟ

    ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

    ರವಿಕುಮಾರ್ ಈಚಲಮರ - 19 February 2026, 4:00 PM0
    ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...
    ಮುಖಪುಟ

    ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

    ರವಿಕುಮಾರ್ ಈಚಲಮರ - 19 February 2026, 3:02 PM0
    ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...
    ಮುಖಪುಟ

    ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

    Manjula - 19 February 2026, 2:40 PM0
    ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...
    ಮುಖಪುಟ

    ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

    ಹಾರಿಸ್ - 19 February 2026, 2:32 PM0
    ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...
    ದಲಿತ್ ಫೈಲ್ಸ್

    ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

    ರವಿಕುಮಾರ್ ಈಚಲಮರ - 19 February 2026, 12:54 PM0
    ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv