Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

      ಕರ್ನಾಟಕ

      ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

      ಕರ್ನಾಟಕ

      ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

      ಕರ್ನಾಟಕ

      ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

      ಕರ್ನಾಟಕ

      ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

  • ರಾಷ್ಟ್ರೀಯ
    • ಮುಖಪುಟ

      ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

      ಮುಖಪುಟ

      ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

      ಮುಖಪುಟ

      ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

      ಮುಖಪುಟ

      ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

      ಮುಖಪುಟ

      ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

  • ಅಂತಾರಾಷ್ಟ್ರೀಯ
  • ರಾಜಕೀಯ
    • ಕರ್ನಾಟಕ

      ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

      ಮುಖಪುಟ

      ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

      ಮುಖಪುಟ

      ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

      ಮುಖಪುಟ

      ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

      Uncategorized

      ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

      ಮುಖಪುಟ

      ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

      ಮುಖಪುಟ

      ‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

      ಮುಖಪುಟ

      ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

      ಮುಖಪುಟ

      ‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

  • ಚಳವಳಿ
    • ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

      ಕರ್ನಾಟಕ

      ಒಳಮೀಸಲಾತಿ: ಮೂಲ ಜಾತಿ ಪ್ರಮಾಣ ಪತ್ರ ನೀಡಲು ತಂತ್ರಾಂಶ ಸಿದ್ದ

      ಕರ್ನಾಟಕ

      ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

      ಕರ್ನಾಟಕ

      ಯಾದಗಿರಿಯಲ್ಲೂ ಆರೆಸ್ಸೆಸ್‌ಗೆ ಸೆಡ್ಡು ಹೊಡೆದ ದಲಿತ ಸಂಘಟನೆಗಳು

      ಚಳವಳಿ

      ಭಾರತದಲ್ಲಿ ಭಿನ್ನಾಭಿಪ್ರಾಯ ದಮನದ ಕ್ರೂರ ನೀತಿ; ನ್ಯಾಯಕ್ಕಾಗಿ ಕಾಯುತ್ತಿರುವ ಉಮರ್ ಖಾಲಿದ್

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ
ಮುಖಪುಟರಾಜಕೀಯ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

By : ನಾನು ಗೌರಿ
28 June 2021, 10:58 AM
Facebook
WhatsApp
Twitter
    - Advertisement -
    - Advertisement -

    ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

    ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

    ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

    ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

    ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

    ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

    2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

    ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


    ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

     
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ
    Next article
    ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ
    ನಾನು ಗೌರಿ
    ನಾನು ಗೌರಿ

    ಇದೇ ಲೇಖಕರ ಬರಹ

    ಮುಖಪುಟ

    ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

    ಮುಖಪುಟ

    ದೀಪಾವಳಿಯ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಟ್ಟ ಪರಿಸರ; ವಿಷಕಾರಿ ಗಾಳಿಯಿಂದ ಉಲ್ಬಣಿಸುತ್ತಿರುವ ಆರೋಗ್ಯ ಸಮಸ್ಯೆ

    ಮುಖಪುಟ

    ವಕ್ಫ್ ಕಾಯ್ದೆ ವಿರುದ್ಧ ಜಲಗಾಂವ್‌ನಲ್ಲಿ ಬೃಹತ್ ‘ಜೈಲ್ ಭರೋ’ ಪ್ರತಿಭಟನೆ; ಸಾವಿರಾರು ಜನ ಭಾಗಿ

    - Advertisment -
    ಮುಖಪುಟ

    ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

    ರವಿಕುಮಾರ್ ಈಚಲಮರ - 27 November 2025, 7:19 PM0
    ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...
    ಮುಖಪುಟ

    ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

    ರವಿಕುಮಾರ್ ಈಚಲಮರ - 27 November 2025, 6:33 PM0
    ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...
    ಮುಖಪುಟ

    ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

    ಹಾರಿಸ್ - 27 November 2025, 6:22 PM0
    ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...
    ಮುಖಪುಟ

    ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

    ರವಿಕುಮಾರ್ ಈಚಲಮರ - 27 November 2025, 5:39 PM0
    ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...
    ಮುಖಪುಟ

    ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

    ಲಕ್ಷ್ಮಣ್ ಮಂಡಲಗೇರಾ - 27 November 2025, 5:02 PM0
    ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....
    ಕರ್ನಾಟಕ

    ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

    ಹಾರಿಸ್ - 27 November 2025, 4:26 PM0
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
    ಮುಖಪುಟ

    ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

    ರವಿಕುಮಾರ್ ಈಚಲಮರ - 27 November 2025, 3:26 PM0
    ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...
    ಅಂತರಾಷ್ಟ್ರೀಯ

    ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

    ಹಾರಿಸ್ - 27 November 2025, 3:02 PM0
    ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...
    ಮುಖಪುಟ

    ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

    ರವಿಕುಮಾರ್ ಈಚಲಮರ - 27 November 2025, 2:07 PM0
    ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...
    ಕರ್ನಾಟಕ

    ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

    Manjula - 27 November 2025, 1:24 PM0
    ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv