Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

      ಕರ್ನಾಟಕ

      ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

      ಕರ್ನಾಟಕ

      ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

      ಕರ್ನಾಟಕ

      ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

      ಕರ್ನಾಟಕ

      ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

  • ರಾಷ್ಟ್ರೀಯ
    • ಮುಖಪುಟ

      ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

      ಮುಖಪುಟ

      ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

      ಮುಖಪುಟ

      ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

      ಮುಖಪುಟ

      ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

      ಮುಖಪುಟ

      ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

  • ಅಂತಾರಾಷ್ಟ್ರೀಯ
  • ರಾಜಕೀಯ
    • ಮುಖಪುಟ

      ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

      ಮುಖಪುಟ

      ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

      ಕರ್ನಾಟಕ

      ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

      ಮುಖಪುಟ

      ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

      ಮುಖಪುಟ

      ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

      ಮುಖಪುಟ

      ಪ್ರತಿಯೊಂದು ಮಗುವೂ ಶಾಂತಿ, ಸ್ವಾತಂತ್ರ್ಯ, ವಿಮೋಚನೆಗೆ ಅರ್ಹ; ಪ್ಯಾಲೆಸ್ತೀನ್ ಇದಕ್ಕೆ ಹೊರತಾಗಿಲ್ಲ: ವೆನಿಸ್ ಚಲನಚಿತ್ರೋತ್ಸವ ವೇದಿಕೆಯಲ್ಲಿ ಅನುಪರ್ಣ ರಾಯ್

      ಮುಖಪುಟ

      ‘ಅಮ್ಮ’ ಚುನಾವಣೆಯಲ್ಲಿ ಶ್ವೇತಾ ಮೆನನ್‌, ಕುಕ್ಕು ಪರಮೇಶ್ವರನ್‌ಗೆ ಗೆಲುವು: ಉನ್ನತ ಹುದ್ದೆಗಳಿಗೆ ಮೊದಲ ಬಾರಿಗೆ ಮಹಿಳೆಯರು ಆಯ್ಕೆ

      ಮುಖಪುಟ

      ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

  • ಚಳವಳಿ
    • ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

      ಕರ್ನಾಟಕ

      ಒಳಮೀಸಲಾತಿ: ಮೂಲ ಜಾತಿ ಪ್ರಮಾಣ ಪತ್ರ ನೀಡಲು ತಂತ್ರಾಂಶ ಸಿದ್ದ

      ಕರ್ನಾಟಕ

      ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

      ಕರ್ನಾಟಕ

      ಯಾದಗಿರಿಯಲ್ಲೂ ಆರೆಸ್ಸೆಸ್‌ಗೆ ಸೆಡ್ಡು ಹೊಡೆದ ದಲಿತ ಸಂಘಟನೆಗಳು

      ಚಳವಳಿ

      ಭಾರತದಲ್ಲಿ ಭಿನ್ನಾಭಿಪ್ರಾಯ ದಮನದ ಕ್ರೂರ ನೀತಿ; ನ್ಯಾಯಕ್ಕಾಗಿ ಕಾಯುತ್ತಿರುವ ಉಮರ್ ಖಾಲಿದ್

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ
ಮುಖಪುಟರಾಜಕೀಯ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

By : ನಾನು ಗೌರಿ
28 June 2021, 10:58 AM
Facebook
WhatsApp
Twitter
    - Advertisement -
    - Advertisement -

    ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

    ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

    ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

    ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

    ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

    ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

    2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

    ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


    ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

     
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ
    Next article
    ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ
    ನಾನು ಗೌರಿ
    ನಾನು ಗೌರಿ

    ಇದೇ ಲೇಖಕರ ಬರಹ

    ಮುಖಪುಟ

    ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

    ಮುಖಪುಟ

    ದೀಪಾವಳಿಯ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಟ್ಟ ಪರಿಸರ; ವಿಷಕಾರಿ ಗಾಳಿಯಿಂದ ಉಲ್ಬಣಿಸುತ್ತಿರುವ ಆರೋಗ್ಯ ಸಮಸ್ಯೆ

    ಮುಖಪುಟ

    ವಕ್ಫ್ ಕಾಯ್ದೆ ವಿರುದ್ಧ ಜಲಗಾಂವ್‌ನಲ್ಲಿ ಬೃಹತ್ ‘ಜೈಲ್ ಭರೋ’ ಪ್ರತಿಭಟನೆ; ಸಾವಿರಾರು ಜನ ಭಾಗಿ

    - Advertisment -
    ಮುಖಪುಟ

    ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

    Manjula - 18 December 2025, 12:52 PM0
    ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...
    ಮುಖಪುಟ

    ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

    ಹಾರಿಸ್ - 18 December 2025, 12:42 PM0
    ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...
    ಮುಖಪುಟ

    ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

    Manjula - 18 December 2025, 12:15 PM0
    ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...
    ಕರ್ನಾಟಕ

    ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

    ರವಿಕುಮಾರ್ ಈಚಲಮರ - 18 December 2025, 12:11 PM0
    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...
    ಮುಖಪುಟ

    ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

    ಹಾರಿಸ್ - 18 December 2025, 11:49 AM0
    ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...
    ಕರ್ನಾಟಕ

    ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

    Manjula - 18 December 2025, 11:08 AM0
    ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...
    ಮುಖಪುಟ

    2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

    ರವಿಕುಮಾರ್ ಈಚಲಮರ - 17 December 2025, 8:01 PM0
    2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...
    ಮುಖಪುಟ

    ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

    ರವಿಕುಮಾರ್ ಈಚಲಮರ - 17 December 2025, 7:12 PM0
    ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...
    ಮುಖಪುಟ

    ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

    ರವಿಕುಮಾರ್ ಈಚಲಮರ - 17 December 2025, 6:37 PM0
    ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...
    ಕರ್ನಾಟಕ

    ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

    ಹಾರಿಸ್ - 17 December 2025, 6:33 PM0
    ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv