Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

- Advertisement -
- Advertisement -

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...