Homeಮುಖಪುಟಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡೇಟಿಗೆ 3 ಬಿಜೆಪಿ ಕಾರ್ಯಕರ್ತರು ಬಲಿ!

ಜಮ್ಮು-ಕಾಶ್ಮೀರ: ಭಯೋತ್ಪಾದಕರ ಗುಂಡೇಟಿಗೆ 3 ಬಿಜೆಪಿ ಕಾರ್ಯಕರ್ತರು ಬಲಿ!

ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಇಂತಹ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಕುಲ್ಗಂ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸ್ಥಳೀಯ ಯುವ ವಿಭಾಗದ ಮುಖಂಡ ಸೇರಿದಂತೆ ಮೂವರು ಬಿಜೆಪಿ ಕಾರ್ಯಕರ್ತರು ಗುರುವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಕರ್ತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ವೈ.ಕೆ ಪೊರಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.

“ಇಂದು, ಕುಲ್ಗಂ ಪೊಲೀಸರಿಗೆ ಗ್ರಾಮದ ವೈ.ಕೆ. ಪೋರಾದಲ್ಲಿ ನಡೆದ ಭಯೋತ್ಪಾದಕ ಅಪರಾಧ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಅಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಅಪರಾಧ ಸ್ಥಳಕ್ಕೆ ತಲುಪಿದ್ದಾರೆ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: 370 ನೇ ವಿಧಿಯ ಮರುಸ್ಥಾಪನೆಗೆ ’ಪೀಪಲ್ಸ್ ಅಲಯನ್ಸ್’!

ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

“ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುಲಾಮ್ ಅಹ್ಮದ್ ಯಾತೂ ಅವರ ಪುತ್ರ ಫಿದಾ ಹುಸೇನ್ ಯಾತೂ, ವೈ.ಕೆ.ಪೋರಾ ನಿವಾಸಿ ಸೋಮರ್ ದೇವ್ಸರ್ ನಿವಾಸಿ ಅಬ್ದುಲ್ ರಶೀದ್ ಬೀಗ್ (ಬಿಜೆಪಿ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ) ಅವರ ಪುತ್ರ ಉಮರ್ ರಶೀದ್ ಬೀಗ್ (ಬಿಜೆಪಿ ಕಾರ್ಯಕರ್ತ) ಮತ್ತು ವೈ.ಕೆ.ಪೋರಾ ನಿವಾಸಿ ಮೊಹಮ್ಮದ್ ರಂಜಾನ್ (ಬಿಜೆಪಿ ಕಾರ್ಯಕರ್ತ) ಅವರ ಪುತ್ರ ಉಮರ್ ರಂಜಾನ್ ಹಜಮ್” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. “3 ಜನ ಯುವ ಕಾರ್ಯಕರ್ತರನ್ನು ಕೊಂದಿರುವುದನ್ನು ಖಂಡಿಸುತ್ತೇನೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಉತ್ಸಾಹಿ ಕೆಲಸಗಳನ್ನು ಮಾಡುತ್ತಿದ್ದರು. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ರಾಷ್ಟ್ರೀಯ ಕಾನ್ಫರೆನ್ಸ್‌ ಮುಖಂಡ ಒಮರ್ ಅಬ್ದುಲ್ಲಾ ಈ ದಾಳಿಯನ್ನು ಖಂಡಿಸಿದ್ದು, “ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಿಂದ ಭಯಾನಕ ಸುದ್ದಿ. ಭಯೋತ್ಪಾದಕ ದಾಳಿಯಲ್ಲಿ 3 ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯ್ಯುವುದನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ಅಲ್ಲಾಹನು ಮೃತರಿಗೆ ಜನ್ನತ್‌ನಲ್ಲಿ ಸ್ಥಾನ ನೀಡಲಿ ಮತ್ತು ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳು ಬಲವನ್ನು ಪಡೆಯಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಕೂಡ ಈ ಘಟನೆ ಕುರಿತು ಟ್ವೀಟ್ ಮಾಡಿದ್ದಾರೆ. “ಕುಲ್ಗಾಂನಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯ ಬಗ್ಗೆ ಕೇಳಿ ದುಃಖಿತವಾಗಿದೆ. ಅವರ ಕುಟುಂಬಗಳಿಗೆ ನನ್ನ ಸಂತಾಪ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರದೇಶವನ್ನು ಕಣ್ಗಾವಲಿನಲ್ಲಿಡಲಾಗಿದೆ. ಭಯೋತ್ಪಾದಕರ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.

ಜುಲೈನಲ್ಲಿ ಬಿಜೆಪಿ ಮುಖಂಡ ಶೇಖ್ ವಾಸಿಮ್, ಅವರ ತಂದೆ ಮತ್ತು ಸಹೋದರರನ್ನು ಬಂಡಿಪೋರಾದಲ್ಲಿ ಭಯೋತ್ಪಾದಕರು ಕೊಂದರು. ಇದಾದ ಒಂದು ತಿಂಗಳ ನಂತರ ಕುಲಗಂನಲ್ಲಿ ಬಿಜೆಪಿ ಸರ್ಪಂಚ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.


ಇದನ್ನೂ ಓದಿ: ಅರೆಸೈನಿಕ ಪಡೆಗಳ 10 ಸಾವಿರ ಸೈನಿಕರು ಜಮ್ಮು ಕಾಶ್ಮೀರದಿಂದ ವಾಪಾಸ್: ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...