Homeಮುಖಪುಟಜಮ್ಮು ಕಾಶ್ಮೀರ | ಪಾಕಿಸ್ತಾನ ಶೆಲ್ ದಾಳಿಯಿಂದ 31 ಶಾಲೆಗಳಿಗೆ ಹಾನಿ

ಜಮ್ಮು ಕಾಶ್ಮೀರ | ಪಾಕಿಸ್ತಾನ ಶೆಲ್ ದಾಳಿಯಿಂದ 31 ಶಾಲೆಗಳಿಗೆ ಹಾನಿ

- Advertisement -
- Advertisement -

ಮೇ 7 ರಂದು ಆಪರೇಷನ್ ಸಿಂಧೂರ ಪ್ರಾರಂಭವಾದ ನಂತರ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳಲ್ಲಿ ಪಾಕಿಸ್ತಾನಿ ಪಡೆಗಳ ಮಾರ್ಟರ್ ಮತ್ತು ಫಿರಂಗಿ ಶೆಲ್ ದಾಳಿಯಲ್ಲಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿ ಹೇಳಿದೆ. ಜಮ್ಮು ಕಾಶ್ಮೀರ | ಪಾಕಿಸ್ತಾನ

ಜಮ್ಮುವಿನ ಅವಳಿ ಗಡಿ ಜಿಲ್ಲೆಗಳು ಪಾಕಿಸ್ತಾನಿ ಶೆಲ್ ದಾಳಿಯಿಂದ ಹೆಚ್ಚು ಹಾನಿಗೊಳಗಾದವು ಎಂದು ಅದು ಹೇಳಿದೆ. ಪೂಂಚ್‌ನಲ್ಲಿ 13 ಮತ್ತು ರಾಜೌರಿಯಲ್ಲಿ 3 ಜನರು ಸೇರಿದಂತೆ ಕನಿಷ್ಠ 16 ಜನರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ವಸತಿ ಮನೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ನೂರಾರು ಕಟ್ಟಡಗಳು ಹಾನಿಗೊಳಗಾಗಿವೆ.

ಪೂಂಚ್‌ನ ಮುಖ್ಯ ಶಿಕ್ಷಣ ಅಧಿಕಾರಿ (ಸಿಇಒ) ಇಫ್ತಿಕರ್ ಹುಸೇನ್ ಶಾ ಮಾತನಾಡಿ, ಜಿಲ್ಲೆಯ 23 ಶಾಲೆಗಳು ಶೆಲ್ ದಾಳಿಗೆ ತುತ್ತಾಗಿವೆ. 23 ಶಾಲೆಗಳಲ್ಲಿ, ಒಂದು ಹೈಯರ್ ಸೆಕೆಂಡರಿ ಶಾಲೆ ಮತ್ತು ಒಂದು ಮಧ್ಯಮ ಶಾಲೆ ಸಂಪೂರ್ಣವಾಗಿ ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದಾರೆ.

ಶೆಲ್ ದಾಳಿ ಪುನರಾರಂಭವಾಗುವ ಭಯದಿಂದಾಗಿ, ಅನೇಕ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುತ್ತಿಲ್ಲ. “ಸುಮಾರು 30% ದಷ್ಟು ವಿದ್ಯಾರ್ಥಿಗಳು ಮಾತ್ರ ತರಗತಿಗಳಿಗೆ ಹಾಜರಾಗುತ್ತಿದ್ದಾರೆ” ಎಂದು ಇಫ್ತಿಕರ್ ಹೇಳಿದ್ದು, ಗಡಿ ಪ್ರದೇಶಗಳಲ್ಲಿ ಹಾಜರಾತಿ ಇನ್ನೂ ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

“ನಾವು ವಾಟ್ಸಾಪ್ ಗುಂಪುಗಳ ಮೂಲಕ ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಿದ್ದೇವೆ ಮತ್ತು ತರಗತಿಗಳಿಗೆ ಮತ್ತೆ ಸೇರಲು ಒತ್ತಾಯಿಸುತ್ತಿದ್ದೇವೆ. ಸಹಜ ಸ್ಥಿತಿ ಮರಳುತ್ತಿದ್ದಂತೆ ಹಾಜರಾತಿ ಹೆಚ್ಚಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಹಾನಿಗೊಳಗಾದ ಶಾಲೆಗಳ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇಲ್ಲ, ಅವರು ಒಂದೇ ಶಾಲೆಯಲ್ಲಿ ಓದುತ್ತಿದ್ದಾರೆ” ಎಂದು ಹೇಳಿದ್ದಾರೆ.

ಶೆಲ್ ದಾಳಿಯಲ್ಲಿ ಜಿಲ್ಲೆಯಲ್ಲಿ ಏಳು ಶಾಲೆಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗೆ ಹಾನಿಯಾಗಿದೆ ಎಂದು ರಾಜೌರಿ ಸಿಇಒ ಚೌಧರಿ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ವಿದ್ಯಾರ್ಥಿಗಳು ಶಾಲೆಗಳಿಗೆ ಹಿಂತಿರುಗುತ್ತಿದ್ದಾರೆ ಮತ್ತು ದಿನ ಕಳೆದಂತೆ ಹಾಜರಾತಿ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದು, ಹಾನಿಗೊಳಗಾದ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿಲ್ಲ ಎಂದು ಹೇಳಿದ್ದಾರೆ.

“ಶಾಲೆಗಳ ಕಿಟಕಿಗಳು ಮತ್ತು ಕಿಟಕಿಗಳ ಗಾಜುಗಳು ಮುರಿದು ಬಿರುಕು ಬಿಟ್ಟಿವೆ. ಒಂದು ಮಧ್ಯಮ ಶಾಲೆಯ ಒಂದು ಕೋಣೆಗೆ ಶೆಲ್ ದಾಳಿಯಿಂದ ಹಾನಿಯಾಗಿದೆ” ಎಂದು ಅವರು ಹೇಳಿದ್ದು, ಹಾನಿಗೊಳಗಾದ ಶಾಲೆಗಳನ್ನು ನವೀಕರಿಸಲಾಗುವುದು ಎಂದು ಹೇಳಿದ್ದಾರೆ. ಜಮ್ಮು ಕಾಶ್ಮೀರ | ಪಾಕಿಸ್ತಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 6 ತಿಂಗಳೊಳಗೆ ಕೇಡರ್ ಪರಿಶೀಲನೆ ನಡೆಸಿ: ಸುಪ್ರೀಂಕೋರ್ಟ್ ಆದೇಶ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ 6 ತಿಂಗಳೊಳಗೆ ಕೇಡರ್ ಪರಿಶೀಲನೆ ನಡೆಸಿ: ಸುಪ್ರೀಂಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...