Homeಮುಖಪುಟಅರುಂಧತಿ ರಾಯ್, ನೂರಾನಿ ಸೇರಿದಂತೆ ಖ್ಯಾತ ಲೇಖಕರ 25 ಪುಸ್ತಕಗಳನ್ನು ನಿಷೇಧಿಸಿದ ಜಮ್ಮು ಕಾಶ್ಮೀರ ಆಡಳಿತ

ಅರುಂಧತಿ ರಾಯ್, ನೂರಾನಿ ಸೇರಿದಂತೆ ಖ್ಯಾತ ಲೇಖಕರ 25 ಪುಸ್ತಕಗಳನ್ನು ನಿಷೇಧಿಸಿದ ಜಮ್ಮು ಕಾಶ್ಮೀರ ಆಡಳಿತ

- Advertisement -
- Advertisement -

‘ದೇಶದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಪ್ರತ್ಯೇಕವಾದವನ್ನು ಉತ್ತೇಜಿಸುವ’ ಆರೋಪದ ಮೇಲೆ ಜಮ್ಮು ಕಾಶ್ಮೀರ ಆಡಳಿತವು 25 ಶೀರ್ಷಿಕೆಗಳ ಪುಸ್ತಕಗಳನ್ನು ನಿಷೇಧಿಸಿದೆ. ಭಾರತ ಮತ್ತು ವಿದೇಶಗಳ ಪ್ರಮುಖ ಬರಹಗಾರರು ಹಾಗೂ ಇತಿಹಾಸಕಾರರು ಬರೆದಿರುವ ಕೆಲ ಪುಸ್ತಕಗಳು ಇವುಗಳಲ್ಲಿ ಒಳಗೊಂಡಿವೆ ಎಂದು ವರದಿಯಾಗಿದೆ.

ಪುಸ್ತಕಗಳ ನಿಷೇಧದ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಜಮ್ಮು ಕಾಶ್ಮೀರದ ಗೃಹ ಇಲಾಖೆಯು ಮಂಗಳವಾರ (ಆಗಸ್ಟ್ 5) ಆದೇಶ ಹೊರಡಿಸಿದೆ. ನಿಷೇಧಿತ ಪುಸ್ತಕಗಳು ಜಮ್ಮು ಕಾಶ್ಮೀರದ ಬಗ್ಗೆ ಸುಳ್ಳು ಕಥನಗಳನ್ನು ಪ್ರಚಾರ ಮಾಡುತ್ತಿವೆ. ಇದು ಹಿಂಸಾಚಾರ ಮತ್ತು ಭಯೋತ್ಪಾದನೆಯಲ್ಲಿ ಯುವಜನರ ತೊಡಗಿಸಿಕೊಳ್ಳುವುದರಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಹೇಳಿದೆ.

2019ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಆರನೇ ವರ್ಷಾಚರಣೆಯಂದೇ ಪುಸ್ತಕಗಳನ್ನು ನಿಷೇಧಿಸಿದ ಆದೇಶ ಹೊರಡಿಸಲಾಗಿದೆ. 370ನೇ ವಿಧಿಯ ರದ್ದತಿಯ ಬಳಿಕ ಜಮ್ಮು ಕಾಶ್ಮೀರ ರಾಜ್ಯ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಗೊಂಡಿವೆ.

ಪುಸ್ತಕ ಪ್ರಕಟಣೆ ಉದ್ಯಮದ ಪ್ರಮುಖ ಸಂಸ್ಥೆಗಳಾದ ಪೆಂಗ್ವಿನ್, ಬ್ಲೂಮ್ಸ್‌ಬರಿ, ಹಾರ್ಪರ್‌ಕಾಲಿನ್ಸ್, ಪ್ಯಾನ್ ಮ್ಯಾಕ್‌ಮಿಲನ್ ಇಂಡಿಯಾ, ರೂಟ್‌ಲೆಡ್ಜ್ ಮತ್ತು ವರ್ಸೊ ಬುಕ್ಸ್‌ನ ಪುಸ್ತಕಗಳು ನಿಷೇಧಿತ ಪಟ್ಟಿಯಲ್ಲಿ ಸೇರಿವೆ. ಈ ಸಂಸ್ಥೆಗಳು ಇನ್ನು ಮುಂದೆ ನಿಷೇಧಿತ ಪುಸ್ತಕಗಳನ್ನು ಮರುಮುದ್ರಣ ಮತ್ತು ವಿತರಣೆ ಮಾಡಬಾರದು ಎಂದು ಗೃಹ ಇಲಾಖೆಯ ಆದೇಶ ಹೇಳಿದೆ.

ಭಾರತೀಯ ಸಾಂವಿಧಾನಿಕ ತಜ್ಞ ಮತ್ತು ಬುದ್ಧಿಜೀವಿ ಎ.ಜಿ. ನೂರಾನಿ ಅವರ ವ್ಯಾಪಕವಾಗಿ ಮೆಚ್ಚುಗೆ ಪಡೆದ ‘ದಿ ಕಾಶ್ಮೀರ್ ಡಿಸ್ಪ್ಯೂಟ್’, ಬ್ರಿಟಿಷ್ ಲೇಖಕಿ ಮತ್ತು ಇತಿಹಾಸಕಾರ್ತಿ ವಿಕ್ಟೋರಿಯಾ ಸ್ಕೋಫೀಲ್ಡ್ ಅವರ ‘ಕಾಶ್ಮೀರ್ ಇನ್ ಕಾನ್ಫ್ಲಿಕ್ಟ್ – ಇಂಡಿಯಾ, ಪಾಕಿಸ್ತಾನ್ ಅಂಡ್ ದಿ ಅನ್ ಎಂಡಿಂಗ್ ವಾರ್’, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಅವರ ‘ಆಜಾದಿ’ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನ ಪ್ರಾಧ್ಯಾಪಕಿ ಸುಮಂತ್ರ ಬೋಸ್ ಅವರ ‘ಕಾಂಟೆಸ್ಟೆಡ್ ಲ್ಯಾಂಡ್ಸ್’ ಪುಸ್ತಕಗಳು ನಿಷೇಧಿತ ಪಟ್ಟಿಯಲ್ಲಿ ಸೇರಿವೆ.

ಗೃಹ ಇಲಾಖೆಯ ಆದೇಶದ ಪ್ರಕಾರ, ಈ ಪುಸ್ತಕಗಳನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಸೆಕ್ಷನ್ 98 ರ ಪ್ರಕಾರ ‘ಜಪ್ತಿ’ ಎಂದು ಘೋಷಿಸಬೇಕಾಗಿದೆ. ಬಿಎನ್‌ಎಸ್ಎಸ್‌ನ ಸೆಕ್ಷನ್‌ 98 ಸರ್ಕಾರಕ್ಕೆ ಪುಸ್ತಕಗಳು ಅಥವಾ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲು ಮತ್ತು ಅಂತಹ ದಾಖಲೆಗಳಿಗಾಗಿ ಶೋಧ ವಾರಂಟ್‌ಗಳನ್ನು ಹೊರಡಿಸಲು ಅಧಿಕಾರ ನೀಡುತ್ತದೆ.

ಈ ಪುಸ್ತಕಗಳು ಜಮ್ಮು ಮತ್ತು ಕಾಶ್ಮೀರದ ‘ಐತಿಹಾಸಿಕ ಅಥವಾ ರಾಜಕೀಯ ವ್ಯಾಖ್ಯಾನದ ವೇಷದಲ್ಲಿವೆ’ ಆದರೆ, ಇವುಗಳು ‘ಯುವಜನರನ್ನು ದಾರಿ ತಪ್ಪಿಸುವಲ್ಲಿ, ಭಯೋತ್ಪಾದನೆಯನ್ನು ವೈಭವೀಕರಿಸುವಲ್ಲಿ ಮತ್ತು ಭಾರತದ ರಾಜ್ಯದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ’ ಎಂದು ಗೃಹ ಇಲಾಖೆಯ ಆದೇಶ ಹೇಳಿದೆ.

ಈ ಪುಸ್ತಕಗಳು ಕೊರತೆಗಳು, ಸಂತ್ರಸ್ತ ಭಾವನೆ ಮತ್ತು ಭಯೋತ್ಪಾದಯನ್ನು ಶೌರ್ಯದಂತೆ ಉತ್ತೇಜಿಸುವ ಮೂಲಕ ಯುವಕರ ಮನಸ್ಸಿನ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಅಲ್ಲದೆ, ಐತಿಹಾಸಿಕ ವಿಷಯಗಳನ್ನು ವಿರೂಪಗೊಳಿಸುತ್ತವೆ, ಭಯೋತ್ಪಾದಕರನ್ನು ವೈಭವೀಕರಿಸುತ್ತವೆ, ಭದ್ರತಾ ಪಡೆಗಳನ್ನು ದೂಷಿಸುತ್ತವೆ. ಧಾರ್ಮಿಕ ಮೂಲಭೂತೀಕರಣ ಮಾಡುತ್ತವೆ, ಪರಕೀಯತೆಯ ಪ್ರಚಾರ ಮಾಡುತ್ತವೆ ಈ ಮೂಲಕ ಜಮ್ಮು ಕಾಶ್ಮೀರದಲ್ಲಿ ಯುವಜನರು ಹಿಂಸೆ ಮತ್ತು ಭಯೋತ್ಪಾದನೆಯ ತೊಡಗಿಸಿಕೊಳ್ಳಲು ಕೊಡುಗು ನೀಡುತ್ತವೆ ಎಂದು ಲೆಫ್ಟಿನೆಂಟ್ ಗವರ್ನರ್ ಹೊರಡಿಸಿದ ಆದೇಶದಲ್ಲಿ ಆರೋಪಿಸಲಾಗಿದೆ.

ಮುಂದುವರಿದು, ಈ ಪುಸ್ತಕಗಳು ‘ಪ್ರತ್ಯೇಕತಾವಾದವನ್ನು ಪ್ರಚೋದಿಸುತ್ತವೆ ಮತ್ತು ಭಾರತದ ಸಾರ್ವಭೌಮತ್ವ, ಸಮಗ್ರತೆಗೆ ಅಪಾಯವನ್ನುಂಟುಮಾಡುತ್ತವೆ’ ಎಂದು ಕಂಡುಬಂದಿದೆ. ಹಾಗಾಗಿ, ಇವುಗಳ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಸೆಕ್ಷನ್ 152, 196 ಮತ್ತು 197 ಅಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶ ಹೇಳಿದೆ.

ಬಿಎನ್‌ಎಸ್‌ನ ಸೆಕ್ಷನ್ 152 ‘ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ’ ಅಪರಾಧಗಳನ್ನು ಒಳಗೊಂಡಿದೆ; ಬಿಎನ್‌ಎಸ್‌ನ ಸೆಕ್ಷನ್ 196 ಧರ್ಮ, ಜಾತಿ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದ ಅಪರಾಧಗಳನ್ನು ಒಳಗೊಂಡಿದೆ ಮತ್ತು ಬಿಎನ್‌ಎಸ್‌ನ ಸೆಕ್ಷನ್ 197 ‘ರಾಷ್ಟ್ರೀಯ ಏಕೀಕರಣಕ್ಕೆ ವಿರುದ್ದವಾದ ಆರೋಪಗಳು ಮತ್ತು ಪ್ರತಿಪಾದನೆಯ’ ಅಪರಾಧಗಳನ್ನು ಒಳಗೊಂಡಿದೆ.

ಆದ್ದರಿಂದ, ‘ಭಾರತೀಯ ನ್ಯಾಯ ಸಂಹಿತೆ, 2023ರ ಸೆಕ್ಷನ್ 98ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು 25 ಪುಸ್ತಕಗಳ ಪ್ರಕಟಣೆಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಈ ಮೂಲಕ ಘೋಷಿಸುತ್ತದೆ’ ಎಂದು ಗೃಹ ಇಲಾಖೆಯ ಆದೇಶವು ಹೇಳಿದೆ.

ನಿಷೇಧಿತ ಪಟ್ಟಿಯಲ್ಲಿರುವ ಇತರ ಪ್ರಮುಖ ಪುಸ್ತಕಗಳಲ್ಲಿ ಆಸ್ಟ್ರೇಲಿಯನ್ ಅಕಾಡೆಮಿಕ್ ಕ್ರಿಸ್ಟೋಫರ್ ಸ್ನೆಡೆನ್ ಅವರ ‘ಇಂಡಿಪೆಂಡೆಂಟ್ ಕಶ್ಮೀರ್’, ಪತ್ರಕರ್ತೆ ಹಾಗೂ ಸಂಪಾದಕಿ ಅನುರಾಧಾ ಭಾಸಿನ್ ಅವರ ‘ಎ ಡಿಸ್ಮ್ಯಾಂಟಲ್ಡ್ ಸ್ಟೇಟ್- ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಕಾಶ್ಮೀರ್ ಆಫ್ಟರ್ ಆರ್ಟಿಕಲ್ 370’, ತಾರಿಕ್ ಅಲಿ, ಹಿಲಾಲ್ ಭಟ್, ಅಂಗನಾ ಪಿ. ಚಟರ್ಜಿ, ಪಂಕಜ್ ಮಿಶ್ರಾ ಮತ್ತು ಅರುಂಧತಿ ರಾಯ್ ಅವರ ‘ದಿ ಕೇಸ್ ಆಫ್ ಫ್ರೀಡಂ’, ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮೊಹಮ್ಮದ್ ಯೂಸುಫ್ ಸರಾಫ್ ಅವರ ‘ಕಶ್ಮೀರೀಸ್ ಫೈಟ್ ಫಾರ್ ಫ್ರೀಡಂ‘, ಹ್ಯಾಲಿ ಡುಸ್ಚಿನ್ಸ್ಕಿ, ಮೋನಾ ಭಟ್ ಅಥೆರ್ ಜಿಯಾ ಮತ್ತು ಸಿಂಥಿಯಾ ಮಹಮೂದ್ ಅವರ ‘ರೆಸಿಸ್ಟಿಂಗ್ ಆಕ್ಯುಪೇಷನ್ ಇನ್ ಕಾಶ್ಮೀರ್’, ಪಾಕಿಸ್ತಾನಿ ಇಸ್ಲಾಮಿಕ್ ವಿದ್ವಾಂಸ ಮತ್ತು ಜಮಾತ್-ಎ-ಇಸ್ಲಾಮಿಯ ಸಂಸ್ಥಾಪಕ ಅಬುಲ್ ಅಲಾ ಅಲ್-ಮೌದುದಿ ಅವರ ‘ಅಲ್ ಜಿಹಾದುಲ್ ಫಿಲ್ ಇಸ್ಲಾಂ’, ಎಸ್ಸಾರ್ ಬತೂಲ್ ಅವರ ‘ಡು ಯು ರಿಮೆಂಬರ್ ಕೌನ್ ಪೋಸ್ಪೋರಾ?’, ಸುಗತ ಬೋಸ್ ಮತ್ತು ಆಯೇಷಾ ಜಲಾಲ್ ಅವರು ಸಂಪಾದಿಸಿರುವ ‘ಕಶ್ಮೀರ್ ಅಂಡ್ ದ ಫ್ಯೂಚರ್ ಆಫ್ ಸೌತ್ ಏಷ್ಯಾ’.

ಗೃಹ ಇಲಾಖೆಯ ಪುಸ್ತಕಗಳನ್ನು ನಿಷೇಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಲೇಖಕಿ ಅನುರಾಧ ಭಾಸಿನ್, ನಿಷೇಧಿತ ಪುಸ್ತಕಗಳು ಭಯೋತ್ಪಾದನೆಯನ್ನು ವೈಭವೀಕರಿಸುತ್ತವೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

ನಿಷೇಧಿತ ಪುಸ್ತಕಗಳ ಪಟ್ಟಿಯನ್ನು ಉಲ್ಲೇಖಿಸಿದ ಅವರು, “ಆ ಎಲ್ಲಾ ಪುಸ್ತಕಗಳು ಸಂಶೋಧನಾತ್ಮಕ ಕೃತಿಗಳಾಗಿವೆ. ಅವುಗಳು ಆಡಳಿತ ಹೇಳಿದಂತೆ ಭಯೋತ್ಪಾದನೆಯನ್ನು ವೈಭವೀಕರಿಸುವುದಿಲ್ಲ” ಎಂದಿದ್ದಾರೆ.

ನಿಷೇಧಿತ ಪಟ್ಟಿಯಲ್ಲಿ, ಸೀಮಾ ಕಾಜಿಯವರ ಬಿಟ್ವೀನ್ ಡೆಮಾಕ್ರಸಿ ಅಂಡ್ ನೇಷನ್ – ‘ಜೆಂಡರ್ ಅಂಡ್ ಮಿಲಿಟರೈಸೇಶನ್ ಇನ್ ಕಾಶ್ಮೀರ್’, ಹಫ್ಸಾ ಕಾಂಜ್ವಾಲ್ ಅವರ ‘ಕಾಲೋನೈಸಿಂಗ್ ಕಾಶ್ಮೀರ್ – ಸ್ಟೇಟ್-ಬಿಲ್ಡಿಂಗ್ ಅಂಡರ್ ಇಂಡಿಯನ್ ಆಕ್ಯುಪೇಶನ್’ ಮತ್ತು ಡೇವಿಡ್ ದೇವದಾಸ್ ಅವರ ಇನ್ ಸರ್ಚ್ ಆಫ್ ಎ ಫ್ಯೂಚರ್ ದಿ ಸ್ಟೋರಿ ಆಫ್ ಕಶ್ಮೀರೀಸ್’, ಪಿಯೋಟರ್ ಬಾಲ್ಸೆರೋವಿಚ್ ಮತ್ತು ಅಗ್ನಿಸ್ಕಾ ಕುಸ್ಜೆವ್ಸ್ಕಾ ಅವರ ‘ಹ್ಯೂಮನ್ ರೈಟ್ಸ್ ವಯಲೇಷನ್ಸ್ ಇನ್ ಕಾಶ್ಮೀರ್’, ಅಬ್ದುಲ್ ಜಬ್ಬಾರ್ ಗೋಖಾಮಿ ಅವರ ‘ಕಾಶ್ಮೀರ್: ಪಾಲಿಟಿಕ್ಸ್ ಅಂಡ್ ಪ್ಲೆಬಿಸೈಟ್’, ಇಮಾಮ್ ಹಸನ್ ಅಲ್-ಬನಾ ಶಹೀದ್ ಅವರ ಮೌಲಾನಾ ಮೊಹಮ್ಮದ್ ಎನಾಯತುಲ್ಲಾ ಸುಭಾನಿ ಸಂಪಾದಿಸಿರುವ ‘ಮುಜಾಹಿದ್ ಕಿ ಅಝಾನ್’, ಮರೂಫ್ ರಝಾ ಅವರ ‘ಕನ್ಫ್ರಂಟಿಂಗ್ ಟೆರರಿಸಂ’, ರಾಧಿಕಾ ಗುಪ್ತಾ ಅವರ ‘ಫ್ರೀಡಮ್ ಇನ್ ಕ್ಯಾಪ್ಟಿವಿಟಿ – ನೆಗೋಷಿಯೇಷನ್ಸ್ ಆಫ್ ಬಿಲೋಂಗಿಂಗ್ ಅಲಾಂಗ್ ಕಾಶ್ಮೀರಿ ಫ್ರಾಂಟಿಯರ್’, ಶಂಶಾದ್ ಶಾನ್ ಅವರ ‘ಯುಎಸ್ಎ ಅಂಡ್ ಕಾಶ್ಮೀರ್’, ಪಿಯೋಟರ್ ಬಾಲ್ಸೆರೋವಿಚ್ ಮತ್ತು ಅಗ್ನಿಸ್ಕಾ ಕುಸ್ಜೆವ್ಸ್ಕಾ ಅವರ ‘ಲಾ & ಕಾನ್ಫ್ಲಿಕ್ಟ್ – ರೆಸಲ್ಯೂಷನ್ ಇನ್ ಕಾಶ್ಮೀರ್’ ಅಫಾಕ್ ಅವರ ‘ತಾರಿಖ್-ಇ-ಸಿಯಾಸತ್ ಕಾಶ್ಮೀರ್’ ಸೇರಿವೆ.

‘ಓರ್ವ ಮನುಷ್ಯ ಮತ್ತೊಬ್ಬರನ್ನು ಬಂಡಿಯಲ್ಲಿ ಎಳೆಯುವ ಪದ್ಧತಿ ಅಮಾನವೀಯ’: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...