Homeರಾಷ್ಟ್ರೀಯಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಬಿಜೆಪಿ ಬೆಂಬಲದೊಂದಿಗೆ ಸರಪಂಚ್ ಕೂಡಾ ಆಗಿದ್ದ ಆರೋಪಿ, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಪಕ್ಷದ ನಾಯಕನನ್ನು ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದಾನೆ ಎಂಬ ಆರೋಪದಲ್ಲಿ ಎನ್‌ಐಎ ಬಂಧಿಸಿದೆ. ಭಯೋತ್ಪಾದನಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾಶ್ಮೀರದ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ ಪ್ರಕರಣದ ತನಿಖೆಯ ವೇಳೆ ಬಿಜೆಪಿ ನಾಯಕನ ಕೃತ್ಯಗಳು ಬೆಳಕಿಗೆ ಬಂದಿದೆ.

ಆರೋಪಿ ತಾರಿಕ್‌ ಮಿರ್‌‌ 2011ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್‌ನ ಸರಪಂಚ್ ಕೂಡಾ ಆಗಿದ್ದ ಎಂದು ವರದಿಯಾಗಿದ್ದು, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದನು. ಈತನನ್ನು ಎನ್‌ಐಎ ಬುಧವಾರ ಬಂಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಿಂದರ್‌ ಸಿಂಗ್ ಜೊತೆಗೆ ಬಂಧನಕ್ಕೆ ಒಳಗಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ ಶಂಕಿತ ಭಯೋತ್ಪಾದಕರನ್ನು ತನಿಖೆಗೆ ಒಳಪಡಿಸಿದಾಗ ಸಿಕ್ಕ ಮಾಹಿತಿಯಂತೆ ಆರೋಪಿ ತಾರೀಕ್ ಬಂಧನ ನಡೆದಿದೆ. ತಾರಿಕ್ ಮಿರ್‌‌ ವಿವಿಧ ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವಲ್ಲಿ ಒಳಗೊಂಡಿದ್ದನು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಆರೋಪಿ ತಾರಿಕ್‌ ಕಾಶ್ಮೀರದಲ್ಲಿ ಉಗ್ರಗಾಮಿಗಳಿಗೆ ಶಸ್ತ್ರಾಸ್ತ್ರ ತಲುಪಿಸುವ ಮಧ್ಯವರ್ತಿಯಾಗಿದ್ದನೆಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿದ ಅಧಿಕಾಗಳು ಆರು ದಿನಗಳ ಕಸ್ಟಡಿಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ.

ದೇವಿಂದರ್ ಸಿಂಗ್ ಬಂಧನ ಪ್ರಕರಣದಲ್ಲಿ ಆತ ನೇರವಾಗಿ ಭಾಗಿಯಾಗದಿದ್ದರೂ ಹಿಜ್ಬುಲ್ ಮುಜಾಹಿದ್ದೀನ್‌ ಸೇರಿದಂತೆ ಹಲವು ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎಂದು ಎನ್‌ಐಎ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ತಾರಿಕ್‌ ಮಿರ್ ಹಿಜ್ಬುಲ್‌ ನೆಟ್‌ವರ್ಕ್‌ನಲ್ಲಿ ಭಾಗಿಯಾಗಿದ್ದಾನೆ ಎಂದು ಸೂಚಿಸಲು ಎನ್‌ಐಎ ‘ಬಲವಾದ ಲಿಂಕ್‌ಗಳನ್ನು’ ಕಂಡುಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

2011 ರಲ್ಲಿ, ತಾರಿಕ್‌‌ ಮಿರ್‌‌ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು. 2014ರ ವಿಧಾನಸಭೆ ಚುನಾವಣೆಯಲ್ಲಿ ವಾಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದನು.

ಸಂಸತ್ ದಾಳಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಅಫ್ಜಲ್ ಗುರುವನ್ನು ಬಂಧಿಸಿದವರು ಎಂದು ಹೇಳಲಾಗುತ್ತಿರುವ ಉನ್ನತ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ನನ್ನು ಜನವರಿಯಲ್ಲಿ ಉಗ್ರರೊಂದಿಗೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ಹಿಜ್ಬುಲ್ ಮುಜಾಹಿದ್ದೀನ್‌ನ ಸಂಘಟನೆಯ ಉಗ್ರಗಾಮಿಗಳೊಂದಿಗೆ ದೇವಿಂದರ್‌ ಸಿಂಗ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದನು.  2018 ರಲ್ಲಿ, ಅವರು ಶೌರ್ಯಕ್ಕಾಗಿ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...