HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...