HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...