HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...