HomeಮುಖಪುಟJammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ...

Jammu and Kashmir Assembly Elections 2024 | ಸೋತರೂ ಗೆದ್ದ ಬಿಜೆಪಿ; ಗೆದ್ದರೂ ಸೋತ ಕಾಂಗ್ರೆಸ್; ಪಾರಮ್ಯ ಮೆರೆದ ಎನ್‌ಸಿ!

- Advertisement -
- Advertisement -

ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ. ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರ ಹಿಡಿದಿದ್ದು, ಜಮ್ಮುಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ), ಕಾಂಗ್ರೆಸ್ ಮತ್ತು ಸಿಪಿಐ(ಎಂ) ಮೈತ್ರಿ ಗೆದ್ದಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಸೋತರೂ ಗೆದ್ದ BJP Jammu and Kashmir Assembly Elections 2024

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಎನ್‌ಸಿ ತನ್ನ ಪ್ರಾಬಲ್ಯ ಮರೆದಿದ್ದು, ಬಿಜೆಪಿಗೆ ಸೆಡ್ಡು ಹೊಡೆದಿದೆ. ಎನ್‌ಸಿ ನೇತೃತ್ವದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಜೊತೆಗಿನ ಮೈತ್ರಿ ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡಿದೆ. ಎನ್‌ಸಿ ಸ್ಪರ್ಧಿಸಿದ್ದ 56 ಸ್ಥಾನಗಳಲ್ಲಿ 42 ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಅದಾಗ್ಯೂ, ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. ಮೈತ್ರಿಯ ಮತ್ತೊಂದು ಪಕ್ಷವಾದ ಸಿಪಿಐ(ಎಂ) ತನಗೆ ನೀಡಿದ ಒಂದು ಕ್ಷೇತ್ರವನ್ನು ಅನಾಯಸವಾಗಿ ಗೆದ್ದುಕೊಂಡಿದೆ.

ಈ ನಡುವೆ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷವಾಗಿರುವ ಎಎಪಿ ಜಮ್ಮು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಖಾತೆ ತೆರೆದಿದೆ. ಒಟ್ಟು 7 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎಎಪಿ 1 ಸ್ಥಾನವನ್ನು ವಶಪಡಿಸಿಕೊಂಡಿದೆ. ಈ ಮೂಲಕ ಪಕ್ಷವೂ 5ನೇ ರಾಜ್ಯದಲ್ಲಿ ತನ್ನ ಖಾತೆ ತೆರೆದಿದೆ.ಸೋತರೂ ಗೆದ್ದ BJP

ಅದಾಗ್ಯೂ, ರಾಜ್ಯದ ಈ ಹಿಂದಿನ ಆಡಳಿತ ಪಕ್ಷವಾಗಿದ್ದ ಪಿಡಿಪಿ ತೀವ್ರ ಮುಖಭಂಗಕ್ಕೊಳಗಾಗಿದ್ದು 80 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 3 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿದೆ. ಇದರ ಜೊತೆಗೆ ಜೆಕೆಪಿಎಫ್‌ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 1 ಕ್ಷೇತ್ರದಲ್ಲಿ ಗೆಲುವು ಕಂಡಿದ್ದು, ರಾಜ್ಯದ 7 ಕ್ಷೇತ್ರಗಳಲ್ಲಿ ಪಕ್ಷೇತರರು ವಿಜಯಿಯಾಗಿದ್ದಾರೆ.

ಸೋತರೂ ಬಲ ಹೆಚ್ಚಿಸಿಕೊಂಡ ಬಿಜೆಪಿ, ಗೆದ್ದರೂ ಸೋತ ಕಾಂಗ್ರೆಸ್; ಪ್ರಾಬಲ್ಯ ಮೆರೆದ ಎನ್‌ಸಿ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಒಡೆದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಲ್ಲಿ ಬಿಜೆಪಿ ಎಡವಿ ಬಿದ್ದಿದೆ. ಆದರೂ ತನ್ನ ಬಲವನ್ನು ಹೆಚ್ಚಿಕೊಂಡಿರುವ ಬಿಜೆಪಿ ರಾಜ್ಯದ 2ನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 10 ವರ್ಷಗಳ ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಜಮ್ಮುಕಾಶ್ಮೀರ ಪ್ರಾಂತ್ಯದ 90 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 4 ಸ್ಥಾನಗಳನ್ನು ಹೆಚ್ಚಿಸಿಕೊಂಡಿವೆ.

ಇದನ್ನೂಓದಿ: ಭಾರೀ GST ವಂಚನೆ | ದೇಶದಾದ್ಯಂತ 200 ಕ್ಕೂ ಹೆಚ್ಚು ನಕಲಿ ಸಂಸ್ಥೆಗಳು ಭಾಗಿ!

ಕಾಂಗ್ರೆಸ್ ತಾನು ಸ್ಪರ್ಧಿಸಿದ್ದ 39 ಕ್ಷೇತ್ರಗಳಲ್ಲಿ ಕೇವಲ 6 ಕ್ಷೇತ್ರಗಳನ್ನು ಮಾತ್ರ ಗೆದ್ದು ತೀರಾ ಕಳಪೆ ಪ್ರದರ್ಶನ ನೀಡಿದೆ. 2014ರಲ್ಲಿ ಈ ಪ್ರಾಂತ್ಯದಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ.

ರಾಜ್ಯದ ಅತಿ ದೊಡ್ಡ ಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್‌(ಎನ್‌ಸಿ) ರಾಜ್ಯದ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 90 ವಿಧಾನಸಭಾ ಸ್ಥಾನಗಳಿರುವ ಜಮ್ಮು ಕಾಶ್ಮೀರದಲ್ಲಿ 42ರನ್ನು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 2014ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಸಿ 15 ಸ್ಥಾನಗಳನ್ನಷ್ಟೆ ಗೆದ್ದುಕೊಂಡಿತ್ತು. ಈ ಬಾರಿ ಅದು ಹೆಚ್ಚುವರಿಯಾಗಿ 27 ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿದೆ.

ರಾಜ್ಯದ ಈ ಹಿಂದಿನ ಆಡಳಿತರೂಢ ಪಕ್ಷವಾಗಿದ್ದ ಪಿಡಿಪಿ 28 ಕ್ಷೇತ್ರಗಳಿಂದ 3ಕ್ಕೆ ಇಳಿದಿದೆ. ಈ ಹಿಂದೆ 2 ಕ್ಷೇತ್ರಗಳನ್ನು ಹೊಂದಿದ್ದ ಜೆಪಿಸಿ ಸೊನ್ನೆಗೆ ಇಳಿದಿದ್ದು, ಜೆಕೆಪಿಎಫ್‌ 1 ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಹಾಗೆಯೆ ಉಳಿಸಿಕೊಂಡಿದೆ. ಆದರೆ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಿಂದ 7ಕ್ಕೆ ಏರಿಕೆಯಾಗಿದ್ದಾರೆ.ಸೋತರೂ ಗೆದ್ದ BJP

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...